Homeಕರ್ನಾಟಕಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುತ್ತಿದೆ. ತರಗತಿಗಳು ಆರಂಭವಾಗಿ ಸುಮಾರು ಒಂದು ತಿಂಗಳ ಬಳಿಕ ಸರ್ಕಾರ ಎನ್‌ಇಪಿಯ ಪಠ್ಯಕ್ರಮವನ್ನು ಬದಲಾಯಿಸಿದೆ ಎಂದು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರ ಹಾಗೂ ಮೈಸೂರು ವಿವಿಯ ನೂತನ ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಹೊಸ ಸುತ್ತೋಲೆ? ವಿದ್ಯಾರ್ಥಿಗಳ ವಿರೋಧವೇಕೆ?

‘ಓಪನ್‌ ಎಲೆಕ್ಟಿವ್‌’ (ಮುಕ್ತ ಐಚ್ಛಿಕ) ವಿಷಯದ ಕುರಿತು ಮಾಡಿರುವ ಸುತ್ತೋಲೆ ಆತಂಕ ಸೃಷ್ಟಿಸಿದೆ. “ಕಲಾ ವಿದ್ಯಾರ್ಥಿಗಳು- ‘ಓಪನ್ ಎಲೆಕ್ಟಿವ್‌’ ವಿಷಯವನ್ನು ‘ವಾಣಿಜ್ಯ’ ಅಥವಾ ‘ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಬೇಕು. ವಾಣಿಜ್ಯ ವಿದ್ಯಾರ್ಥಿಗಳು- ಕಲಾ ಅಥವಾ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ವಿಜ್ಞಾನ ವಿದ್ಯಾರ್ಥಿಗಳು- ಕಲಾ ಅಥವಾ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಸರ್ಕಾರ ಸೂಚಿಸಿದೆ. ಅದರನ್ವಯ ಮೈಸೂರು ವಿಶ್ವವಿದ್ಯಾನಿಲಯ ನೀಡಿರುವ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಆತಂಕ ಹೊರಹಾಕಿದ್ದಾರೆ.

ಇಲ್ಲಿಯವರೆಗೆ ವಿದ್ಯಾರ್ಥಿಗಳು ಬಹುಶಿಸ್ತೀಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡಿದವರಲ್ಲ. ಪಿಯುಸಿಯಲ್ಲಿ ಕಲಾ ವಿಷಯವೆಂದರೆ ಕಲಾ ವಿಷಯವನ್ನಷ್ಟೇ ಓದಿಕೊಂಡು ಬಂದಿದ್ದೇವೆ. ವಿಜ್ಞಾನ, ವಾಣಿಜ್ಯ ವಿಷಯದ ವಿದ್ಯಾರ್ಥಿಗಳೂ ತಮ್ಮ ಆಯ್ಕೆಗಳಿಗೆ ಸೀಮಿತವಾಗಿದ್ದಾರೆ. ಎನ್‌ಇಪಿಯಿಂದಾಗಿ ಏಕಾಏಕಿ ಬಹುಶಿಸ್ತೀಯ ಪಠ್ಯಕ್ರಮಕ್ಕೆ ಹೋಗಬೇಕಾಗಿದೆ. ವಾಣಿಜ್ಯ ಹಾಗೂ ಸೈನ್ಸ್ ವಿದ್ಯಾರ್ಥಿಗಳು ಸುಲಭವಾಗಿ ಆರ್ಟ್ಸ್ ತೆಗೆದುಕೊಂಡು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶಗಳಿವೆ. ಆದರೆ ಕಲಾ ವಿದ್ಯಾರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ವಿಷಯವನ್ನು ತೆಗೆದುಕೊಂಡು ಓದುವುದು ಕಷ್ಟವಾಗುತ್ತದೆ ಎಂಬುದು ಪ್ರತಿಭಟನೆಗೆ ಕಾರಣ.

