Homeಮುಖಪುಟಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

- Advertisement -
- Advertisement -

ಎಲ್ಲಾ ಶಾಲಾ ಮಕ್ಕಳಿಗೆ ಸಂಸ್ಕೃತವನ್ನು ಕಡ್ಡಾಯವಾಗಿ ತೃತೀಯ ಭಾಷೆಯಾಗಿ ಕಲಿಸಲು, ಮನುಸ್ಮೃತಿ ಮತ್ತು ಪ್ರಾಚೀನ ಸಂಖ್ಯಾ ಪದ್ಧತಿಗಳನ್ನು ಪಠ್ಯಕ್ರಮದಲ್ಲಿ ಪರಿಚಯಿಸಲು ರಾಜ್ಯ ಸರ್ಕಾರ ಎನ್‌ಸಿಇಆರ್‌ಟಿಗೆ ಪ್ರಸ್ತಾವನೆ ಸಲ್ಲಿಸಿದೆ.

“ಪೈಥಾಗರಸ್ ಪ್ರಮೇಯ, ನ್ಯೂಟನ್‌ನ ತಲೆಯ ಮೇಲೆ ಸೇಬು ಬೀಳುವ ಪ್ರಸಂಗ ಇತ್ಯಾದಿ ಸುಳ್ಳುಗಳನ್ನು ಹೇಗೆ ರಚಿಸಲಾಗುತ್ತಿದೆ ಮತ್ತು ಪ್ರಚಾರ ಮಾಡಲಾಗುತ್ತಿದೆ” ಎಂದು ಪ್ರಶ್ನಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದೆ.

ರಾಜ್ಯ ಸರ್ಕಾರದಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆ ಸಂಬಂಧಿಸಿದಂತೆ ಕರ್ನಾಟಕದ ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎನ್‌ಇಪಿ ಅಡಿಯಲ್ಲಿ ರಾಜ್ಯ ಪಠ್ಯಕ್ರಮವನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ಗೆ ಕಳುಹಿಸಬೇಕು. ಪ್ರತಿ ರಾಜ್ಯವೂ ಪೊಷಿಷನ್‌ ಪೇಪರ್‌ ಅಪ್‌ಲೋಡ್‌ ಮಾಡಬೇಕಿದೆ. ಅದರ ಭಾಗವಾಗಿ ಕರ್ನಾಟಕ ಈ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ರಾಜ್ಯದಲ್ಲಿ ಎನ್‌ಇಪಿ ಕಾರ್ಯಗತಗೊಳಿಸುವ ಕಾರ್ಯಪಡೆಯ ಅಧ್ಯಕ್ಷರಾದ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ,  “ಎನ್‌ಸಿಇಆರ್‌ಟಿಗೆ ಸಲ್ಲಿಕೆ ಮಾಡಿದ ತಕ್ಷಣ ಅದು ಪಠ್ಯಪುಸ್ತಕದಲ್ಲಿ ಬಂದು ಬಿಡುತ್ತದೆ ಎಂದು ಅರ್ಥವಲ್ಲ. ಪೈಥಾಗರಸ್‌ ಥಿಯರಿ ಸುಳ್ಳು ಎಂಬ ಚರ್ಚೆ ಅಂತಾರಾಷ್ಟ್ರೀಯ ಮಟ್ಟದಲ್ಲಿದೆ. ಫೈಥಾಗರಸ್ ಥಿಯರಿ ಬೌದ್ಧಾಯನ ಸಿದ್ಧಾಂತದಲ್ಲಿ ಮೊದಲು ಚರ್ಚೆಯಾಗಿದೆ. ಆದರೆ ಪಾಶ್ಚಿಮಾತ್ಯರು ಹೇಳಿದ್ದನ್ನು ನಂಬುತ್ತಿದ್ದೇವೆ. ವೈಶೇಷಿಕ ದಾರ್ಶನಿಕ ಶಾಸ್ತ್ರದಲ್ಲಿ ಗುರುತ್ವ ಎಂಬ ವಿಷಯ ಬರುತ್ತದೆ. ಇದೆಲ್ಲವೂ ಚರ್ಚೆಯಾಗಬೇಕು. ಇದು ಸರಿ, ಅದು ತಪ್ಪು ಎಂದು ಹೇಳುತ್ತಿಲ್ಲ. ಕೆಲವು ಸಿದ್ಧಾಂತಗಳನ್ನು ನಮ್ಮ ತಲೆಯ ಮೇಲೆ ಹಾಕಿದ್ದಾರೆ. ಅವುಗಳಿಗೆ ಯಾವುದೇ ವೈಜ್ಞಾನಿಕ ತಳಹದಿ ಇಲ್ಲ. ಅವುಗಳನ್ನು ಪ್ರಶ್ನೆ ಮಾಡುವ ಕೌಂಟರ್‌ ಥಿಯರಿಗಳು ಈಗ ಬರುತ್ತಿವೆ. ಇದನ್ನು ಒಪ್ಪಲೇಬೇಕೆಂದೂ ಇಲ್ಲ” ಎಂದು ತಿಳಿಸಿದರು.

