Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...