Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...