Homeಕರ್ನಾಟಕಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುತ್ತಿದೆ. ತರಗತಿಗಳು ಆರಂಭವಾಗಿ ಸುಮಾರು ಒಂದು ತಿಂಗಳ ಬಳಿಕ ಸರ್ಕಾರ ಎನ್‌ಇಪಿಯ ಪಠ್ಯಕ್ರಮವನ್ನು ಬದಲಾಯಿಸಿದೆ ಎಂದು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರ ಹಾಗೂ ಮೈಸೂರು ವಿವಿಯ ನೂತನ ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಹೊಸ ಸುತ್ತೋಲೆ? ವಿದ್ಯಾರ್ಥಿಗಳ ವಿರೋಧವೇಕೆ?

‘ಓಪನ್‌ ಎಲೆಕ್ಟಿವ್‌’ (ಮುಕ್ತ ಐಚ್ಛಿಕ) ವಿಷಯದ ಕುರಿತು ಮಾಡಿರುವ ಸುತ್ತೋಲೆ ಆತಂಕ ಸೃಷ್ಟಿಸಿದೆ. “ಕಲಾ ವಿದ್ಯಾರ್ಥಿಗಳು- ‘ಓಪನ್ ಎಲೆಕ್ಟಿವ್‌’ ವಿಷಯವನ್ನು ‘ವಾಣಿಜ್ಯ’ ಅಥವಾ ‘ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಬೇಕು. ವಾಣಿಜ್ಯ ವಿದ್ಯಾರ್ಥಿಗಳು- ಕಲಾ ಅಥವಾ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ವಿಜ್ಞಾನ ವಿದ್ಯಾರ್ಥಿಗಳು- ಕಲಾ ಅಥವಾ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಸರ್ಕಾರ ಸೂಚಿಸಿದೆ. ಅದರನ್ವಯ ಮೈಸೂರು ವಿಶ್ವವಿದ್ಯಾನಿಲಯ ನೀಡಿರುವ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಆತಂಕ ಹೊರಹಾಕಿದ್ದಾರೆ.

ಇಲ್ಲಿಯವರೆಗೆ ವಿದ್ಯಾರ್ಥಿಗಳು ಬಹುಶಿಸ್ತೀಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡಿದವರಲ್ಲ. ಪಿಯುಸಿಯಲ್ಲಿ ಕಲಾ ವಿಷಯವೆಂದರೆ ಕಲಾ ವಿಷಯವನ್ನಷ್ಟೇ ಓದಿಕೊಂಡು ಬಂದಿದ್ದೇವೆ. ವಿಜ್ಞಾನ, ವಾಣಿಜ್ಯ ವಿಷಯದ ವಿದ್ಯಾರ್ಥಿಗಳೂ ತಮ್ಮ ಆಯ್ಕೆಗಳಿಗೆ ಸೀಮಿತವಾಗಿದ್ದಾರೆ. ಎನ್‌ಇಪಿಯಿಂದಾಗಿ ಏಕಾಏಕಿ ಬಹುಶಿಸ್ತೀಯ ಪಠ್ಯಕ್ರಮಕ್ಕೆ ಹೋಗಬೇಕಾಗಿದೆ. ವಾಣಿಜ್ಯ ಹಾಗೂ ಸೈನ್ಸ್ ವಿದ್ಯಾರ್ಥಿಗಳು ಸುಲಭವಾಗಿ ಆರ್ಟ್ಸ್ ತೆಗೆದುಕೊಂಡು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶಗಳಿವೆ. ಆದರೆ ಕಲಾ ವಿದ್ಯಾರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ವಿಷಯವನ್ನು ತೆಗೆದುಕೊಂಡು ಓದುವುದು ಕಷ್ಟವಾಗುತ್ತದೆ ಎಂಬುದು ಪ್ರತಿಭಟನೆಗೆ ಕಾರಣ.

