Homeಕರ್ನಾಟಕNEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ - ಡಿ.ಕೆ. ಶಿವಕುಮಾರ್ ಆಕ್ರೋಶ

NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ NEP ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. “ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

“ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ” ಎಂದು ಸಂಶಯ ವ್ಯಕ್ತಪಡಿಸಿದರು.

“ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರ್ಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

“ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಡಿ.ಕೆ.ಶಿ. ಅವರ ಅಭಿಪ್ರಾಯ ಸರಿಯಾಗಿದೆ. ಆದರೆ ಮನುವಾದಿಗಳು ಅಧಿಕಾರದಲ್ಲಿ ತಳವೂರಿರುವುದಕ್ಕೆ, ಕಾಂಗ್ರೆಸ್ ಆಡಳಿತದಲ್ಲಿನ ವೈಪಲ್ಯಗಳು ಸಹ ಕಾರಣ. ಮನುವಾದಿಗಳ ವಿರುದ್ದ ಕಾಂಗ್ರೆಸ್ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಏಕಾಂಗಿ ಹೋರಾಟದಿಂದ ಮನುವಾದಿಗಳನ್ನು ಅಧಿಕಾರದಿಂದ ತೊಲಗಿಸುವುದು ಸಾದ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....