Homeಕರ್ನಾಟಕಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

ಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

2017 ರ ವರೆಗೂ ಅತ್ಯಂತ ಸುಂದರವಾಗಿದ್ದ ಗ್ರಾಮವೂ ಬಿಬಿಎಂಪಿ ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

- Advertisement -
- Advertisement -

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿಗರ 6,000 ಟನ್‌ಗಿಂತಲೂ ಹೆಚ್ಚಿರುವ ದೈನದಿಂನ ತ್ಯಾಜ್ಯದ ದುರ್ವಾಸನೆಯನ್ನು ನೆರೆಯ ಹಳ್ಳಿಗಳಾದ ಮಂಡೂರು, ಮಾವಲ್ಲಿಪುರ, ಬೆಲ್ಲಹಳ್ಳಿ ಮುಂತಾದ ಹಳ್ಳಿಯ ನಿವಾಸಿಗಳು ಅನಿವಾರ್ಯವಾಗಿ ಸಹಿಸುವಂತಾಗಿದೆ.

2017 ರವರೆಗೂ ಅತ್ಯಂತ ಸುಂದರವಾಗಿದ್ದ ಮಂಡೂರು ಗ್ರಾಮವೂ ಬಿಬಿಎಂಪಿ ಇದನ್ನು ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎಂದು ಹೇಳುವ ಸಿಲ್ಲಾವಲಿ, ಪ್ರತಿದಿನ ನೂರಾರು ಟ್ರಕ್‌ಗಳು ​​ಈ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ರೋಗಗಳು ಬರುತ್ತಿದೆ ಎಂದು ಹೇಳುತ್ತಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಯಾರೂ ಇಲ್ಲದ ಬಂಜರು ಭೂಮಿಯಲ್ಲಿ ತ್ಯಾಜ್ಯವನ್ನು ಹಾಕಬೇಕು ಎಂದು ಹೇಳುತ್ತದೆ. ತ್ಯಾಜ್ಯ ಹಾಕಲು ದೊಡ್ಡ ಜಾಗ ಅಗತ್ಯವಿದೆಯಲ್ಲದೆ, ರೋಗಕಾರಕಗಳು, ನೊಣಗಳು ಅಲ್ಲಿ ಉತ್ಪತ್ತಿಯಾಗುವುದಲ್ಲದೆ, ಅದು ಹಸಿರುಮನೆ ಅನಿಲಗಳ ಉತ್ಪಾದನೆಗೆ ಸಹಕಾರಿಯಾಗುತ್ತದೆ ಹಾಗೂ ಬೆಂಕಿಯ ಅಪಾಯ ಕೂಡಾ ಉಂಟು ಮಾಡುತ್ತದೆ.

ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಮಾರ್ಗಸೂಚಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿ ತಾಣವು ಅಧಿಸೂಚಿತ ಜನವಸತಿ ಪ್ರದೇಶದಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕು ಮತ್ತು ತಮ್ಮ ಗಡಿಯ ಸುತ್ತ 500 ಮೀಟರ್ ವಲಯವನ್ನು ‘ಅಭಿವೃದ್ಧಿಯಿಲ್ಲದ ಬಫರ್ ವಲಯ’ ಎಂದು ಘೋಷಿಸಬೇಕು ಎಂದು ಹೇಳುತ್ತದೆ.

2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ತೀರ್ಮಾನಿಸಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ತಾಣಗಳು ಬೆಂಗಳೂರಿನ ಬಫರ್ ವಲಯಗಳ ಒಳಗೆ ಇವೆ ಮತ್ತು ಆ ಪ್ರದೇಶಗಳ ಜನರು ಎದುರಿಸುತ್ತಿರುವ ದುರ್ವಸನೆಯ ರಗಳೆಯ ಬಗ್ಗೆ ದೂರುಗಳಿವೆ.

ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ತ್ಯಾಜ್ಯ ವಿಲೇವಾರಿ ತಾಣಗಳು ಬಫರ್ ವಲಯದೊಳಗೆ ಇರಬಾರದು ಎಂದು ಕೆಎಸ್‌ಪಿಸಿಬಿ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು ಆದರೆ ಬಿಬಿಎಂಪಿ ಇದಕ್ಕಾಗಿ ಯಾವುದೇ ಕ್ರಮಗಳನ್ನು ಇದುವರೆಗೂ ತೆಗೆದುಕೊಂಡಿಲ್ಲ.

