Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...