Homeಮುಖಪುಟಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

- Advertisement -
- Advertisement -

ಎಲ್ಲಾ ಶಾಲಾ ಮಕ್ಕಳಿಗೆ ಸಂಸ್ಕೃತವನ್ನು ಕಡ್ಡಾಯವಾಗಿ ತೃತೀಯ ಭಾಷೆಯಾಗಿ ಕಲಿಸಲು, ಮನುಸ್ಮೃತಿ ಮತ್ತು ಪ್ರಾಚೀನ ಸಂಖ್ಯಾ ಪದ್ಧತಿಗಳನ್ನು ಪಠ್ಯಕ್ರಮದಲ್ಲಿ ಪರಿಚಯಿಸಲು ರಾಜ್ಯ ಸರ್ಕಾರ ಎನ್‌ಸಿಇಆರ್‌ಟಿಗೆ ಪ್ರಸ್ತಾವನೆ ಸಲ್ಲಿಸಿದೆ.

“ಪೈಥಾಗರಸ್ ಪ್ರಮೇಯ, ನ್ಯೂಟನ್‌ನ ತಲೆಯ ಮೇಲೆ ಸೇಬು ಬೀಳುವ ಪ್ರಸಂಗ ಇತ್ಯಾದಿ ಸುಳ್ಳುಗಳನ್ನು ಹೇಗೆ ರಚಿಸಲಾಗುತ್ತಿದೆ ಮತ್ತು ಪ್ರಚಾರ ಮಾಡಲಾಗುತ್ತಿದೆ” ಎಂದು ಪ್ರಶ್ನಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದೆ.

ರಾಜ್ಯ ಸರ್ಕಾರದಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆ ಸಂಬಂಧಿಸಿದಂತೆ ಕರ್ನಾಟಕದ ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎನ್‌ಇಪಿ ಅಡಿಯಲ್ಲಿ ರಾಜ್ಯ ಪಠ್ಯಕ್ರಮವನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ಗೆ ಕಳುಹಿಸಬೇಕು. ಪ್ರತಿ ರಾಜ್ಯವೂ ಪೊಷಿಷನ್‌ ಪೇಪರ್‌ ಅಪ್‌ಲೋಡ್‌ ಮಾಡಬೇಕಿದೆ. ಅದರ ಭಾಗವಾಗಿ ಕರ್ನಾಟಕ ಈ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ರಾಜ್ಯದಲ್ಲಿ ಎನ್‌ಇಪಿ ಕಾರ್ಯಗತಗೊಳಿಸುವ ಕಾರ್ಯಪಡೆಯ ಅಧ್ಯಕ್ಷರಾದ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ,  “ಎನ್‌ಸಿಇಆರ್‌ಟಿಗೆ ಸಲ್ಲಿಕೆ ಮಾಡಿದ ತಕ್ಷಣ ಅದು ಪಠ್ಯಪುಸ್ತಕದಲ್ಲಿ ಬಂದು ಬಿಡುತ್ತದೆ ಎಂದು ಅರ್ಥವಲ್ಲ. ಪೈಥಾಗರಸ್‌ ಥಿಯರಿ ಸುಳ್ಳು ಎಂಬ ಚರ್ಚೆ ಅಂತಾರಾಷ್ಟ್ರೀಯ ಮಟ್ಟದಲ್ಲಿದೆ. ಫೈಥಾಗರಸ್ ಥಿಯರಿ ಬೌದ್ಧಾಯನ ಸಿದ್ಧಾಂತದಲ್ಲಿ ಮೊದಲು ಚರ್ಚೆಯಾಗಿದೆ. ಆದರೆ ಪಾಶ್ಚಿಮಾತ್ಯರು ಹೇಳಿದ್ದನ್ನು ನಂಬುತ್ತಿದ್ದೇವೆ. ವೈಶೇಷಿಕ ದಾರ್ಶನಿಕ ಶಾಸ್ತ್ರದಲ್ಲಿ ಗುರುತ್ವ ಎಂಬ ವಿಷಯ ಬರುತ್ತದೆ. ಇದೆಲ್ಲವೂ ಚರ್ಚೆಯಾಗಬೇಕು. ಇದು ಸರಿ, ಅದು ತಪ್ಪು ಎಂದು ಹೇಳುತ್ತಿಲ್ಲ. ಕೆಲವು ಸಿದ್ಧಾಂತಗಳನ್ನು ನಮ್ಮ ತಲೆಯ ಮೇಲೆ ಹಾಕಿದ್ದಾರೆ. ಅವುಗಳಿಗೆ ಯಾವುದೇ ವೈಜ್ಞಾನಿಕ ತಳಹದಿ ಇಲ್ಲ. ಅವುಗಳನ್ನು ಪ್ರಶ್ನೆ ಮಾಡುವ ಕೌಂಟರ್‌ ಥಿಯರಿಗಳು ಈಗ ಬರುತ್ತಿವೆ. ಇದನ್ನು ಒಪ್ಪಲೇಬೇಕೆಂದೂ ಇಲ್ಲ” ಎಂದು ತಿಳಿಸಿದರು.

