Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...