ವಿಶ್ವಬ್ಯಾಂಕ್ ಅಧ್ಯಯನವೊಂದರ ಪ್ರಕಾರ, 90% ಕ್ಕಿಂತಲೂ ಹೆಚ್ಚು ತ್ಯಾಜ್ಯವನ್ನು ಅನಿಯಂತ್ರಿತ ಡಂಪ್‌ಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಅಥವಾ ಭಾರತದಂತಹ ದೇಶಗಳಲ್ಲಿ ಬಹಿರಂಗವಾಗಿ ಸುಡಲಾಗುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕಿಯಾದ ಪ್ರೊ.ನಂದಿನಿ ಎನ್ ಅವರು ಹೇಳುವ ಪ್ರಕಾರ, ಈ ತ್ಯಾಜ್ಯದ ತಾಣಗಳು ಇ. ಕೋಲಿ ಹಾಗೂ ಫೆಕಲ್ ಸ್ಟ್ರೆಪ್ಟೋಕೊಕಿ (ಬಯೋ-ಏರೋಸಾಲ್) ನಂತಹ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುತ್ತವೆ. ಇದು ಗಾಳಿಯಿಂದ ಹತ್ತಿರದಲ್ಲಿ ವಾಸಿಸುತ್ತಿರುವ ಪ್ರದೇಶಕ್ಕೆ ಹರಡುತ್ತದೆ. ಈ ಬಯೋಎರೋಸೋಲ್‌ಗಳು ಒಡ್ಡಿಕೊಳ್ಳುವುದರಿಂದ ವೈರಸ್‌ಗಳು, ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಆಸ್ತಮಾ, ಅಲರ್ಜಿಕ್ ರಿನಿಟಿಸ್ ಮತ್ತು ಕ್ಯಾನ್ಸರ್ ನಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳುತ್ತಾರೆ.

ಮೆಡಿಕಲ್ ತ್ಯಾಜ್ಯದ ಕಳಪೆ ನಿರ್ವಹಣೆಯು ಆರೋಗ್ಯ ಕಾರ್ಯಕರ್ತರು, ತ್ಯಾಜ್ಯ ನಿರ್ವಹಿಸುವವರು, ರೋಗಿಗಳು ಮತ್ತು ಸಮುದಾಯವನ್ನು ಸೋಂಕಿಗೆ ಒಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳುತ್ತದೆ.

ಲೇಕ್‌ಸೈಡ್ ಸೆಂಟರ್ ಫಾರ್ ಹೆಲ್ತ್ ಪ್ರಮೋಷನ್‌ನ ಮಕ್ಕಳ ಶ್ವಾಸಕೋಶಶಾಸ್ತ್ರಜ್ಞ ಡಾ.ಎಚ್. ​​ಪರಮೇಶ್ ಅವರ ಪ್ರಕಾರ, ಮಾಲಿನ್ಯಕಾರಕಗಳಾದ ಮೀಥೇನ್, ಸಾರಜನಕ, ಇಂಗಾಲ ಮತ್ತು ಡಯಾಕ್ಸಿನ್‌ಗಳು ಆಸ್ತಮಾ, ಚರ್ಮರೋಗ ಮತ್ತು ಬ್ಲಡ್ಡ‍ರ್‌ ಕ್ಯಾನ್ಸರ್ ನಂತಹ ಉಸಿರಾಟದ ತೊಂದರೆ ಹಾಗೂ ಸಂತಾನೋತ್ಪತ್ತಿ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ  ಎಂದು ಹೇಳುತ್ತಾರೆ.

ನಗರ ತ್ಯಾಜ್ಯದ ಸುಧಾರಿತ ಸಂಗ್ರಹಣೆ, ನಿರ್ವಹಣೆ ಮತ್ತು ವಿಲೇವಾರಿಯು ಹವಾಮಾನ ಮತ್ತು ಆರೋಗ್ಯ ಎರಡಕ್ಕೂ ಉಪಯುಕ್ತವಾದ ಪ್ರಮುಖ ತಂತ್ರವಾಗಿದೆ. ಮೀಥೇನ್ ಹೊರಸೂಸುವಿಕೆಯನ್ನು ಒಳಚರಂಡಿ, ಜಾನುವಾರು ಗೊಬ್ಬರ ಮತ್ತು ಘನತ್ಯಾಜ್ಯದಿಂದ ಪಡೆದು ಜೈವಿಕ ಅನಿಲವಾಗಿ ಬಳಸಬಹುದು ಎಂದು ಅಧ್ಯಯನ ಹೇಳಿದೆ.

ಭಾರತದ ಪರಿಸರ ಭದ್ರತಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಡಾ.ಯೆಲ್ಲಪ ರೆಡ್ಡಿ, ತ್ಯಾಜ್ಯ ಉತ್ಪಾದನೆಯೇ ಪ್ರಮುಖ ಸಮಸ್ಯೆ ಎಂದು ಪ್ರಸ್ತಾಪಿಸಿದ ಅವರು ತ್ಯಾಜ್ಯವನ್ನು ಹೆಚ್ಚಿಸುವ ಪ್ಲಾಸ್ಟಿಕನು ಕಡಿಮೆ ಬಳಸುವಂತೆ ಹಾಗೂ ಜೈವಿಕ ವಿಘಟನೀಯ ವಸ್ತುಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು. ವಿತರಣಾ ಕಂಪನಿಗಳು ಸಹ ತಮ್ಮ ಪ್ಯಾಕೇಜಿಂಗ್ ಅನ್ನು ಜೈವಿಕ ವಿಘಟನೀಯವಾಗಿಸಬೇಕು ಎಂದರು.

ಕೃಪೆ: ಡೆಕ್ಕನ್ ಹೆರಾಲ್ಡ್


ಓದಿ: ಸಿಲಿಕಾನ್ ಸಿಟಿಯಲ್ಲಿ ಡಿಜಿಟಲ್ ಡಿವೈಡ್; ಬೆಂಗಳೂರು ಭೇಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...