Homeಕರ್ನಾಟಕನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

ನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

- Advertisement -
- Advertisement -

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ-ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಉಡುಪಿ ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ನಿವಾಸಿ ಹಫೀಝ್ ಮುಹಮ್ಮದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಫೀಝ್ ತನ್ನ ಫೇಸ್ಬುಕ್ ಖಾತೆಯಲ್ಲಿ ನೇಜಾರಿನಲ್ಲಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಪೋಸ್ಟ್‌ ಮಾಡಿದ್ದು, ಅದರಲ್ಲಿ ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಬರೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಹರಿಬಿಟ್ಟು ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ಆರೋಪಿಸಿ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.

ಕೊಲೆ ಕೃತ್ಯದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ತೃಪ್ತಿ ಲೇಔಟ್‌ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35)ಯನ್ನು ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಇದನ್ನು ಓದಿ; ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...