Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...