Homeಮುಖಪುಟ'ನೆಲದ ಪದ': ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

‘ನೆಲದ ಪದ’: ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖರವರು ಉದ್ಘಾಟಿಸಲಿದ್ದಾರೆ. 

- Advertisement -
- Advertisement -

ಡಿಸೆಂಬರ್ 29, ಜಾತಿ -ಧರ್ಮಗಳನ್ನು ಮೀರಿದ ವಿಶ್ವಮಾನವ ಸಂದೇಶವನ್ನು ನಾಡಿಗೆ ಸಾರಿದ ಕುವೆಂಪು ಅವರ ಜನ್ಮದಿನದಂದು, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯು ವಿದ್ಯಾರ್ಥಿ- ಯುವಜನರಿಗಾಗಿ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ಒಂದಿಡಿ ದಿನ ಕಾರ್ಯಕ್ರಮ ನಡೆಯಲಿದ್ದು, ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ತನ್ನದೇ ಭಾಷೆಯಲ್ಲಿ ಮಾತಾಡಬೇಕು, ಹಾಡಬೇಕು, ಕುಣಿಯಬೇಕು. ಬಹುಆಯಾಮಗಳ ಸಾಂಸ್ಕೃತಿಕ ಪರಿಸರವನ್ನು ಕಟ್ಟಿಕೊಳ್ಳಲು ಮುಂದಡಿಯಿಡಬೇಕು ಎಂಬ ಉದ್ದೇಶದಿಂದ ನೆಲದ ಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎನ್ನುತ್ತಾರೆ ಕೆವಿಎಸ್ ಸಂಚಾಲಕರಾದ ಸರೋವರ್ ಬೆಂಕಿಕೆರೆ.

ನೆಲದ ಪದ ಉತ್ಸವವು ಒಂದು ಕಾರ್ಯಕ್ರಮ ಮಾತ್ರವಲ್ಲದೆ, ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫ್ಯಾಸಿಸ್ಟ್‌ ಶಕ್ತಿಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಸಮಾಜವನ್ನು ಜಾತಿ-ಧರ್ಮಗಳಾಗಿ ಒಡೆದು, ಸಹಬಾಳ್ವೆಯ ತತ್ವಗಳನ್ನು ಕಳಚಿ ದ್ವೇಷ ಭಿತ್ತುವ ಮೂಲಕ ಬಹುಜನರ ವಿರೋಧಿ ಸಾಂಸ್ಕೃತಿಕ ರಾಜಕಾರಣವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಬಹುತ್ವದ ತಾತ್ವಿಕತೆಯ ಬದಲು ಏಕರೂಪ ನಿರಂಕುಶತೆಯನ್ನೂ, ನೆಲಮೂಲದ ಸಂಸ್ಕೃತಿಯ ಬದಲು ಆಳುವವರ ಸಂಸ್ಕೃತಿಯನ್ನೂ ಜನರ ಬುದ್ಧಿಯೊಳಕ್ಕೆ ತೂರಿಸುತ್ತಿರುವ ಈ ಸಂದರ್ಭದಲ್ಲಿ ಬಹುಜನರ ಸಂಸ್ಕೃತಿಯನ್ನೂ-ಸಹಬಾಳ್ವೆಯ ತತ್ವವನ್ನು ಸಾಗುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ತಮಟೆ, ನಗಾರಿ, ಮೊಹರಂ ಅಲೈ ಕುಣಿತ ಸೇರಿದಂತೆ ವಿವಿಧ ವಾದ್ಯಗಳು, ರಾಜ್ಯದ ವಿವಿಧ ಪ್ರದೇಶಗಳ ವಿಶಿಷ್ಟ ಜನಪದ ಸಾಂಸ್ಕೃತಿ ಪ್ರಕಾರಗಳು, ತಳಸಮುದಾಯಗಳ ನೆಲಮೂಲದ ಹಾಡು-ಕುಣಿತ, ಸೌಹಾರ್ದತೆಯ ತತ್ವಗಳನ್ನು ಸಾರುವ ಹಾಡು, ಕವಿತೆ ನಾಟಕಗಳು ಪ್ರದರ್ಶನವಾಗಲಿವೆ.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕ ಮಂಸೋರೆ, ಸಾಹಿತಿ-ನಿರ್ದೇಶಕ ಯೋಗೇಶ್‌ ಮಾಸ್ಟರ್‌, ನಿರ್ದೇಶಕ ಬಿ.ಎಂ.ಗಿರಿರಾಜ್, ಯುವ ಗಾಯಕ ಚಿಂತನ್ ವಿಕಾಶ್, ಚಿಂತಕರಾದ ಜಾಪರ್ ಮೊಹಿಯುದ್ದೀನ್, ಜನಪ್ರಿಯ ಕಲಾವಿದ ಜಂಬೆ ಬಾಲು, ಗಾಯಕ ನಾದ ಮಣಿನಾಲ್ಕೂರು, ಗಾಯಕ ವಾಸು ದೀಕ್ಷಿತ್‌, ಕಲಾವಿದರಾದ ಹ.ರಾ.ಮಹೇಶ್‌, ಕವಯಿತ್ರಿ ಉಮಾ, ಯುವ ಕಲಾವಿದೆ ಸೌಮಿನಿ, ಕಲಾವಿದ ಸೌರಪಲ್ಲಿ ಚಂದ್ರು ಸೇರಿದಂತೆ ವಿವಿಧ ಕಲಾವಿದರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮವು ಡಿ.29ರ ಬುಧವಾರ ಬೆಳಗ್ಗೆ 10-30ರಿಂದ ಆರಂಭವಾಗಲಿದೆ. ಮಾಗಡಿ ರಸ್ತೆಯಲ್ಲಿರುವ ಅಂಜನಾನಗರದ ಬಳಿಯ ಸ್ಫೂರ್ತಿಧಾಮದ ವಿಶಾಲ ಸಾಂಸ್ಕೃತಿಕ ವಾತವಾರಣದಲ್ಲಿ ನೆಲಪ ಪದ ಮೇಳೈಸಲಿದೆ.


ಇದನ್ನೂ ಓದಿ: ಕುವೆಂಪು ಅವರ ಜನುಮದಿನದಂದು ‘ಕೊಲುವೆನೆಂಬ ಭಾಶೆ’ ಕೃತಿ ಬಿಡುಗಡೆ; ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...