“ಸ್ಮೃತಿಗಳನ್ನು ಬೋಧಿಸುವ ಸಲಹೆ ನೀಡಲಾಗಿದೆ. ಮನುಸ್ಮೃತಿ ಎಂದರೆ ಪುರುಷಸೂಕ್ತ ಮಾತ್ರವಲ್ಲ. ಒಳ್ಳೆಯದನ್ನು ತೆಗೆದುಕೊಂಡು ಕೆಟ್ಟದ್ದನ್ನು ಬಿಡಬೇಕು. ಭಾರತೀಯ ಭಾಷೆಯ ಆಯ್ಕೆ ಎಂದರೆ ಸಂಸ್ಕೃತವೇ ಆಗಬೇಕೆಂದೇನೂ ಅಲ್ಲ. ತಮಿಳು ಆಗಬಹುದು. ಇನ್ಯಾವುದೇ ಭಾಷೆಯೂ ಆಗಬಹುದು. ಆದರೆ ಸಂಸ್ಕೃತದಲ್ಲಿ ವಿಚಾರಗಳಿವೆ” ಎಂದು ಸಮರ್ಥಿಸಿಕೊಂಡರು.

ಏನಿದು ಪೊಷಿಷನ್‌ ಪೇಪರ್‌?

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ಯಾವುದಾದರೂ ಒಂದು ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳುವಾಗ ತಮ್ಮ ನಿಲುವನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಬಂಧವೇ ಪೊಸಿಷನ್‌ ಪೇಪರ್‌. ರಾಮಾಯಣ, ಮಹಾಭಾರತ, ಪುರಾಣ, ಕಥೆ, ಪುಣ್ಯಕತೆ, ಪಂಚತಂತ್ರ ಇತ್ಯಾದಿಗಳಲ್ಲಿ ಏನಾಗಿತ್ತು? ಅದನ್ನು ಏಕೆ ಬೋಧಿಸಬೇಕು ಇತ್ಯಾದಿಗಳನ್ನು ಈ ಪ್ರಬಂಧದಲ್ಲಿ ವಿವರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ಸಲ್ಲಿಸುವ ಈ ಪೊಷಿಷನ್‌ ಪೇಪರ್‌ಗಳ ಆಧಾರದಲ್ಲಿ ಪಠ್ಯ ರೂಪಿತವಾಗುತ್ತದೆ.

ಕರ್ನಾಟಕ ಸರ್ಕಾರ ಒಟ್ಟು 26 ಪೊಷಿಷನ್ ಪೇಪರ್‌ಗಳನ್ನು ಸಲ್ಲಿಸಿದೆ. ಅದರಲ್ಲಿ ಪೊಷಿಷನ್‌ ಪೇಪರ್ಸ್ ಆಫ್‌ ನಾಲೆಡ್ಜ್‌ ಆಫ್‌ ಇಂಡಿಯಾ ಹಲವಾರು ಸಮಸ್ಯಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಆಕ್ಷೇಪಗಳನ್ನು ಅಲ್ಲಗಳೆಯುವ ಮದನ್‌ ಗೋಪಾಲ್‌, “ವಿದ್ವತ್‌ಪೂರ್ಣ ಐಐಟಿ ಪ್ರೊಫೆಸರ್‌ ಅಧ್ಯಕ್ಷತೆಯಲ್ಲಿ ಈ ಪೇಪರ್‌ ಸಿದ್ಧಪಡಿಸಲಾಗಿದೆ. ಇದನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ” ಎಂದಿದ್ದಾರೆ.

