Homeಕರ್ನಾಟಕಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

ಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

2017 ರ ವರೆಗೂ ಅತ್ಯಂತ ಸುಂದರವಾಗಿದ್ದ ಗ್ರಾಮವೂ ಬಿಬಿಎಂಪಿ ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

- Advertisement -
- Advertisement -

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿಗರ 6,000 ಟನ್‌ಗಿಂತಲೂ ಹೆಚ್ಚಿರುವ ದೈನದಿಂನ ತ್ಯಾಜ್ಯದ ದುರ್ವಾಸನೆಯನ್ನು ನೆರೆಯ ಹಳ್ಳಿಗಳಾದ ಮಂಡೂರು, ಮಾವಲ್ಲಿಪುರ, ಬೆಲ್ಲಹಳ್ಳಿ ಮುಂತಾದ ಹಳ್ಳಿಯ ನಿವಾಸಿಗಳು ಅನಿವಾರ್ಯವಾಗಿ ಸಹಿಸುವಂತಾಗಿದೆ.

2017 ರವರೆಗೂ ಅತ್ಯಂತ ಸುಂದರವಾಗಿದ್ದ ಮಂಡೂರು ಗ್ರಾಮವೂ ಬಿಬಿಎಂಪಿ ಇದನ್ನು ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎಂದು ಹೇಳುವ ಸಿಲ್ಲಾವಲಿ, ಪ್ರತಿದಿನ ನೂರಾರು ಟ್ರಕ್‌ಗಳು ​​ಈ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ರೋಗಗಳು ಬರುತ್ತಿದೆ ಎಂದು ಹೇಳುತ್ತಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಯಾರೂ ಇಲ್ಲದ ಬಂಜರು ಭೂಮಿಯಲ್ಲಿ ತ್ಯಾಜ್ಯವನ್ನು ಹಾಕಬೇಕು ಎಂದು ಹೇಳುತ್ತದೆ. ತ್ಯಾಜ್ಯ ಹಾಕಲು ದೊಡ್ಡ ಜಾಗ ಅಗತ್ಯವಿದೆಯಲ್ಲದೆ, ರೋಗಕಾರಕಗಳು, ನೊಣಗಳು ಅಲ್ಲಿ ಉತ್ಪತ್ತಿಯಾಗುವುದಲ್ಲದೆ, ಅದು ಹಸಿರುಮನೆ ಅನಿಲಗಳ ಉತ್ಪಾದನೆಗೆ ಸಹಕಾರಿಯಾಗುತ್ತದೆ ಹಾಗೂ ಬೆಂಕಿಯ ಅಪಾಯ ಕೂಡಾ ಉಂಟು ಮಾಡುತ್ತದೆ.

ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಮಾರ್ಗಸೂಚಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿ ತಾಣವು ಅಧಿಸೂಚಿತ ಜನವಸತಿ ಪ್ರದೇಶದಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕು ಮತ್ತು ತಮ್ಮ ಗಡಿಯ ಸುತ್ತ 500 ಮೀಟರ್ ವಲಯವನ್ನು ‘ಅಭಿವೃದ್ಧಿಯಿಲ್ಲದ ಬಫರ್ ವಲಯ’ ಎಂದು ಘೋಷಿಸಬೇಕು ಎಂದು ಹೇಳುತ್ತದೆ.

2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ತೀರ್ಮಾನಿಸಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ತಾಣಗಳು ಬೆಂಗಳೂರಿನ ಬಫರ್ ವಲಯಗಳ ಒಳಗೆ ಇವೆ ಮತ್ತು ಆ ಪ್ರದೇಶಗಳ ಜನರು ಎದುರಿಸುತ್ತಿರುವ ದುರ್ವಸನೆಯ ರಗಳೆಯ ಬಗ್ಗೆ ದೂರುಗಳಿವೆ.

ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ತ್ಯಾಜ್ಯ ವಿಲೇವಾರಿ ತಾಣಗಳು ಬಫರ್ ವಲಯದೊಳಗೆ ಇರಬಾರದು ಎಂದು ಕೆಎಸ್‌ಪಿಸಿಬಿ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು ಆದರೆ ಬಿಬಿಎಂಪಿ ಇದಕ್ಕಾಗಿ ಯಾವುದೇ ಕ್ರಮಗಳನ್ನು ಇದುವರೆಗೂ ತೆಗೆದುಕೊಂಡಿಲ್ಲ.

