Homeಕರ್ನಾಟಕನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

ನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

- Advertisement -
- Advertisement -

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ-ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಉಡುಪಿ ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ನಿವಾಸಿ ಹಫೀಝ್ ಮುಹಮ್ಮದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಫೀಝ್ ತನ್ನ ಫೇಸ್ಬುಕ್ ಖಾತೆಯಲ್ಲಿ ನೇಜಾರಿನಲ್ಲಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಪೋಸ್ಟ್‌ ಮಾಡಿದ್ದು, ಅದರಲ್ಲಿ ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಬರೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಹರಿಬಿಟ್ಟು ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ಆರೋಪಿಸಿ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.

ಕೊಲೆ ಕೃತ್ಯದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ತೃಪ್ತಿ ಲೇಔಟ್‌ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35)ಯನ್ನು ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಇದನ್ನು ಓದಿ; ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...