ಎಐಡಿಎಸ್‌ಒ ಸಂಘಟನೆಯ ಉಪಾಧ್ಯಕ್ಷರಾದ ಆಸಿಯಾ ಮಾತನಾಡಿ, “ಐಚ್ಛಿಕ ವಿಷಯ ಎಂದರೆ ಏನು? ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವಂತಹದ್ದು. ಓಪನ್ ಎಲೆಕ್ಟಿವ್‌ ಅಂದ ಮೇಲೆ ಇವರು ಕಡ್ಡಾಯವೆಂದು ಬೇರೆ ವಿಷಯ ತೆಗೆದುಕೊಳ್ಳಿ ಎನ್ನುವುದು ಸರಿಯೇ? ವಿದ್ಯಾರ್ಥಿಗಳಿಗೆ ಹೇಳೋದೊಂದು ಮಾಡೋದೊಂದು ಆಗುವುದಿಲ್ಲವೆ? ಇವರು ವಿದ್ಯಾರ್ಥಿಗಳ ಪರವೋ? ಪಾಲಿಸಿಗಳನ್ನು ಮಾಡುವುದಕ್ಕಾಗಿಯೇ ಬಂದಿದ್ದಾರೋ? ಇಂತಹ ಪಾಲಿಸಿಗಳನ್ನು ಏತಕ್ಕಾಗಿ ತರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕುಲಪತಿಯವರು ಕೇಳಲು ಬಂದಿಲ್ಲ. ವಿದ್ಯಾರ್ಥಿಗಳು ತರಗತಿ ಬಿಟ್ಟು ಕುಳಿತ್ತಿದ್ದಾರೆ. ವಿದ್ಯಾರ್ಥಿಗಳ ಪರ ಇರಬೇಕಾದ ಸರ್ಕಾರಗಳು, ಕುಲಪತಿಗಳು ಕಿವಿಮುಚ್ಚಿ ಕುಳಿತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದನ್ನೂ ಓದಿರಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು


ಸರ್ಕಾರದ ಸೂಚನೆಯನ್ವಯ ಮೈಸೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿರುವುದು…
ಮುಕ್ತ ಐಚ್ಛಿಕ (ಓಪನ್‌ ಎಲೆಕ್ಟಿವ್) ಸಂಬಂಧಿಸಿದಂತೆ ವಿವಿ ಹೊಸ ಪಠ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು.

ಓಪನ್‌ ಎಲೆಕ್ಟಿವ್‌ (ಮುಕ್ತ ಐಚ್ಛಿಕ) ವಿಷಯವು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿದ್ದು. ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕಲ್ಲವೇ? ಆದರೆ ಸರ್ಕಾರ ಮುಕ್ತ ಐಚ್ಛಿಕ ವಿಷಯವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಮುಖ್ಯವಾಗಿ ಎನ್‌ಇಪಿ ಜಾರಿಯಾಗುತ್ತಿರುವುದು ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಮನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಂಬುದು ತಜ್ಞರ ಅಭಿಪ್ರಾಯ.

ಎನ್‌ಇಪಿ ವಿದ್ಯಾರ್ಥಿ ಸ್ನೇಹಿ ಎಂಬುದಕ್ಕೆ ಅರ್ಥವಿಲ್ಲ. ಈಗಾಗಲೇ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವು ಕಡೆ ಬಿ.ಎ. ವಿದ್ಯಾರ್ಥಿಗಳು ಬಿ.ಕಾಂ.ನಿಂದ ಓಪನ್ ಎಲೆಕ್ಟಿವ್‌ ಅಥವಾ ವಿಜ್ಞಾನದ ಓಪನ್ ಎಲೆಕ್ಟಿವ್ ತೆಗೆದುಕೊಂಡಿದ್ದಾರೆ. ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂಬ ಒತ್ತಾಯವಿರಲಿಲ್ಲ. ದುರಂತವೆಂದರೆ ಹೀಗೆ ಒತ್ತಾಯಪೂರ್ವಕವಾಗಿ ಹೇರಿದಾಗ ಹೈರಾಣುಗುತ್ತೇವೆ ಎಂಬುದು ತಜ್ಞರ ಆತಂಕ.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್‌, ಉಪಾಧ್ಯಕ್ಷರಾದ ಆಸಿಯಾ, ಕಾರ್ಯದರ್ಶಿ ಚಂದ್ರಕಲಾ ಹಾಜರಿದ್ದರು.


ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?


ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳುವುದೇನು?