‘ಸಂಸ್ಕೃತ ಕಡ್ಡಾಯ ಕಲಿಕೆಗೆ ಪ್ರಸ್ತಾಪ’

ಭಾರತೀಯ ಜ್ಞಾನವೆಲ್ಲ ಸಂಸ್ಕೃತದಲ್ಲಿದ್ದು, ಅದನ್ನು ಕಡ್ಡಾಯವಾಗಿ ಕಲಿಸಬೇಕೆಂಬ ಪ್ರಸ್ತಾಪವನ್ನು ಸರ್ಕಾರ ಮಾಡಿದೆ. ಸಾವಿರಾರು ಭಾಷೆಗಳಿರುವ ನಾಡಿನಲ್ಲಿ ಮೂರು ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು. ಒಂದು: ಪ್ರಾದೇಶಿಕ ಭಾಷೆ, ಎರಡು: ಇಂಗ್ಲಿಷ್‌ ಮೂರು: ಭಾರತೀಯ ಭಾಷೆ (ಸಂಸ್ಕೃತ). ಸಂಸ್ಕೃತ ಭಾಷೆಯಲ್ಲಿ ಭಾರತದ ಎಲ್ಲ ಜ್ಞಾನವು ಇದ್ದು, ಅದು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಪೊಷಿಷನ್‌ ಪೇಪರ್‌ನಲ್ಲಿ ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಎಲ್ಲವೂ ಭಾರತದಲ್ಲಿಯೇ ಇತ್ತು ಎನ್ನುವುದು ಎನ್‌ಇಪಿ ಉದ್ದೇಶ: ನಿರಂಜನಾರಾಧ್ಯ

“ಪಾಶ್ಚಾತ್ಯ ವಿಜ್ಞಾನ ಸುಳ್ಳು. ಭಾರತದಲ್ಲಿ ಎಲ್ಲವೂ ಇತ್ತು ಎಂಬುದನ್ನು ಪ್ರತಿಪಾದಿಸುವುದೇ ಎನ್‌ಇಪಿ. ಭಾರತೀಕರಣ, ಭರತವರ್ಷ- ಇತರೆ ಹೆಸರುಗಳಲ್ಲಿ ಈ ವಿಷಯಗಳನ್ನು ಬೋಧಿಸಲಾಗುತ್ತದೆ. 26 ಪೋಷಿಷನ್ ಪೇಪರ್‌ಗಳನ್ನು ರಾಜ್ಯ ಸರ್ಕಾರ ಮಾಡಿದೆ. ಅವುಗಳನ್ನು ಈಗ ಎನ್‌ಸಿಇಆರ್‌ಟಿಗೆ ಕಳುಹಿಸಲಾಗಿದೆ. ಅವುಗಳನ್ನೆಲ್ಲ ಕೇಂದ್ರೀಕರಿಸಿ ಪಠ್ಯ ರೂಪಿಸಲಾಗುತ್ತದೆ. ಶಿಕ್ಷಣ ವ್ಯವಸ್ಥೆಗೆ ಇದು ಮಾರ್ಗಸೂಚಿಯಾಗುತ್ತದೆ” ಎಂದರು.

ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?

“ಶಿಕ್ಷಣಯನ್ನು ಅನುಸರಿಸದೆಯೇ ಈ ಹಿಂದೆ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಠ್ಯದಲ್ಲಿ ಈ ವಿಷಯಗಳನ್ನು ಸೇರಿಸಲಾಗುತ್ತಿತ್ತು. ಅದಕ್ಕೆ ವಿರೋಧವೂ ಬಂತು. ಈಗ ಫ್ರೇಮ್‌ ವರ್ಕ್ ಇಟ್ಟುಕೊಂಡು ದೊಡ್ಡ ಮಟ್ಟದಲ್ಲಿ ಜಾರಿಗೆ ತರುತ್ತಿದ್ದಾರೆ. ಈ ರೀತಿಯ ಬದಲಾವಣೆಗಳು ಸಮಾಜ, ವಿಜ್ಞಾನ, ಗಣಿತಕ್ಕೆ ನಿಲ್ಲುವುದು” ಎಂದು ತಿಳಿಸಿದರು.

