Homeಕರ್ನಾಟಕಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

ಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

2017 ರ ವರೆಗೂ ಅತ್ಯಂತ ಸುಂದರವಾಗಿದ್ದ ಗ್ರಾಮವೂ ಬಿಬಿಎಂಪಿ ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

- Advertisement -
- Advertisement -

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿಗರ 6,000 ಟನ್‌ಗಿಂತಲೂ ಹೆಚ್ಚಿರುವ ದೈನದಿಂನ ತ್ಯಾಜ್ಯದ ದುರ್ವಾಸನೆಯನ್ನು ನೆರೆಯ ಹಳ್ಳಿಗಳಾದ ಮಂಡೂರು, ಮಾವಲ್ಲಿಪುರ, ಬೆಲ್ಲಹಳ್ಳಿ ಮುಂತಾದ ಹಳ್ಳಿಯ ನಿವಾಸಿಗಳು ಅನಿವಾರ್ಯವಾಗಿ ಸಹಿಸುವಂತಾಗಿದೆ.

2017 ರವರೆಗೂ ಅತ್ಯಂತ ಸುಂದರವಾಗಿದ್ದ ಮಂಡೂರು ಗ್ರಾಮವೂ ಬಿಬಿಎಂಪಿ ಇದನ್ನು ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎಂದು ಹೇಳುವ ಸಿಲ್ಲಾವಲಿ, ಪ್ರತಿದಿನ ನೂರಾರು ಟ್ರಕ್‌ಗಳು ​​ಈ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ರೋಗಗಳು ಬರುತ್ತಿದೆ ಎಂದು ಹೇಳುತ್ತಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಯಾರೂ ಇಲ್ಲದ ಬಂಜರು ಭೂಮಿಯಲ್ಲಿ ತ್ಯಾಜ್ಯವನ್ನು ಹಾಕಬೇಕು ಎಂದು ಹೇಳುತ್ತದೆ. ತ್ಯಾಜ್ಯ ಹಾಕಲು ದೊಡ್ಡ ಜಾಗ ಅಗತ್ಯವಿದೆಯಲ್ಲದೆ, ರೋಗಕಾರಕಗಳು, ನೊಣಗಳು ಅಲ್ಲಿ ಉತ್ಪತ್ತಿಯಾಗುವುದಲ್ಲದೆ, ಅದು ಹಸಿರುಮನೆ ಅನಿಲಗಳ ಉತ್ಪಾದನೆಗೆ ಸಹಕಾರಿಯಾಗುತ್ತದೆ ಹಾಗೂ ಬೆಂಕಿಯ ಅಪಾಯ ಕೂಡಾ ಉಂಟು ಮಾಡುತ್ತದೆ.

ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಮಾರ್ಗಸೂಚಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿ ತಾಣವು ಅಧಿಸೂಚಿತ ಜನವಸತಿ ಪ್ರದೇಶದಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕು ಮತ್ತು ತಮ್ಮ ಗಡಿಯ ಸುತ್ತ 500 ಮೀಟರ್ ವಲಯವನ್ನು ‘ಅಭಿವೃದ್ಧಿಯಿಲ್ಲದ ಬಫರ್ ವಲಯ’ ಎಂದು ಘೋಷಿಸಬೇಕು ಎಂದು ಹೇಳುತ್ತದೆ.

2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ತೀರ್ಮಾನಿಸಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ತಾಣಗಳು ಬೆಂಗಳೂರಿನ ಬಫರ್ ವಲಯಗಳ ಒಳಗೆ ಇವೆ ಮತ್ತು ಆ ಪ್ರದೇಶಗಳ ಜನರು ಎದುರಿಸುತ್ತಿರುವ ದುರ್ವಸನೆಯ ರಗಳೆಯ ಬಗ್ಗೆ ದೂರುಗಳಿವೆ.

ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ತ್ಯಾಜ್ಯ ವಿಲೇವಾರಿ ತಾಣಗಳು ಬಫರ್ ವಲಯದೊಳಗೆ ಇರಬಾರದು ಎಂದು ಕೆಎಸ್‌ಪಿಸಿಬಿ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು ಆದರೆ ಬಿಬಿಎಂಪಿ ಇದಕ್ಕಾಗಿ ಯಾವುದೇ ಕ್ರಮಗಳನ್ನು ಇದುವರೆಗೂ ತೆಗೆದುಕೊಂಡಿಲ್ಲ.

