Homeಮುಖಪುಟ'ನೆಲದ ಪದ': ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

‘ನೆಲದ ಪದ’: ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖರವರು ಉದ್ಘಾಟಿಸಲಿದ್ದಾರೆ. 

- Advertisement -
- Advertisement -

ಡಿಸೆಂಬರ್ 29, ಜಾತಿ -ಧರ್ಮಗಳನ್ನು ಮೀರಿದ ವಿಶ್ವಮಾನವ ಸಂದೇಶವನ್ನು ನಾಡಿಗೆ ಸಾರಿದ ಕುವೆಂಪು ಅವರ ಜನ್ಮದಿನದಂದು, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯು ವಿದ್ಯಾರ್ಥಿ- ಯುವಜನರಿಗಾಗಿ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ಒಂದಿಡಿ ದಿನ ಕಾರ್ಯಕ್ರಮ ನಡೆಯಲಿದ್ದು, ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ತನ್ನದೇ ಭಾಷೆಯಲ್ಲಿ ಮಾತಾಡಬೇಕು, ಹಾಡಬೇಕು, ಕುಣಿಯಬೇಕು. ಬಹುಆಯಾಮಗಳ ಸಾಂಸ್ಕೃತಿಕ ಪರಿಸರವನ್ನು ಕಟ್ಟಿಕೊಳ್ಳಲು ಮುಂದಡಿಯಿಡಬೇಕು ಎಂಬ ಉದ್ದೇಶದಿಂದ ನೆಲದ ಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎನ್ನುತ್ತಾರೆ ಕೆವಿಎಸ್ ಸಂಚಾಲಕರಾದ ಸರೋವರ್ ಬೆಂಕಿಕೆರೆ.

ನೆಲದ ಪದ ಉತ್ಸವವು ಒಂದು ಕಾರ್ಯಕ್ರಮ ಮಾತ್ರವಲ್ಲದೆ, ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫ್ಯಾಸಿಸ್ಟ್‌ ಶಕ್ತಿಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಸಮಾಜವನ್ನು ಜಾತಿ-ಧರ್ಮಗಳಾಗಿ ಒಡೆದು, ಸಹಬಾಳ್ವೆಯ ತತ್ವಗಳನ್ನು ಕಳಚಿ ದ್ವೇಷ ಭಿತ್ತುವ ಮೂಲಕ ಬಹುಜನರ ವಿರೋಧಿ ಸಾಂಸ್ಕೃತಿಕ ರಾಜಕಾರಣವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಬಹುತ್ವದ ತಾತ್ವಿಕತೆಯ ಬದಲು ಏಕರೂಪ ನಿರಂಕುಶತೆಯನ್ನೂ, ನೆಲಮೂಲದ ಸಂಸ್ಕೃತಿಯ ಬದಲು ಆಳುವವರ ಸಂಸ್ಕೃತಿಯನ್ನೂ ಜನರ ಬುದ್ಧಿಯೊಳಕ್ಕೆ ತೂರಿಸುತ್ತಿರುವ ಈ ಸಂದರ್ಭದಲ್ಲಿ ಬಹುಜನರ ಸಂಸ್ಕೃತಿಯನ್ನೂ-ಸಹಬಾಳ್ವೆಯ ತತ್ವವನ್ನು ಸಾಗುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ತಮಟೆ, ನಗಾರಿ, ಮೊಹರಂ ಅಲೈ ಕುಣಿತ ಸೇರಿದಂತೆ ವಿವಿಧ ವಾದ್ಯಗಳು, ರಾಜ್ಯದ ವಿವಿಧ ಪ್ರದೇಶಗಳ ವಿಶಿಷ್ಟ ಜನಪದ ಸಾಂಸ್ಕೃತಿ ಪ್ರಕಾರಗಳು, ತಳಸಮುದಾಯಗಳ ನೆಲಮೂಲದ ಹಾಡು-ಕುಣಿತ, ಸೌಹಾರ್ದತೆಯ ತತ್ವಗಳನ್ನು ಸಾರುವ ಹಾಡು, ಕವಿತೆ ನಾಟಕಗಳು ಪ್ರದರ್ಶನವಾಗಲಿವೆ.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕ ಮಂಸೋರೆ, ಸಾಹಿತಿ-ನಿರ್ದೇಶಕ ಯೋಗೇಶ್‌ ಮಾಸ್ಟರ್‌, ನಿರ್ದೇಶಕ ಬಿ.ಎಂ.ಗಿರಿರಾಜ್, ಯುವ ಗಾಯಕ ಚಿಂತನ್ ವಿಕಾಶ್, ಚಿಂತಕರಾದ ಜಾಪರ್ ಮೊಹಿಯುದ್ದೀನ್, ಜನಪ್ರಿಯ ಕಲಾವಿದ ಜಂಬೆ ಬಾಲು, ಗಾಯಕ ನಾದ ಮಣಿನಾಲ್ಕೂರು, ಗಾಯಕ ವಾಸು ದೀಕ್ಷಿತ್‌, ಕಲಾವಿದರಾದ ಹ.ರಾ.ಮಹೇಶ್‌, ಕವಯಿತ್ರಿ ಉಮಾ, ಯುವ ಕಲಾವಿದೆ ಸೌಮಿನಿ, ಕಲಾವಿದ ಸೌರಪಲ್ಲಿ ಚಂದ್ರು ಸೇರಿದಂತೆ ವಿವಿಧ ಕಲಾವಿದರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮವು ಡಿ.29ರ ಬುಧವಾರ ಬೆಳಗ್ಗೆ 10-30ರಿಂದ ಆರಂಭವಾಗಲಿದೆ. ಮಾಗಡಿ ರಸ್ತೆಯಲ್ಲಿರುವ ಅಂಜನಾನಗರದ ಬಳಿಯ ಸ್ಫೂರ್ತಿಧಾಮದ ವಿಶಾಲ ಸಾಂಸ್ಕೃತಿಕ ವಾತವಾರಣದಲ್ಲಿ ನೆಲಪ ಪದ ಮೇಳೈಸಲಿದೆ.


ಇದನ್ನೂ ಓದಿ: ಕುವೆಂಪು ಅವರ ಜನುಮದಿನದಂದು ‘ಕೊಲುವೆನೆಂಬ ಭಾಶೆ’ ಕೃತಿ ಬಿಡುಗಡೆ; ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...