Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...