ವಿಶ್ವಬ್ಯಾಂಕ್ ಅಧ್ಯಯನವೊಂದರ ಪ್ರಕಾರ, 90% ಕ್ಕಿಂತಲೂ ಹೆಚ್ಚು ತ್ಯಾಜ್ಯವನ್ನು ಅನಿಯಂತ್ರಿತ ಡಂಪ್‌ಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಅಥವಾ ಭಾರತದಂತಹ ದೇಶಗಳಲ್ಲಿ ಬಹಿರಂಗವಾಗಿ ಸುಡಲಾಗುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕಿಯಾದ ಪ್ರೊ.ನಂದಿನಿ ಎನ್ ಅವರು ಹೇಳುವ ಪ್ರಕಾರ, ಈ ತ್ಯಾಜ್ಯದ ತಾಣಗಳು ಇ. ಕೋಲಿ ಹಾಗೂ ಫೆಕಲ್ ಸ್ಟ್ರೆಪ್ಟೋಕೊಕಿ (ಬಯೋ-ಏರೋಸಾಲ್) ನಂತಹ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುತ್ತವೆ. ಇದು ಗಾಳಿಯಿಂದ ಹತ್ತಿರದಲ್ಲಿ ವಾಸಿಸುತ್ತಿರುವ ಪ್ರದೇಶಕ್ಕೆ ಹರಡುತ್ತದೆ. ಈ ಬಯೋಎರೋಸೋಲ್‌ಗಳು ಒಡ್ಡಿಕೊಳ್ಳುವುದರಿಂದ ವೈರಸ್‌ಗಳು, ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಆಸ್ತಮಾ, ಅಲರ್ಜಿಕ್ ರಿನಿಟಿಸ್ ಮತ್ತು ಕ್ಯಾನ್ಸರ್ ನಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳುತ್ತಾರೆ.

ಮೆಡಿಕಲ್ ತ್ಯಾಜ್ಯದ ಕಳಪೆ ನಿರ್ವಹಣೆಯು ಆರೋಗ್ಯ ಕಾರ್ಯಕರ್ತರು, ತ್ಯಾಜ್ಯ ನಿರ್ವಹಿಸುವವರು, ರೋಗಿಗಳು ಮತ್ತು ಸಮುದಾಯವನ್ನು ಸೋಂಕಿಗೆ ಒಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳುತ್ತದೆ.

ಲೇಕ್‌ಸೈಡ್ ಸೆಂಟರ್ ಫಾರ್ ಹೆಲ್ತ್ ಪ್ರಮೋಷನ್‌ನ ಮಕ್ಕಳ ಶ್ವಾಸಕೋಶಶಾಸ್ತ್ರಜ್ಞ ಡಾ.ಎಚ್. ​​ಪರಮೇಶ್ ಅವರ ಪ್ರಕಾರ, ಮಾಲಿನ್ಯಕಾರಕಗಳಾದ ಮೀಥೇನ್, ಸಾರಜನಕ, ಇಂಗಾಲ ಮತ್ತು ಡಯಾಕ್ಸಿನ್‌ಗಳು ಆಸ್ತಮಾ, ಚರ್ಮರೋಗ ಮತ್ತು ಬ್ಲಡ್ಡ‍ರ್‌ ಕ್ಯಾನ್ಸರ್ ನಂತಹ ಉಸಿರಾಟದ ತೊಂದರೆ ಹಾಗೂ ಸಂತಾನೋತ್ಪತ್ತಿ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ  ಎಂದು ಹೇಳುತ್ತಾರೆ.

ನಗರ ತ್ಯಾಜ್ಯದ ಸುಧಾರಿತ ಸಂಗ್ರಹಣೆ, ನಿರ್ವಹಣೆ ಮತ್ತು ವಿಲೇವಾರಿಯು ಹವಾಮಾನ ಮತ್ತು ಆರೋಗ್ಯ ಎರಡಕ್ಕೂ ಉಪಯುಕ್ತವಾದ ಪ್ರಮುಖ ತಂತ್ರವಾಗಿದೆ. ಮೀಥೇನ್ ಹೊರಸೂಸುವಿಕೆಯನ್ನು ಒಳಚರಂಡಿ, ಜಾನುವಾರು ಗೊಬ್ಬರ ಮತ್ತು ಘನತ್ಯಾಜ್ಯದಿಂದ ಪಡೆದು ಜೈವಿಕ ಅನಿಲವಾಗಿ ಬಳಸಬಹುದು ಎಂದು ಅಧ್ಯಯನ ಹೇಳಿದೆ.

ಭಾರತದ ಪರಿಸರ ಭದ್ರತಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಡಾ.ಯೆಲ್ಲಪ ರೆಡ್ಡಿ, ತ್ಯಾಜ್ಯ ಉತ್ಪಾದನೆಯೇ ಪ್ರಮುಖ ಸಮಸ್ಯೆ ಎಂದು ಪ್ರಸ್ತಾಪಿಸಿದ ಅವರು ತ್ಯಾಜ್ಯವನ್ನು ಹೆಚ್ಚಿಸುವ ಪ್ಲಾಸ್ಟಿಕನು ಕಡಿಮೆ ಬಳಸುವಂತೆ ಹಾಗೂ ಜೈವಿಕ ವಿಘಟನೀಯ ವಸ್ತುಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು. ವಿತರಣಾ ಕಂಪನಿಗಳು ಸಹ ತಮ್ಮ ಪ್ಯಾಕೇಜಿಂಗ್ ಅನ್ನು ಜೈವಿಕ ವಿಘಟನೀಯವಾಗಿಸಬೇಕು ಎಂದರು.

ಕೃಪೆ: ಡೆಕ್ಕನ್ ಹೆರಾಲ್ಡ್


ಓದಿ: ಸಿಲಿಕಾನ್ ಸಿಟಿಯಲ್ಲಿ ಡಿಜಿಟಲ್ ಡಿವೈಡ್; ಬೆಂಗಳೂರು ಭೇಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...