Homeಕರ್ನಾಟಕಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುತ್ತಿದೆ. ತರಗತಿಗಳು ಆರಂಭವಾಗಿ ಸುಮಾರು ಒಂದು ತಿಂಗಳ ಬಳಿಕ ಸರ್ಕಾರ ಎನ್‌ಇಪಿಯ ಪಠ್ಯಕ್ರಮವನ್ನು ಬದಲಾಯಿಸಿದೆ ಎಂದು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರ ಹಾಗೂ ಮೈಸೂರು ವಿವಿಯ ನೂತನ ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಹೊಸ ಸುತ್ತೋಲೆ? ವಿದ್ಯಾರ್ಥಿಗಳ ವಿರೋಧವೇಕೆ?

‘ಓಪನ್‌ ಎಲೆಕ್ಟಿವ್‌’ (ಮುಕ್ತ ಐಚ್ಛಿಕ) ವಿಷಯದ ಕುರಿತು ಮಾಡಿರುವ ಸುತ್ತೋಲೆ ಆತಂಕ ಸೃಷ್ಟಿಸಿದೆ. “ಕಲಾ ವಿದ್ಯಾರ್ಥಿಗಳು- ‘ಓಪನ್ ಎಲೆಕ್ಟಿವ್‌’ ವಿಷಯವನ್ನು ‘ವಾಣಿಜ್ಯ’ ಅಥವಾ ‘ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಬೇಕು. ವಾಣಿಜ್ಯ ವಿದ್ಯಾರ್ಥಿಗಳು- ಕಲಾ ಅಥವಾ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ವಿಜ್ಞಾನ ವಿದ್ಯಾರ್ಥಿಗಳು- ಕಲಾ ಅಥವಾ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಸರ್ಕಾರ ಸೂಚಿಸಿದೆ. ಅದರನ್ವಯ ಮೈಸೂರು ವಿಶ್ವವಿದ್ಯಾನಿಲಯ ನೀಡಿರುವ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಆತಂಕ ಹೊರಹಾಕಿದ್ದಾರೆ.

ಇಲ್ಲಿಯವರೆಗೆ ವಿದ್ಯಾರ್ಥಿಗಳು ಬಹುಶಿಸ್ತೀಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡಿದವರಲ್ಲ. ಪಿಯುಸಿಯಲ್ಲಿ ಕಲಾ ವಿಷಯವೆಂದರೆ ಕಲಾ ವಿಷಯವನ್ನಷ್ಟೇ ಓದಿಕೊಂಡು ಬಂದಿದ್ದೇವೆ. ವಿಜ್ಞಾನ, ವಾಣಿಜ್ಯ ವಿಷಯದ ವಿದ್ಯಾರ್ಥಿಗಳೂ ತಮ್ಮ ಆಯ್ಕೆಗಳಿಗೆ ಸೀಮಿತವಾಗಿದ್ದಾರೆ. ಎನ್‌ಇಪಿಯಿಂದಾಗಿ ಏಕಾಏಕಿ ಬಹುಶಿಸ್ತೀಯ ಪಠ್ಯಕ್ರಮಕ್ಕೆ ಹೋಗಬೇಕಾಗಿದೆ. ವಾಣಿಜ್ಯ ಹಾಗೂ ಸೈನ್ಸ್ ವಿದ್ಯಾರ್ಥಿಗಳು ಸುಲಭವಾಗಿ ಆರ್ಟ್ಸ್ ತೆಗೆದುಕೊಂಡು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶಗಳಿವೆ. ಆದರೆ ಕಲಾ ವಿದ್ಯಾರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ವಿಷಯವನ್ನು ತೆಗೆದುಕೊಂಡು ಓದುವುದು ಕಷ್ಟವಾಗುತ್ತದೆ ಎಂಬುದು ಪ್ರತಿಭಟನೆಗೆ ಕಾರಣ.