ಎಐಡಿಎಸ್‌ಒ ಸಂಘಟನೆಯ ಉಪಾಧ್ಯಕ್ಷರಾದ ಆಸಿಯಾ ಮಾತನಾಡಿ, “ಐಚ್ಛಿಕ ವಿಷಯ ಎಂದರೆ ಏನು? ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವಂತಹದ್ದು. ಓಪನ್ ಎಲೆಕ್ಟಿವ್‌ ಅಂದ ಮೇಲೆ ಇವರು ಕಡ್ಡಾಯವೆಂದು ಬೇರೆ ವಿಷಯ ತೆಗೆದುಕೊಳ್ಳಿ ಎನ್ನುವುದು ಸರಿಯೇ? ವಿದ್ಯಾರ್ಥಿಗಳಿಗೆ ಹೇಳೋದೊಂದು ಮಾಡೋದೊಂದು ಆಗುವುದಿಲ್ಲವೆ? ಇವರು ವಿದ್ಯಾರ್ಥಿಗಳ ಪರವೋ? ಪಾಲಿಸಿಗಳನ್ನು ಮಾಡುವುದಕ್ಕಾಗಿಯೇ ಬಂದಿದ್ದಾರೋ? ಇಂತಹ ಪಾಲಿಸಿಗಳನ್ನು ಏತಕ್ಕಾಗಿ ತರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕುಲಪತಿಯವರು ಕೇಳಲು ಬಂದಿಲ್ಲ. ವಿದ್ಯಾರ್ಥಿಗಳು ತರಗತಿ ಬಿಟ್ಟು ಕುಳಿತ್ತಿದ್ದಾರೆ. ವಿದ್ಯಾರ್ಥಿಗಳ ಪರ ಇರಬೇಕಾದ ಸರ್ಕಾರಗಳು, ಕುಲಪತಿಗಳು ಕಿವಿಮುಚ್ಚಿ ಕುಳಿತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದನ್ನೂ ಓದಿರಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು


ಸರ್ಕಾರದ ಸೂಚನೆಯನ್ವಯ ಮೈಸೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿರುವುದು…
ಮುಕ್ತ ಐಚ್ಛಿಕ (ಓಪನ್‌ ಎಲೆಕ್ಟಿವ್) ಸಂಬಂಧಿಸಿದಂತೆ ವಿವಿ ಹೊಸ ಪಠ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು.

ಓಪನ್‌ ಎಲೆಕ್ಟಿವ್‌ (ಮುಕ್ತ ಐಚ್ಛಿಕ) ವಿಷಯವು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿದ್ದು. ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕಲ್ಲವೇ? ಆದರೆ ಸರ್ಕಾರ ಮುಕ್ತ ಐಚ್ಛಿಕ ವಿಷಯವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಮುಖ್ಯವಾಗಿ ಎನ್‌ಇಪಿ ಜಾರಿಯಾಗುತ್ತಿರುವುದು ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಮನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಂಬುದು ತಜ್ಞರ ಅಭಿಪ್ರಾಯ.

ಎನ್‌ಇಪಿ ವಿದ್ಯಾರ್ಥಿ ಸ್ನೇಹಿ ಎಂಬುದಕ್ಕೆ ಅರ್ಥವಿಲ್ಲ. ಈಗಾಗಲೇ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವು ಕಡೆ ಬಿ.ಎ. ವಿದ್ಯಾರ್ಥಿಗಳು ಬಿ.ಕಾಂ.ನಿಂದ ಓಪನ್ ಎಲೆಕ್ಟಿವ್‌ ಅಥವಾ ವಿಜ್ಞಾನದ ಓಪನ್ ಎಲೆಕ್ಟಿವ್ ತೆಗೆದುಕೊಂಡಿದ್ದಾರೆ. ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂಬ ಒತ್ತಾಯವಿರಲಿಲ್ಲ. ದುರಂತವೆಂದರೆ ಹೀಗೆ ಒತ್ತಾಯಪೂರ್ವಕವಾಗಿ ಹೇರಿದಾಗ ಹೈರಾಣುಗುತ್ತೇವೆ ಎಂಬುದು ತಜ್ಞರ ಆತಂಕ.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್‌, ಉಪಾಧ್ಯಕ್ಷರಾದ ಆಸಿಯಾ, ಕಾರ್ಯದರ್ಶಿ ಚಂದ್ರಕಲಾ ಹಾಜರಿದ್ದರು.


ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?


ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳುವುದೇನು?

