Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...