Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...