“ಸ್ಮೃತಿಗಳನ್ನು ಬೋಧಿಸುವ ಸಲಹೆ ನೀಡಲಾಗಿದೆ. ಮನುಸ್ಮೃತಿ ಎಂದರೆ ಪುರುಷಸೂಕ್ತ ಮಾತ್ರವಲ್ಲ. ಒಳ್ಳೆಯದನ್ನು ತೆಗೆದುಕೊಂಡು ಕೆಟ್ಟದ್ದನ್ನು ಬಿಡಬೇಕು. ಭಾರತೀಯ ಭಾಷೆಯ ಆಯ್ಕೆ ಎಂದರೆ ಸಂಸ್ಕೃತವೇ ಆಗಬೇಕೆಂದೇನೂ ಅಲ್ಲ. ತಮಿಳು ಆಗಬಹುದು. ಇನ್ಯಾವುದೇ ಭಾಷೆಯೂ ಆಗಬಹುದು. ಆದರೆ ಸಂಸ್ಕೃತದಲ್ಲಿ ವಿಚಾರಗಳಿವೆ” ಎಂದು ಸಮರ್ಥಿಸಿಕೊಂಡರು.

ಏನಿದು ಪೊಷಿಷನ್‌ ಪೇಪರ್‌?

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ಯಾವುದಾದರೂ ಒಂದು ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳುವಾಗ ತಮ್ಮ ನಿಲುವನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಬಂಧವೇ ಪೊಸಿಷನ್‌ ಪೇಪರ್‌. ರಾಮಾಯಣ, ಮಹಾಭಾರತ, ಪುರಾಣ, ಕಥೆ, ಪುಣ್ಯಕತೆ, ಪಂಚತಂತ್ರ ಇತ್ಯಾದಿಗಳಲ್ಲಿ ಏನಾಗಿತ್ತು? ಅದನ್ನು ಏಕೆ ಬೋಧಿಸಬೇಕು ಇತ್ಯಾದಿಗಳನ್ನು ಈ ಪ್ರಬಂಧದಲ್ಲಿ ವಿವರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ಸಲ್ಲಿಸುವ ಈ ಪೊಷಿಷನ್‌ ಪೇಪರ್‌ಗಳ ಆಧಾರದಲ್ಲಿ ಪಠ್ಯ ರೂಪಿತವಾಗುತ್ತದೆ.

ಕರ್ನಾಟಕ ಸರ್ಕಾರ ಒಟ್ಟು 26 ಪೊಷಿಷನ್ ಪೇಪರ್‌ಗಳನ್ನು ಸಲ್ಲಿಸಿದೆ. ಅದರಲ್ಲಿ ಪೊಷಿಷನ್‌ ಪೇಪರ್ಸ್ ಆಫ್‌ ನಾಲೆಡ್ಜ್‌ ಆಫ್‌ ಇಂಡಿಯಾ ಹಲವಾರು ಸಮಸ್ಯಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಆಕ್ಷೇಪಗಳನ್ನು ಅಲ್ಲಗಳೆಯುವ ಮದನ್‌ ಗೋಪಾಲ್‌, “ವಿದ್ವತ್‌ಪೂರ್ಣ ಐಐಟಿ ಪ್ರೊಫೆಸರ್‌ ಅಧ್ಯಕ್ಷತೆಯಲ್ಲಿ ಈ ಪೇಪರ್‌ ಸಿದ್ಧಪಡಿಸಲಾಗಿದೆ. ಇದನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ” ಎಂದಿದ್ದಾರೆ.

