Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...