ಎಐಡಿಎಸ್‌ಒ ಸಂಘಟನೆಯ ಉಪಾಧ್ಯಕ್ಷರಾದ ಆಸಿಯಾ ಮಾತನಾಡಿ, “ಐಚ್ಛಿಕ ವಿಷಯ ಎಂದರೆ ಏನು? ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವಂತಹದ್ದು. ಓಪನ್ ಎಲೆಕ್ಟಿವ್‌ ಅಂದ ಮೇಲೆ ಇವರು ಕಡ್ಡಾಯವೆಂದು ಬೇರೆ ವಿಷಯ ತೆಗೆದುಕೊಳ್ಳಿ ಎನ್ನುವುದು ಸರಿಯೇ? ವಿದ್ಯಾರ್ಥಿಗಳಿಗೆ ಹೇಳೋದೊಂದು ಮಾಡೋದೊಂದು ಆಗುವುದಿಲ್ಲವೆ? ಇವರು ವಿದ್ಯಾರ್ಥಿಗಳ ಪರವೋ? ಪಾಲಿಸಿಗಳನ್ನು ಮಾಡುವುದಕ್ಕಾಗಿಯೇ ಬಂದಿದ್ದಾರೋ? ಇಂತಹ ಪಾಲಿಸಿಗಳನ್ನು ಏತಕ್ಕಾಗಿ ತರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕುಲಪತಿಯವರು ಕೇಳಲು ಬಂದಿಲ್ಲ. ವಿದ್ಯಾರ್ಥಿಗಳು ತರಗತಿ ಬಿಟ್ಟು ಕುಳಿತ್ತಿದ್ದಾರೆ. ವಿದ್ಯಾರ್ಥಿಗಳ ಪರ ಇರಬೇಕಾದ ಸರ್ಕಾರಗಳು, ಕುಲಪತಿಗಳು ಕಿವಿಮುಚ್ಚಿ ಕುಳಿತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದನ್ನೂ ಓದಿರಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು


ಸರ್ಕಾರದ ಸೂಚನೆಯನ್ವಯ ಮೈಸೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿರುವುದು…
ಮುಕ್ತ ಐಚ್ಛಿಕ (ಓಪನ್‌ ಎಲೆಕ್ಟಿವ್) ಸಂಬಂಧಿಸಿದಂತೆ ವಿವಿ ಹೊಸ ಪಠ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು.

ಓಪನ್‌ ಎಲೆಕ್ಟಿವ್‌ (ಮುಕ್ತ ಐಚ್ಛಿಕ) ವಿಷಯವು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿದ್ದು. ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕಲ್ಲವೇ? ಆದರೆ ಸರ್ಕಾರ ಮುಕ್ತ ಐಚ್ಛಿಕ ವಿಷಯವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಮುಖ್ಯವಾಗಿ ಎನ್‌ಇಪಿ ಜಾರಿಯಾಗುತ್ತಿರುವುದು ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಮನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಂಬುದು ತಜ್ಞರ ಅಭಿಪ್ರಾಯ.

ಎನ್‌ಇಪಿ ವಿದ್ಯಾರ್ಥಿ ಸ್ನೇಹಿ ಎಂಬುದಕ್ಕೆ ಅರ್ಥವಿಲ್ಲ. ಈಗಾಗಲೇ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವು ಕಡೆ ಬಿ.ಎ. ವಿದ್ಯಾರ್ಥಿಗಳು ಬಿ.ಕಾಂ.ನಿಂದ ಓಪನ್ ಎಲೆಕ್ಟಿವ್‌ ಅಥವಾ ವಿಜ್ಞಾನದ ಓಪನ್ ಎಲೆಕ್ಟಿವ್ ತೆಗೆದುಕೊಂಡಿದ್ದಾರೆ. ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂಬ ಒತ್ತಾಯವಿರಲಿಲ್ಲ. ದುರಂತವೆಂದರೆ ಹೀಗೆ ಒತ್ತಾಯಪೂರ್ವಕವಾಗಿ ಹೇರಿದಾಗ ಹೈರಾಣುಗುತ್ತೇವೆ ಎಂಬುದು ತಜ್ಞರ ಆತಂಕ.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್‌, ಉಪಾಧ್ಯಕ್ಷರಾದ ಆಸಿಯಾ, ಕಾರ್ಯದರ್ಶಿ ಚಂದ್ರಕಲಾ ಹಾಜರಿದ್ದರು.


ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?


ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳುವುದೇನು?

