Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...