“ಸನಾತನ ಭಾರತದಲ್ಲಿ ಎಲ್ಲವೂ ಇತ್ತು. ನಮಗೆ ಪಾಶ್ಚಿಮಾತ್ಯ ಶಿಕ್ಷಣ ಬೇಕಿಲ್ಲ. ನಾವೇ ಮೊದಲು ಎಲ್ಲವನ್ನೂ ಕಂಡು ಹಿಡಿದಿದ್ದು, ನಂತರದಲ್ಲಿ ನಮ್ಮ ಜ್ಞಾನವನ್ನು ಪಾಶ್ಚೀಮಾತ್ಯರು ಕದ್ದರು. ಭಾರತೀಯ ಜ್ಞಾನ ವ್ಯವಸ್ಥೆಯನ್ನು ಬಿಟ್ಟು, ಪಾಶ್ಚಿಮಾತ್ಯ ಜ್ಞಾನ ವ್ಯವಸ್ಥೆಯನ್ನು ನಾವು ಕಟ್ಟಿಕೊಂಡಿದ್ದೇವೆ. ಅದನ್ನು ಸರ್ವನಾಶ (ಬುಲ್ಡೋಜ್‌) ಮಾಡಿ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಪುನರುತ್ಥಾನ ಮಾಡಬೇಕು ಎಂಬುದು ಅವರ ಅಜೆಂಡಾ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ, ಪೋಷಿಷನ್‌ ಪೇಪರ್‌, ಪಠ್ಯಕ್ರಮ ಚೌಕಟ್ಟು ಎಂಬ ಮಾರ್ಗಗಳನ್ನು ಹಿಡಿದಿದ್ದಾರೆ” ಎಂದು ವಿವರಿಸಿದರು.

ಯಾವ ಶಿಕ್ಷಣ ವ್ಯವಸ್ಥೆಯಿಂದ ವಿಚಾರವಂತರಾಗಿ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಥರದ ಮಹನೀಯರು ಸ್ವಾತಂತ್ರ್ಯ ಹೋರಾಟವನ್ನು ಕಟ್ಟಿದರೋ ಅದನ್ನು ಸಮಸ್ಯಾತ್ಮಕವಾದದ್ದು ಎಂದು ಇವರು ಭಾವಿಸುತ್ತಾರೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶೂದ್ರ ಮತ್ತು ದಲಿತ ಸಮುದಾಯಗಳ ಗುಲಾಮ ಶಾಸಕರು ಏನು ಕತ್ತೆ ಮೆಯುಸುತ್ತಿದ್ದಾರಾ?ಕೇವಲ 3% ಇರುವ ಸಮುದಾಯದವರ ಅಡಿಯಾಳು ಗುಲಾಮರೆ ಇವರು? ಥು ನಿಮ್ಮ ಜನ್ಮಕ್ಕಿಷ್ಟು ,ಭಾಬಾಸಾಹೇಬರ ಸಂವಿಧಾನದ ಮೇರೆಗೆ ನೀವೆಲ್ಲಾ ಶಾಸಕ,ಮಂತ್ರಿಗಳಾಗಿದ್ದೀರಾ, ಅದನ್ನ ತೆಗೆದರೆ ಆಗ ನಿಮ್ಮ ಬುಡಗಳಿಗೆ ಬೆಂಕಿ ತಗಲತ್ತೇನೋ?

  2. ಮಾನ್ಯರೇ ತಾವೂ ಸತ್ಯ ಸಂಗತಿ ನಿಜವಾದ ಮಾತು ಹೇಳಿದಿರಿ , ಅನಂತ ಧನ್ಯವಾದಗಳು ಶರಣು ಶರಣಾರ್ಥಿ ಮಲ್ಲಿಕಾರ್ಜುನ ನಾಗಶೆಟ್ಟಿ ಬೀದರ್ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...