Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...