Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...