Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...