Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...