Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...