Homeಕರ್ನಾಟಕನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

ನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

- Advertisement -
- Advertisement -

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ-ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಉಡುಪಿ ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ನಿವಾಸಿ ಹಫೀಝ್ ಮುಹಮ್ಮದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಫೀಝ್ ತನ್ನ ಫೇಸ್ಬುಕ್ ಖಾತೆಯಲ್ಲಿ ನೇಜಾರಿನಲ್ಲಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಪೋಸ್ಟ್‌ ಮಾಡಿದ್ದು, ಅದರಲ್ಲಿ ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಬರೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಹರಿಬಿಟ್ಟು ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ಆರೋಪಿಸಿ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.

ಕೊಲೆ ಕೃತ್ಯದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ತೃಪ್ತಿ ಲೇಔಟ್‌ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35)ಯನ್ನು ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಇದನ್ನು ಓದಿ; ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...