Homeಕರ್ನಾಟಕಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

ಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

2017 ರ ವರೆಗೂ ಅತ್ಯಂತ ಸುಂದರವಾಗಿದ್ದ ಗ್ರಾಮವೂ ಬಿಬಿಎಂಪಿ ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

- Advertisement -
- Advertisement -

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿಗರ 6,000 ಟನ್‌ಗಿಂತಲೂ ಹೆಚ್ಚಿರುವ ದೈನದಿಂನ ತ್ಯಾಜ್ಯದ ದುರ್ವಾಸನೆಯನ್ನು ನೆರೆಯ ಹಳ್ಳಿಗಳಾದ ಮಂಡೂರು, ಮಾವಲ್ಲಿಪುರ, ಬೆಲ್ಲಹಳ್ಳಿ ಮುಂತಾದ ಹಳ್ಳಿಯ ನಿವಾಸಿಗಳು ಅನಿವಾರ್ಯವಾಗಿ ಸಹಿಸುವಂತಾಗಿದೆ.

2017 ರವರೆಗೂ ಅತ್ಯಂತ ಸುಂದರವಾಗಿದ್ದ ಮಂಡೂರು ಗ್ರಾಮವೂ ಬಿಬಿಎಂಪಿ ಇದನ್ನು ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎಂದು ಹೇಳುವ ಸಿಲ್ಲಾವಲಿ, ಪ್ರತಿದಿನ ನೂರಾರು ಟ್ರಕ್‌ಗಳು ​​ಈ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ರೋಗಗಳು ಬರುತ್ತಿದೆ ಎಂದು ಹೇಳುತ್ತಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಯಾರೂ ಇಲ್ಲದ ಬಂಜರು ಭೂಮಿಯಲ್ಲಿ ತ್ಯಾಜ್ಯವನ್ನು ಹಾಕಬೇಕು ಎಂದು ಹೇಳುತ್ತದೆ. ತ್ಯಾಜ್ಯ ಹಾಕಲು ದೊಡ್ಡ ಜಾಗ ಅಗತ್ಯವಿದೆಯಲ್ಲದೆ, ರೋಗಕಾರಕಗಳು, ನೊಣಗಳು ಅಲ್ಲಿ ಉತ್ಪತ್ತಿಯಾಗುವುದಲ್ಲದೆ, ಅದು ಹಸಿರುಮನೆ ಅನಿಲಗಳ ಉತ್ಪಾದನೆಗೆ ಸಹಕಾರಿಯಾಗುತ್ತದೆ ಹಾಗೂ ಬೆಂಕಿಯ ಅಪಾಯ ಕೂಡಾ ಉಂಟು ಮಾಡುತ್ತದೆ.

ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಮಾರ್ಗಸೂಚಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿ ತಾಣವು ಅಧಿಸೂಚಿತ ಜನವಸತಿ ಪ್ರದೇಶದಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕು ಮತ್ತು ತಮ್ಮ ಗಡಿಯ ಸುತ್ತ 500 ಮೀಟರ್ ವಲಯವನ್ನು ‘ಅಭಿವೃದ್ಧಿಯಿಲ್ಲದ ಬಫರ್ ವಲಯ’ ಎಂದು ಘೋಷಿಸಬೇಕು ಎಂದು ಹೇಳುತ್ತದೆ.

2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ತೀರ್ಮಾನಿಸಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ತಾಣಗಳು ಬೆಂಗಳೂರಿನ ಬಫರ್ ವಲಯಗಳ ಒಳಗೆ ಇವೆ ಮತ್ತು ಆ ಪ್ರದೇಶಗಳ ಜನರು ಎದುರಿಸುತ್ತಿರುವ ದುರ್ವಸನೆಯ ರಗಳೆಯ ಬಗ್ಗೆ ದೂರುಗಳಿವೆ.

ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ತ್ಯಾಜ್ಯ ವಿಲೇವಾರಿ ತಾಣಗಳು ಬಫರ್ ವಲಯದೊಳಗೆ ಇರಬಾರದು ಎಂದು ಕೆಎಸ್‌ಪಿಸಿಬಿ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು ಆದರೆ ಬಿಬಿಎಂಪಿ ಇದಕ್ಕಾಗಿ ಯಾವುದೇ ಕ್ರಮಗಳನ್ನು ಇದುವರೆಗೂ ತೆಗೆದುಕೊಂಡಿಲ್ಲ.

