Homeಮುಖಪುಟ'ನೆಲದ ಪದ': ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

‘ನೆಲದ ಪದ’: ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖರವರು ಉದ್ಘಾಟಿಸಲಿದ್ದಾರೆ. 

- Advertisement -
- Advertisement -

ಡಿಸೆಂಬರ್ 29, ಜಾತಿ -ಧರ್ಮಗಳನ್ನು ಮೀರಿದ ವಿಶ್ವಮಾನವ ಸಂದೇಶವನ್ನು ನಾಡಿಗೆ ಸಾರಿದ ಕುವೆಂಪು ಅವರ ಜನ್ಮದಿನದಂದು, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯು ವಿದ್ಯಾರ್ಥಿ- ಯುವಜನರಿಗಾಗಿ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ಒಂದಿಡಿ ದಿನ ಕಾರ್ಯಕ್ರಮ ನಡೆಯಲಿದ್ದು, ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ತನ್ನದೇ ಭಾಷೆಯಲ್ಲಿ ಮಾತಾಡಬೇಕು, ಹಾಡಬೇಕು, ಕುಣಿಯಬೇಕು. ಬಹುಆಯಾಮಗಳ ಸಾಂಸ್ಕೃತಿಕ ಪರಿಸರವನ್ನು ಕಟ್ಟಿಕೊಳ್ಳಲು ಮುಂದಡಿಯಿಡಬೇಕು ಎಂಬ ಉದ್ದೇಶದಿಂದ ನೆಲದ ಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎನ್ನುತ್ತಾರೆ ಕೆವಿಎಸ್ ಸಂಚಾಲಕರಾದ ಸರೋವರ್ ಬೆಂಕಿಕೆರೆ.

ನೆಲದ ಪದ ಉತ್ಸವವು ಒಂದು ಕಾರ್ಯಕ್ರಮ ಮಾತ್ರವಲ್ಲದೆ, ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫ್ಯಾಸಿಸ್ಟ್‌ ಶಕ್ತಿಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಸಮಾಜವನ್ನು ಜಾತಿ-ಧರ್ಮಗಳಾಗಿ ಒಡೆದು, ಸಹಬಾಳ್ವೆಯ ತತ್ವಗಳನ್ನು ಕಳಚಿ ದ್ವೇಷ ಭಿತ್ತುವ ಮೂಲಕ ಬಹುಜನರ ವಿರೋಧಿ ಸಾಂಸ್ಕೃತಿಕ ರಾಜಕಾರಣವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಬಹುತ್ವದ ತಾತ್ವಿಕತೆಯ ಬದಲು ಏಕರೂಪ ನಿರಂಕುಶತೆಯನ್ನೂ, ನೆಲಮೂಲದ ಸಂಸ್ಕೃತಿಯ ಬದಲು ಆಳುವವರ ಸಂಸ್ಕೃತಿಯನ್ನೂ ಜನರ ಬುದ್ಧಿಯೊಳಕ್ಕೆ ತೂರಿಸುತ್ತಿರುವ ಈ ಸಂದರ್ಭದಲ್ಲಿ ಬಹುಜನರ ಸಂಸ್ಕೃತಿಯನ್ನೂ-ಸಹಬಾಳ್ವೆಯ ತತ್ವವನ್ನು ಸಾಗುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ತಮಟೆ, ನಗಾರಿ, ಮೊಹರಂ ಅಲೈ ಕುಣಿತ ಸೇರಿದಂತೆ ವಿವಿಧ ವಾದ್ಯಗಳು, ರಾಜ್ಯದ ವಿವಿಧ ಪ್ರದೇಶಗಳ ವಿಶಿಷ್ಟ ಜನಪದ ಸಾಂಸ್ಕೃತಿ ಪ್ರಕಾರಗಳು, ತಳಸಮುದಾಯಗಳ ನೆಲಮೂಲದ ಹಾಡು-ಕುಣಿತ, ಸೌಹಾರ್ದತೆಯ ತತ್ವಗಳನ್ನು ಸಾರುವ ಹಾಡು, ಕವಿತೆ ನಾಟಕಗಳು ಪ್ರದರ್ಶನವಾಗಲಿವೆ.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕ ಮಂಸೋರೆ, ಸಾಹಿತಿ-ನಿರ್ದೇಶಕ ಯೋಗೇಶ್‌ ಮಾಸ್ಟರ್‌, ನಿರ್ದೇಶಕ ಬಿ.ಎಂ.ಗಿರಿರಾಜ್, ಯುವ ಗಾಯಕ ಚಿಂತನ್ ವಿಕಾಶ್, ಚಿಂತಕರಾದ ಜಾಪರ್ ಮೊಹಿಯುದ್ದೀನ್, ಜನಪ್ರಿಯ ಕಲಾವಿದ ಜಂಬೆ ಬಾಲು, ಗಾಯಕ ನಾದ ಮಣಿನಾಲ್ಕೂರು, ಗಾಯಕ ವಾಸು ದೀಕ್ಷಿತ್‌, ಕಲಾವಿದರಾದ ಹ.ರಾ.ಮಹೇಶ್‌, ಕವಯಿತ್ರಿ ಉಮಾ, ಯುವ ಕಲಾವಿದೆ ಸೌಮಿನಿ, ಕಲಾವಿದ ಸೌರಪಲ್ಲಿ ಚಂದ್ರು ಸೇರಿದಂತೆ ವಿವಿಧ ಕಲಾವಿದರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮವು ಡಿ.29ರ ಬುಧವಾರ ಬೆಳಗ್ಗೆ 10-30ರಿಂದ ಆರಂಭವಾಗಲಿದೆ. ಮಾಗಡಿ ರಸ್ತೆಯಲ್ಲಿರುವ ಅಂಜನಾನಗರದ ಬಳಿಯ ಸ್ಫೂರ್ತಿಧಾಮದ ವಿಶಾಲ ಸಾಂಸ್ಕೃತಿಕ ವಾತವಾರಣದಲ್ಲಿ ನೆಲಪ ಪದ ಮೇಳೈಸಲಿದೆ.


ಇದನ್ನೂ ಓದಿ: ಕುವೆಂಪು ಅವರ ಜನುಮದಿನದಂದು ‘ಕೊಲುವೆನೆಂಬ ಭಾಶೆ’ ಕೃತಿ ಬಿಡುಗಡೆ; ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...