‘ಸಂಸ್ಕೃತ ಕಡ್ಡಾಯ ಕಲಿಕೆಗೆ ಪ್ರಸ್ತಾಪ’

ಭಾರತೀಯ ಜ್ಞಾನವೆಲ್ಲ ಸಂಸ್ಕೃತದಲ್ಲಿದ್ದು, ಅದನ್ನು ಕಡ್ಡಾಯವಾಗಿ ಕಲಿಸಬೇಕೆಂಬ ಪ್ರಸ್ತಾಪವನ್ನು ಸರ್ಕಾರ ಮಾಡಿದೆ. ಸಾವಿರಾರು ಭಾಷೆಗಳಿರುವ ನಾಡಿನಲ್ಲಿ ಮೂರು ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು. ಒಂದು: ಪ್ರಾದೇಶಿಕ ಭಾಷೆ, ಎರಡು: ಇಂಗ್ಲಿಷ್‌ ಮೂರು: ಭಾರತೀಯ ಭಾಷೆ (ಸಂಸ್ಕೃತ). ಸಂಸ್ಕೃತ ಭಾಷೆಯಲ್ಲಿ ಭಾರತದ ಎಲ್ಲ ಜ್ಞಾನವು ಇದ್ದು, ಅದು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಪೊಷಿಷನ್‌ ಪೇಪರ್‌ನಲ್ಲಿ ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಎಲ್ಲವೂ ಭಾರತದಲ್ಲಿಯೇ ಇತ್ತು ಎನ್ನುವುದು ಎನ್‌ಇಪಿ ಉದ್ದೇಶ: ನಿರಂಜನಾರಾಧ್ಯ

“ಪಾಶ್ಚಾತ್ಯ ವಿಜ್ಞಾನ ಸುಳ್ಳು. ಭಾರತದಲ್ಲಿ ಎಲ್ಲವೂ ಇತ್ತು ಎಂಬುದನ್ನು ಪ್ರತಿಪಾದಿಸುವುದೇ ಎನ್‌ಇಪಿ. ಭಾರತೀಕರಣ, ಭರತವರ್ಷ- ಇತರೆ ಹೆಸರುಗಳಲ್ಲಿ ಈ ವಿಷಯಗಳನ್ನು ಬೋಧಿಸಲಾಗುತ್ತದೆ. 26 ಪೋಷಿಷನ್ ಪೇಪರ್‌ಗಳನ್ನು ರಾಜ್ಯ ಸರ್ಕಾರ ಮಾಡಿದೆ. ಅವುಗಳನ್ನು ಈಗ ಎನ್‌ಸಿಇಆರ್‌ಟಿಗೆ ಕಳುಹಿಸಲಾಗಿದೆ. ಅವುಗಳನ್ನೆಲ್ಲ ಕೇಂದ್ರೀಕರಿಸಿ ಪಠ್ಯ ರೂಪಿಸಲಾಗುತ್ತದೆ. ಶಿಕ್ಷಣ ವ್ಯವಸ್ಥೆಗೆ ಇದು ಮಾರ್ಗಸೂಚಿಯಾಗುತ್ತದೆ” ಎಂದರು.

ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?

“ಶಿಕ್ಷಣಯನ್ನು ಅನುಸರಿಸದೆಯೇ ಈ ಹಿಂದೆ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಠ್ಯದಲ್ಲಿ ಈ ವಿಷಯಗಳನ್ನು ಸೇರಿಸಲಾಗುತ್ತಿತ್ತು. ಅದಕ್ಕೆ ವಿರೋಧವೂ ಬಂತು. ಈಗ ಫ್ರೇಮ್‌ ವರ್ಕ್ ಇಟ್ಟುಕೊಂಡು ದೊಡ್ಡ ಮಟ್ಟದಲ್ಲಿ ಜಾರಿಗೆ ತರುತ್ತಿದ್ದಾರೆ. ಈ ರೀತಿಯ ಬದಲಾವಣೆಗಳು ಸಮಾಜ, ವಿಜ್ಞಾನ, ಗಣಿತಕ್ಕೆ ನಿಲ್ಲುವುದು” ಎಂದು ತಿಳಿಸಿದರು.

