Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...