ವಿಶ್ವಬ್ಯಾಂಕ್ ಅಧ್ಯಯನವೊಂದರ ಪ್ರಕಾರ, 90% ಕ್ಕಿಂತಲೂ ಹೆಚ್ಚು ತ್ಯಾಜ್ಯವನ್ನು ಅನಿಯಂತ್ರಿತ ಡಂಪ್‌ಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಅಥವಾ ಭಾರತದಂತಹ ದೇಶಗಳಲ್ಲಿ ಬಹಿರಂಗವಾಗಿ ಸುಡಲಾಗುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕಿಯಾದ ಪ್ರೊ.ನಂದಿನಿ ಎನ್ ಅವರು ಹೇಳುವ ಪ್ರಕಾರ, ಈ ತ್ಯಾಜ್ಯದ ತಾಣಗಳು ಇ. ಕೋಲಿ ಹಾಗೂ ಫೆಕಲ್ ಸ್ಟ್ರೆಪ್ಟೋಕೊಕಿ (ಬಯೋ-ಏರೋಸಾಲ್) ನಂತಹ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುತ್ತವೆ. ಇದು ಗಾಳಿಯಿಂದ ಹತ್ತಿರದಲ್ಲಿ ವಾಸಿಸುತ್ತಿರುವ ಪ್ರದೇಶಕ್ಕೆ ಹರಡುತ್ತದೆ. ಈ ಬಯೋಎರೋಸೋಲ್‌ಗಳು ಒಡ್ಡಿಕೊಳ್ಳುವುದರಿಂದ ವೈರಸ್‌ಗಳು, ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಆಸ್ತಮಾ, ಅಲರ್ಜಿಕ್ ರಿನಿಟಿಸ್ ಮತ್ತು ಕ್ಯಾನ್ಸರ್ ನಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳುತ್ತಾರೆ.

ಮೆಡಿಕಲ್ ತ್ಯಾಜ್ಯದ ಕಳಪೆ ನಿರ್ವಹಣೆಯು ಆರೋಗ್ಯ ಕಾರ್ಯಕರ್ತರು, ತ್ಯಾಜ್ಯ ನಿರ್ವಹಿಸುವವರು, ರೋಗಿಗಳು ಮತ್ತು ಸಮುದಾಯವನ್ನು ಸೋಂಕಿಗೆ ಒಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳುತ್ತದೆ.

ಲೇಕ್‌ಸೈಡ್ ಸೆಂಟರ್ ಫಾರ್ ಹೆಲ್ತ್ ಪ್ರಮೋಷನ್‌ನ ಮಕ್ಕಳ ಶ್ವಾಸಕೋಶಶಾಸ್ತ್ರಜ್ಞ ಡಾ.ಎಚ್. ​​ಪರಮೇಶ್ ಅವರ ಪ್ರಕಾರ, ಮಾಲಿನ್ಯಕಾರಕಗಳಾದ ಮೀಥೇನ್, ಸಾರಜನಕ, ಇಂಗಾಲ ಮತ್ತು ಡಯಾಕ್ಸಿನ್‌ಗಳು ಆಸ್ತಮಾ, ಚರ್ಮರೋಗ ಮತ್ತು ಬ್ಲಡ್ಡ‍ರ್‌ ಕ್ಯಾನ್ಸರ್ ನಂತಹ ಉಸಿರಾಟದ ತೊಂದರೆ ಹಾಗೂ ಸಂತಾನೋತ್ಪತ್ತಿ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ  ಎಂದು ಹೇಳುತ್ತಾರೆ.

ನಗರ ತ್ಯಾಜ್ಯದ ಸುಧಾರಿತ ಸಂಗ್ರಹಣೆ, ನಿರ್ವಹಣೆ ಮತ್ತು ವಿಲೇವಾರಿಯು ಹವಾಮಾನ ಮತ್ತು ಆರೋಗ್ಯ ಎರಡಕ್ಕೂ ಉಪಯುಕ್ತವಾದ ಪ್ರಮುಖ ತಂತ್ರವಾಗಿದೆ. ಮೀಥೇನ್ ಹೊರಸೂಸುವಿಕೆಯನ್ನು ಒಳಚರಂಡಿ, ಜಾನುವಾರು ಗೊಬ್ಬರ ಮತ್ತು ಘನತ್ಯಾಜ್ಯದಿಂದ ಪಡೆದು ಜೈವಿಕ ಅನಿಲವಾಗಿ ಬಳಸಬಹುದು ಎಂದು ಅಧ್ಯಯನ ಹೇಳಿದೆ.

ಭಾರತದ ಪರಿಸರ ಭದ್ರತಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಡಾ.ಯೆಲ್ಲಪ ರೆಡ್ಡಿ, ತ್ಯಾಜ್ಯ ಉತ್ಪಾದನೆಯೇ ಪ್ರಮುಖ ಸಮಸ್ಯೆ ಎಂದು ಪ್ರಸ್ತಾಪಿಸಿದ ಅವರು ತ್ಯಾಜ್ಯವನ್ನು ಹೆಚ್ಚಿಸುವ ಪ್ಲಾಸ್ಟಿಕನು ಕಡಿಮೆ ಬಳಸುವಂತೆ ಹಾಗೂ ಜೈವಿಕ ವಿಘಟನೀಯ ವಸ್ತುಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು. ವಿತರಣಾ ಕಂಪನಿಗಳು ಸಹ ತಮ್ಮ ಪ್ಯಾಕೇಜಿಂಗ್ ಅನ್ನು ಜೈವಿಕ ವಿಘಟನೀಯವಾಗಿಸಬೇಕು ಎಂದರು.

ಕೃಪೆ: ಡೆಕ್ಕನ್ ಹೆರಾಲ್ಡ್


ಓದಿ: ಸಿಲಿಕಾನ್ ಸಿಟಿಯಲ್ಲಿ ಡಿಜಿಟಲ್ ಡಿವೈಡ್; ಬೆಂಗಳೂರು ಭೇಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...