Homeಕರ್ನಾಟಕNEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ - ಡಿ.ಕೆ. ಶಿವಕುಮಾರ್ ಆಕ್ರೋಶ

NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ NEP ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. “ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

“ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ” ಎಂದು ಸಂಶಯ ವ್ಯಕ್ತಪಡಿಸಿದರು.

“ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರ್ಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

“ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಡಿ.ಕೆ.ಶಿ. ಅವರ ಅಭಿಪ್ರಾಯ ಸರಿಯಾಗಿದೆ. ಆದರೆ ಮನುವಾದಿಗಳು ಅಧಿಕಾರದಲ್ಲಿ ತಳವೂರಿರುವುದಕ್ಕೆ, ಕಾಂಗ್ರೆಸ್ ಆಡಳಿತದಲ್ಲಿನ ವೈಪಲ್ಯಗಳು ಸಹ ಕಾರಣ. ಮನುವಾದಿಗಳ ವಿರುದ್ದ ಕಾಂಗ್ರೆಸ್ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಏಕಾಂಗಿ ಹೋರಾಟದಿಂದ ಮನುವಾದಿಗಳನ್ನು ಅಧಿಕಾರದಿಂದ ತೊಲಗಿಸುವುದು ಸಾದ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...