“ಸನಾತನ ಭಾರತದಲ್ಲಿ ಎಲ್ಲವೂ ಇತ್ತು. ನಮಗೆ ಪಾಶ್ಚಿಮಾತ್ಯ ಶಿಕ್ಷಣ ಬೇಕಿಲ್ಲ. ನಾವೇ ಮೊದಲು ಎಲ್ಲವನ್ನೂ ಕಂಡು ಹಿಡಿದಿದ್ದು, ನಂತರದಲ್ಲಿ ನಮ್ಮ ಜ್ಞಾನವನ್ನು ಪಾಶ್ಚೀಮಾತ್ಯರು ಕದ್ದರು. ಭಾರತೀಯ ಜ್ಞಾನ ವ್ಯವಸ್ಥೆಯನ್ನು ಬಿಟ್ಟು, ಪಾಶ್ಚಿಮಾತ್ಯ ಜ್ಞಾನ ವ್ಯವಸ್ಥೆಯನ್ನು ನಾವು ಕಟ್ಟಿಕೊಂಡಿದ್ದೇವೆ. ಅದನ್ನು ಸರ್ವನಾಶ (ಬುಲ್ಡೋಜ್‌) ಮಾಡಿ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಪುನರುತ್ಥಾನ ಮಾಡಬೇಕು ಎಂಬುದು ಅವರ ಅಜೆಂಡಾ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ, ಪೋಷಿಷನ್‌ ಪೇಪರ್‌, ಪಠ್ಯಕ್ರಮ ಚೌಕಟ್ಟು ಎಂಬ ಮಾರ್ಗಗಳನ್ನು ಹಿಡಿದಿದ್ದಾರೆ” ಎಂದು ವಿವರಿಸಿದರು.

ಯಾವ ಶಿಕ್ಷಣ ವ್ಯವಸ್ಥೆಯಿಂದ ವಿಚಾರವಂತರಾಗಿ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಥರದ ಮಹನೀಯರು ಸ್ವಾತಂತ್ರ್ಯ ಹೋರಾಟವನ್ನು ಕಟ್ಟಿದರೋ ಅದನ್ನು ಸಮಸ್ಯಾತ್ಮಕವಾದದ್ದು ಎಂದು ಇವರು ಭಾವಿಸುತ್ತಾರೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶೂದ್ರ ಮತ್ತು ದಲಿತ ಸಮುದಾಯಗಳ ಗುಲಾಮ ಶಾಸಕರು ಏನು ಕತ್ತೆ ಮೆಯುಸುತ್ತಿದ್ದಾರಾ?ಕೇವಲ 3% ಇರುವ ಸಮುದಾಯದವರ ಅಡಿಯಾಳು ಗುಲಾಮರೆ ಇವರು? ಥು ನಿಮ್ಮ ಜನ್ಮಕ್ಕಿಷ್ಟು ,ಭಾಬಾಸಾಹೇಬರ ಸಂವಿಧಾನದ ಮೇರೆಗೆ ನೀವೆಲ್ಲಾ ಶಾಸಕ,ಮಂತ್ರಿಗಳಾಗಿದ್ದೀರಾ, ಅದನ್ನ ತೆಗೆದರೆ ಆಗ ನಿಮ್ಮ ಬುಡಗಳಿಗೆ ಬೆಂಕಿ ತಗಲತ್ತೇನೋ?

  2. ಮಾನ್ಯರೇ ತಾವೂ ಸತ್ಯ ಸಂಗತಿ ನಿಜವಾದ ಮಾತು ಹೇಳಿದಿರಿ , ಅನಂತ ಧನ್ಯವಾದಗಳು ಶರಣು ಶರಣಾರ್ಥಿ ಮಲ್ಲಿಕಾರ್ಜುನ ನಾಗಶೆಟ್ಟಿ ಬೀದರ್ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...