ಎನ್‌ಇಪಿ ಜಾರಿಯಲ್ಲಿ ಹೆಚ್ಚು ಧಾವಂತದಲ್ಲಿರುವ ವಿವಿಗಳಲ್ಲಿ ಮೈಸೂರು ವಿವಿಯೂ ಒಂದು. ಸರ್ಕಾರದ ಹೊಸ ನಿಯಮವನ್ನು ಜಾರಿಗೊಳಿಸುವಂತೆ ಮೈಸೂರು ವಿವಿ ಸುತ್ತೋಲೆ ಹೊರಡಿಸಿರುವ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌, “ಪ್ರಥಮ ವರ್ಷದ ಪ್ರವೇಶಾತಿ ಡಿ.2ರಂದು ಆರಂಭವಾಗಿದೆ. ಈವರೆಗೆ ಕಾಲೇಜುಗಳು ಆರಂಭವಾಗಿರಲಿಲ್ಲ. ಹೀಗಾಗಿ ಈ ಸುತ್ತೋಲೆಯಿಂದ ತೊಂದರೆಯಾಗದು” ಎಂದರು.

‘ಗ್ರಾಮಾಂತರ ವಿದ್ಯಾರ್ಥಿಗಳ ಕಷ್ಟಕ್ಕೆ ಪರಿಹಾರವೇನು?’ ಎಂದು ಕೇಳಿದಾಗ, “ಎಲ್ಲಿಲ್ಲಿ ಇದು ಜಾರಿಗೆ ಸಾಧ್ಯವಿಲ್ಲವೋ ಅಲ್ಲಿ ಬಿಟ್ಟುಬಿಡಿ ಎಂದು ಸರ್ಕಾರ ಹೇಳಿದೆ. ಆರ್ಟ್ಸ್‌ ಇರುವ ಕಡೆ ಕಾಮರ್ಸ್ ಇದ್ದೇ ಇರುತ್ತದೆ. ಕಾಮರ್ಸ್ ವಿದ್ಯಾರ್ಥಿಗಳು ಆರ್ಟ್ಸ್ ವಿಷಯವನ್ನು, ಆರ್ಟ್ಸ್ ವಿದ್ಯಾರ್ಥಿಗಳು ಕಾಮರ್ಸ್ ತೆಗೆದುಕೊಳ್ಳಬಹುದು. ಎನ್‌ಇಪಿಯ ಮುಖ್ಯ ಉದ್ದೇಶ ಬಹುಶಿಸ್ತೀಯ ಪಠ್ಯಕ್ರಮ. ಕಲಾ ವಿದ್ಯಾರ್ಥಿ ವಾಣಿಜ್ಯದ ಒಂದು ವಿಷಯವನ್ನು, ವಿಜ್ಞಾನದ ಒಂದು ವಿಷಯವನ್ನು ತೆಗೆದುಕೊಂಡರೆ ಕೌಶಲ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ಕಷ್ಟವಾಗುವಂತೆ ಐಚ್ಛಿಕ ವಿಷಯವನ್ನು ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದಾಗ, “ಐಚ್ಛಿಕ ವಿಷಯಗಳು ಕಷ್ಟವಾಗಿರುವುದಿಲ್ಲ. ಪ್ರಾಥಮಿಕ ವಿಷಯಗಳನ್ನಷ್ಟೇ ಪರಿಚಯಿಸಲಾಗುತ್ತದೆ. ಉದ್ಯೋಗ ಕೇಂದ್ರಿತ ವಿಷಯಕ್ಕೆ ಐಚ್ಛಿಕ ಆಯ್ಕೆ ಆದ್ಯತೆ ನೀಡುತ್ತದೆ” ಎಂದರು. ಐಚ್ಛಿಕ ವಿಷಯ ಕಷ್ಟವಾಗಿರುವುದಿಲ್ಲ ಆದರೆ ಉದ್ಯೋಗ ದೊರಕಿಸಿಕೊಡುತ್ತದೆ ಎಂಬುದು ಕುಲಪತಿಯವರ ಅಭಿಪ್ರಾಯ. ಆದರೆ ಬೋಧಕರ ಪ್ರಕಾರ, ಈ ಐಚ್ಛಿಕ ವಿಷಯಗಳು ವಿದ್ಯಾರ್ಥಿಗಳಿಗೆ ತಲೆಬಿಸಿಯಾಗುವಂತಿವೆ.

ಈ ವಿಚಾರವಾಗಿ ಮೈಸೂರು ವಿವಿ ಕುಲಪತಿಯವರು ಅರ್ಧಸತ್ಯಗಳನ್ನು ಹೇಳುತ್ತಿದ್ದಾರೆ ಎಂಬುದನ್ನು ‘ನಾನುಗೌರಿ.ಕಾಂ’ ವರದಿ ಮಾಡಿದೆ (ಪೂರ್ಣ ವಿವರಗಳಿಗೆ ‘ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು’ ವರದಿ ಓದಿರಿ)


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...