ವಿಶ್ವಬ್ಯಾಂಕ್ ಅಧ್ಯಯನವೊಂದರ ಪ್ರಕಾರ, 90% ಕ್ಕಿಂತಲೂ ಹೆಚ್ಚು ತ್ಯಾಜ್ಯವನ್ನು ಅನಿಯಂತ್ರಿತ ಡಂಪ್‌ಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಅಥವಾ ಭಾರತದಂತಹ ದೇಶಗಳಲ್ಲಿ ಬಹಿರಂಗವಾಗಿ ಸುಡಲಾಗುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕಿಯಾದ ಪ್ರೊ.ನಂದಿನಿ ಎನ್ ಅವರು ಹೇಳುವ ಪ್ರಕಾರ, ಈ ತ್ಯಾಜ್ಯದ ತಾಣಗಳು ಇ. ಕೋಲಿ ಹಾಗೂ ಫೆಕಲ್ ಸ್ಟ್ರೆಪ್ಟೋಕೊಕಿ (ಬಯೋ-ಏರೋಸಾಲ್) ನಂತಹ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುತ್ತವೆ. ಇದು ಗಾಳಿಯಿಂದ ಹತ್ತಿರದಲ್ಲಿ ವಾಸಿಸುತ್ತಿರುವ ಪ್ರದೇಶಕ್ಕೆ ಹರಡುತ್ತದೆ. ಈ ಬಯೋಎರೋಸೋಲ್‌ಗಳು ಒಡ್ಡಿಕೊಳ್ಳುವುದರಿಂದ ವೈರಸ್‌ಗಳು, ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಆಸ್ತಮಾ, ಅಲರ್ಜಿಕ್ ರಿನಿಟಿಸ್ ಮತ್ತು ಕ್ಯಾನ್ಸರ್ ನಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳುತ್ತಾರೆ.

ಮೆಡಿಕಲ್ ತ್ಯಾಜ್ಯದ ಕಳಪೆ ನಿರ್ವಹಣೆಯು ಆರೋಗ್ಯ ಕಾರ್ಯಕರ್ತರು, ತ್ಯಾಜ್ಯ ನಿರ್ವಹಿಸುವವರು, ರೋಗಿಗಳು ಮತ್ತು ಸಮುದಾಯವನ್ನು ಸೋಂಕಿಗೆ ಒಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳುತ್ತದೆ.

ಲೇಕ್‌ಸೈಡ್ ಸೆಂಟರ್ ಫಾರ್ ಹೆಲ್ತ್ ಪ್ರಮೋಷನ್‌ನ ಮಕ್ಕಳ ಶ್ವಾಸಕೋಶಶಾಸ್ತ್ರಜ್ಞ ಡಾ.ಎಚ್. ​​ಪರಮೇಶ್ ಅವರ ಪ್ರಕಾರ, ಮಾಲಿನ್ಯಕಾರಕಗಳಾದ ಮೀಥೇನ್, ಸಾರಜನಕ, ಇಂಗಾಲ ಮತ್ತು ಡಯಾಕ್ಸಿನ್‌ಗಳು ಆಸ್ತಮಾ, ಚರ್ಮರೋಗ ಮತ್ತು ಬ್ಲಡ್ಡ‍ರ್‌ ಕ್ಯಾನ್ಸರ್ ನಂತಹ ಉಸಿರಾಟದ ತೊಂದರೆ ಹಾಗೂ ಸಂತಾನೋತ್ಪತ್ತಿ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ  ಎಂದು ಹೇಳುತ್ತಾರೆ.

ನಗರ ತ್ಯಾಜ್ಯದ ಸುಧಾರಿತ ಸಂಗ್ರಹಣೆ, ನಿರ್ವಹಣೆ ಮತ್ತು ವಿಲೇವಾರಿಯು ಹವಾಮಾನ ಮತ್ತು ಆರೋಗ್ಯ ಎರಡಕ್ಕೂ ಉಪಯುಕ್ತವಾದ ಪ್ರಮುಖ ತಂತ್ರವಾಗಿದೆ. ಮೀಥೇನ್ ಹೊರಸೂಸುವಿಕೆಯನ್ನು ಒಳಚರಂಡಿ, ಜಾನುವಾರು ಗೊಬ್ಬರ ಮತ್ತು ಘನತ್ಯಾಜ್ಯದಿಂದ ಪಡೆದು ಜೈವಿಕ ಅನಿಲವಾಗಿ ಬಳಸಬಹುದು ಎಂದು ಅಧ್ಯಯನ ಹೇಳಿದೆ.

ಭಾರತದ ಪರಿಸರ ಭದ್ರತಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಡಾ.ಯೆಲ್ಲಪ ರೆಡ್ಡಿ, ತ್ಯಾಜ್ಯ ಉತ್ಪಾದನೆಯೇ ಪ್ರಮುಖ ಸಮಸ್ಯೆ ಎಂದು ಪ್ರಸ್ತಾಪಿಸಿದ ಅವರು ತ್ಯಾಜ್ಯವನ್ನು ಹೆಚ್ಚಿಸುವ ಪ್ಲಾಸ್ಟಿಕನು ಕಡಿಮೆ ಬಳಸುವಂತೆ ಹಾಗೂ ಜೈವಿಕ ವಿಘಟನೀಯ ವಸ್ತುಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು. ವಿತರಣಾ ಕಂಪನಿಗಳು ಸಹ ತಮ್ಮ ಪ್ಯಾಕೇಜಿಂಗ್ ಅನ್ನು ಜೈವಿಕ ವಿಘಟನೀಯವಾಗಿಸಬೇಕು ಎಂದರು.

ಕೃಪೆ: ಡೆಕ್ಕನ್ ಹೆರಾಲ್ಡ್


ಓದಿ: ಸಿಲಿಕಾನ್ ಸಿಟಿಯಲ್ಲಿ ಡಿಜಿಟಲ್ ಡಿವೈಡ್; ಬೆಂಗಳೂರು ಭೇಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...