Homeಕರ್ನಾಟಕNEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ - ಡಿ.ಕೆ. ಶಿವಕುಮಾರ್ ಆಕ್ರೋಶ

NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ NEP ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. “ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

“ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ” ಎಂದು ಸಂಶಯ ವ್ಯಕ್ತಪಡಿಸಿದರು.

“ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರ್ಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

“ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಡಿ.ಕೆ.ಶಿ. ಅವರ ಅಭಿಪ್ರಾಯ ಸರಿಯಾಗಿದೆ. ಆದರೆ ಮನುವಾದಿಗಳು ಅಧಿಕಾರದಲ್ಲಿ ತಳವೂರಿರುವುದಕ್ಕೆ, ಕಾಂಗ್ರೆಸ್ ಆಡಳಿತದಲ್ಲಿನ ವೈಪಲ್ಯಗಳು ಸಹ ಕಾರಣ. ಮನುವಾದಿಗಳ ವಿರುದ್ದ ಕಾಂಗ್ರೆಸ್ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಏಕಾಂಗಿ ಹೋರಾಟದಿಂದ ಮನುವಾದಿಗಳನ್ನು ಅಧಿಕಾರದಿಂದ ತೊಲಗಿಸುವುದು ಸಾದ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....