Homeಕರ್ನಾಟಕನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

ನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

- Advertisement -
- Advertisement -

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ-ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಉಡುಪಿ ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ನಿವಾಸಿ ಹಫೀಝ್ ಮುಹಮ್ಮದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಫೀಝ್ ತನ್ನ ಫೇಸ್ಬುಕ್ ಖಾತೆಯಲ್ಲಿ ನೇಜಾರಿನಲ್ಲಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಪೋಸ್ಟ್‌ ಮಾಡಿದ್ದು, ಅದರಲ್ಲಿ ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಬರೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಹರಿಬಿಟ್ಟು ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ಆರೋಪಿಸಿ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.

ಕೊಲೆ ಕೃತ್ಯದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ತೃಪ್ತಿ ಲೇಔಟ್‌ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35)ಯನ್ನು ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಇದನ್ನು ಓದಿ; ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...