ಎನ್‌ಇಪಿ ಜಾರಿಯಲ್ಲಿ ಹೆಚ್ಚು ಧಾವಂತದಲ್ಲಿರುವ ವಿವಿಗಳಲ್ಲಿ ಮೈಸೂರು ವಿವಿಯೂ ಒಂದು. ಸರ್ಕಾರದ ಹೊಸ ನಿಯಮವನ್ನು ಜಾರಿಗೊಳಿಸುವಂತೆ ಮೈಸೂರು ವಿವಿ ಸುತ್ತೋಲೆ ಹೊರಡಿಸಿರುವ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌, “ಪ್ರಥಮ ವರ್ಷದ ಪ್ರವೇಶಾತಿ ಡಿ.2ರಂದು ಆರಂಭವಾಗಿದೆ. ಈವರೆಗೆ ಕಾಲೇಜುಗಳು ಆರಂಭವಾಗಿರಲಿಲ್ಲ. ಹೀಗಾಗಿ ಈ ಸುತ್ತೋಲೆಯಿಂದ ತೊಂದರೆಯಾಗದು” ಎಂದರು.

‘ಗ್ರಾಮಾಂತರ ವಿದ್ಯಾರ್ಥಿಗಳ ಕಷ್ಟಕ್ಕೆ ಪರಿಹಾರವೇನು?’ ಎಂದು ಕೇಳಿದಾಗ, “ಎಲ್ಲಿಲ್ಲಿ ಇದು ಜಾರಿಗೆ ಸಾಧ್ಯವಿಲ್ಲವೋ ಅಲ್ಲಿ ಬಿಟ್ಟುಬಿಡಿ ಎಂದು ಸರ್ಕಾರ ಹೇಳಿದೆ. ಆರ್ಟ್ಸ್‌ ಇರುವ ಕಡೆ ಕಾಮರ್ಸ್ ಇದ್ದೇ ಇರುತ್ತದೆ. ಕಾಮರ್ಸ್ ವಿದ್ಯಾರ್ಥಿಗಳು ಆರ್ಟ್ಸ್ ವಿಷಯವನ್ನು, ಆರ್ಟ್ಸ್ ವಿದ್ಯಾರ್ಥಿಗಳು ಕಾಮರ್ಸ್ ತೆಗೆದುಕೊಳ್ಳಬಹುದು. ಎನ್‌ಇಪಿಯ ಮುಖ್ಯ ಉದ್ದೇಶ ಬಹುಶಿಸ್ತೀಯ ಪಠ್ಯಕ್ರಮ. ಕಲಾ ವಿದ್ಯಾರ್ಥಿ ವಾಣಿಜ್ಯದ ಒಂದು ವಿಷಯವನ್ನು, ವಿಜ್ಞಾನದ ಒಂದು ವಿಷಯವನ್ನು ತೆಗೆದುಕೊಂಡರೆ ಕೌಶಲ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ಕಷ್ಟವಾಗುವಂತೆ ಐಚ್ಛಿಕ ವಿಷಯವನ್ನು ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದಾಗ, “ಐಚ್ಛಿಕ ವಿಷಯಗಳು ಕಷ್ಟವಾಗಿರುವುದಿಲ್ಲ. ಪ್ರಾಥಮಿಕ ವಿಷಯಗಳನ್ನಷ್ಟೇ ಪರಿಚಯಿಸಲಾಗುತ್ತದೆ. ಉದ್ಯೋಗ ಕೇಂದ್ರಿತ ವಿಷಯಕ್ಕೆ ಐಚ್ಛಿಕ ಆಯ್ಕೆ ಆದ್ಯತೆ ನೀಡುತ್ತದೆ” ಎಂದರು. ಐಚ್ಛಿಕ ವಿಷಯ ಕಷ್ಟವಾಗಿರುವುದಿಲ್ಲ ಆದರೆ ಉದ್ಯೋಗ ದೊರಕಿಸಿಕೊಡುತ್ತದೆ ಎಂಬುದು ಕುಲಪತಿಯವರ ಅಭಿಪ್ರಾಯ. ಆದರೆ ಬೋಧಕರ ಪ್ರಕಾರ, ಈ ಐಚ್ಛಿಕ ವಿಷಯಗಳು ವಿದ್ಯಾರ್ಥಿಗಳಿಗೆ ತಲೆಬಿಸಿಯಾಗುವಂತಿವೆ.

ಈ ವಿಚಾರವಾಗಿ ಮೈಸೂರು ವಿವಿ ಕುಲಪತಿಯವರು ಅರ್ಧಸತ್ಯಗಳನ್ನು ಹೇಳುತ್ತಿದ್ದಾರೆ ಎಂಬುದನ್ನು ‘ನಾನುಗೌರಿ.ಕಾಂ’ ವರದಿ ಮಾಡಿದೆ (ಪೂರ್ಣ ವಿವರಗಳಿಗೆ ‘ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು’ ವರದಿ ಓದಿರಿ)


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...