Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...