Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....