ಎನ್‌ಇಪಿ ಜಾರಿಯಲ್ಲಿ ಹೆಚ್ಚು ಧಾವಂತದಲ್ಲಿರುವ ವಿವಿಗಳಲ್ಲಿ ಮೈಸೂರು ವಿವಿಯೂ ಒಂದು. ಸರ್ಕಾರದ ಹೊಸ ನಿಯಮವನ್ನು ಜಾರಿಗೊಳಿಸುವಂತೆ ಮೈಸೂರು ವಿವಿ ಸುತ್ತೋಲೆ ಹೊರಡಿಸಿರುವ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌, “ಪ್ರಥಮ ವರ್ಷದ ಪ್ರವೇಶಾತಿ ಡಿ.2ರಂದು ಆರಂಭವಾಗಿದೆ. ಈವರೆಗೆ ಕಾಲೇಜುಗಳು ಆರಂಭವಾಗಿರಲಿಲ್ಲ. ಹೀಗಾಗಿ ಈ ಸುತ್ತೋಲೆಯಿಂದ ತೊಂದರೆಯಾಗದು” ಎಂದರು.

‘ಗ್ರಾಮಾಂತರ ವಿದ್ಯಾರ್ಥಿಗಳ ಕಷ್ಟಕ್ಕೆ ಪರಿಹಾರವೇನು?’ ಎಂದು ಕೇಳಿದಾಗ, “ಎಲ್ಲಿಲ್ಲಿ ಇದು ಜಾರಿಗೆ ಸಾಧ್ಯವಿಲ್ಲವೋ ಅಲ್ಲಿ ಬಿಟ್ಟುಬಿಡಿ ಎಂದು ಸರ್ಕಾರ ಹೇಳಿದೆ. ಆರ್ಟ್ಸ್‌ ಇರುವ ಕಡೆ ಕಾಮರ್ಸ್ ಇದ್ದೇ ಇರುತ್ತದೆ. ಕಾಮರ್ಸ್ ವಿದ್ಯಾರ್ಥಿಗಳು ಆರ್ಟ್ಸ್ ವಿಷಯವನ್ನು, ಆರ್ಟ್ಸ್ ವಿದ್ಯಾರ್ಥಿಗಳು ಕಾಮರ್ಸ್ ತೆಗೆದುಕೊಳ್ಳಬಹುದು. ಎನ್‌ಇಪಿಯ ಮುಖ್ಯ ಉದ್ದೇಶ ಬಹುಶಿಸ್ತೀಯ ಪಠ್ಯಕ್ರಮ. ಕಲಾ ವಿದ್ಯಾರ್ಥಿ ವಾಣಿಜ್ಯದ ಒಂದು ವಿಷಯವನ್ನು, ವಿಜ್ಞಾನದ ಒಂದು ವಿಷಯವನ್ನು ತೆಗೆದುಕೊಂಡರೆ ಕೌಶಲ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ಕಷ್ಟವಾಗುವಂತೆ ಐಚ್ಛಿಕ ವಿಷಯವನ್ನು ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದಾಗ, “ಐಚ್ಛಿಕ ವಿಷಯಗಳು ಕಷ್ಟವಾಗಿರುವುದಿಲ್ಲ. ಪ್ರಾಥಮಿಕ ವಿಷಯಗಳನ್ನಷ್ಟೇ ಪರಿಚಯಿಸಲಾಗುತ್ತದೆ. ಉದ್ಯೋಗ ಕೇಂದ್ರಿತ ವಿಷಯಕ್ಕೆ ಐಚ್ಛಿಕ ಆಯ್ಕೆ ಆದ್ಯತೆ ನೀಡುತ್ತದೆ” ಎಂದರು. ಐಚ್ಛಿಕ ವಿಷಯ ಕಷ್ಟವಾಗಿರುವುದಿಲ್ಲ ಆದರೆ ಉದ್ಯೋಗ ದೊರಕಿಸಿಕೊಡುತ್ತದೆ ಎಂಬುದು ಕುಲಪತಿಯವರ ಅಭಿಪ್ರಾಯ. ಆದರೆ ಬೋಧಕರ ಪ್ರಕಾರ, ಈ ಐಚ್ಛಿಕ ವಿಷಯಗಳು ವಿದ್ಯಾರ್ಥಿಗಳಿಗೆ ತಲೆಬಿಸಿಯಾಗುವಂತಿವೆ.

ಈ ವಿಚಾರವಾಗಿ ಮೈಸೂರು ವಿವಿ ಕುಲಪತಿಯವರು ಅರ್ಧಸತ್ಯಗಳನ್ನು ಹೇಳುತ್ತಿದ್ದಾರೆ ಎಂಬುದನ್ನು ‘ನಾನುಗೌರಿ.ಕಾಂ’ ವರದಿ ಮಾಡಿದೆ (ಪೂರ್ಣ ವಿವರಗಳಿಗೆ ‘ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು’ ವರದಿ ಓದಿರಿ)


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...