Homeಅಂತರಾಷ್ಟ್ರೀಯನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

ನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

- Advertisement -
- Advertisement -

ಕಠ್ಮಂಡು: ನೇಪಾಳದಲ್ಲಿ ‘ಜೆನ್ ಜಡ್’ ಯುವಕರ ನೇತೃತ್ವದ ಪ್ರತಿಭಟನೆಗಳು ದಶಕಗಳಲ್ಲಿಯೇ ಅತ್ಯಂತ ಕೆಟ್ಟ ರಾಜಕೀಯ ಪ್ರಕ್ಷುಬ್ಧತೆಯಾಗಿ ಪರಿವರ್ತನೆಗೊಂಡ ನಂತರ, ಎರಡು ದಿನಗಳ ಪ್ರತಿಭಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಈ ಕಾರಣದಿಂದ ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಇಂದು ಸೇನೆಯಿಂದ ನೇಪಾಳದಲ್ಲಿ ನಿಷೇಧಾಜ್ಞೆ ಮತ್ತು ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.

ನೇಪಾಳಿ ಸೇನೆಯು ಬುಧವಾರ (ಸೆಪ್ಟೆಂಬರ್ 10) ಸಂಜೆ 5ರವರೆಗೆ ಪ್ರತಿಬಂಧಕಾಜ್ಞೆ ಜಾರಿಯಲ್ಲಿ ಇರುತ್ತದೆ, ಅದರ ನಂತರ ಗುರುವಾರ ಬೆಳಿಗ್ಗೆ 6 ರಿಂದ ದೇಶಾದ್ಯಂತ ಕರ್ಫ್ಯೂ ಜಾರಿಯಾಗಲಿದೆ ಎಂದು ಹೇಳಿದೆ. ಪರಿಸ್ಥಿತಿಯ ಸುಧಾರಣೆಯನ್ನು ಅವಲಂಬಿಸಿ, ನಿರ್ಬಂಧಗಳು ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತವೆ. ಗಲಭೆಯ ಸಮಯದಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡುಗಳು ಅಥವಾ ಇತರ ಉಪಕರಣಗಳನ್ನು ಲೂಟಿ ಮಾಡಿರುವ ಅಥವಾ ಅವುಗಳನ್ನು ಹೊಂದಿರುವ ಪ್ರತಿಭಟನಾಕಾರರು ತಕ್ಷಣವೇ ಹತ್ತಿರದ ಭದ್ರತಾ ಸಂಸ್ಥೆಗೆ ಅವುಗಳನ್ನು ಹಸ್ತಾಂತರಿಸಬೇಕು ಎಂದು ಸೇನೆಯು ಮನವಿ ಮಾಡಿದೆ. ನಾಗರಿಕರು ಅನುಮತಿಯಿಲ್ಲದೆ ಭದ್ರತಾ ಪಡೆಯ ಸಮವಸ್ತ್ರಗಳನ್ನು ಧರಿಸಬಾರದು ಎಂದು ಕೂಡ ತಿಳಿಸಿದೆ.

ಪ್ರತಿಭಟನೆಯ ಸಮಯದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟಕ್ಕೆ ಸೇನೆಯು ವಿಷಾದ ವ್ಯಕ್ತಪಡಿಸಿದೆ, ಆದರೆ “ಅರಾಜಕ ಶಕ್ತಿಗಳು” ಪ್ರತಿಭಟನೆಗಳಲ್ಲಿ ನುಸುಳಿದ್ದು, ಬೆಂಕಿ ಹಚ್ಚುವುದು, ಲೂಟಿ, ವಿಧ್ವಂಸಕ ಕೃತ್ಯಗಳು, ಹಿಂಸಾತ್ಮಕ ಹಲ್ಲೆಗಳು ಮತ್ತು ಲೈಂಗಿಕ ಹಿಂಸಾಚಾರಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದೆ.

ಪ್ರತಿಭಟನೆಯ ಹೆಸರಿನಲ್ಲಿ ನಡೆಸಲಾಗುವ ಯಾವುದೇ ಇಂತಹ ಕ್ರಿಮಿನಲ್ ಕೃತ್ಯಗಳನ್ನು ಶಿಕ್ಷಾರ್ಹ ಅಪರಾಧಗಳೆಂದು ಪರಿಗಣಿಸಲಾಗುವುದು ಮತ್ತು ಭದ್ರತಾ ಪಡೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ಅದು ಹೇಳಿದೆ.

ಅಗತ್ಯ ಸೇವೆಗಳಿಗೆ ಕರ್ಫ್ಯೂನಿಂದ ವಿನಾಯಿತಿ ಇರುತ್ತದೆ. ಆಂಬ್ಯುಲೆನ್ಸ್, ಶವ ವಾಹನಗಳು, ಅಗ್ನಿಶಾಮಕ ದಳಗಳು ಮತ್ತು ಆರೋಗ್ಯ ಕಾರ್ಯಕರ್ತರು ಮತ್ತು ಭದ್ರತಾ ಸಿಬ್ಬಂದಿ ಬಳಸುವ ವಾಹನಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುತ್ತದೆ, ಆದರೆ ತುರ್ತು ಸಹಾಯದ ಅಗತ್ಯವಿರುವ ನಾಗರಿಕರು ಹತ್ತಿರದ ಭದ್ರತಾ ಪಡೆಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಕೇಳಲಾಗಿದೆ. ಸಾರ್ವಜನಿಕರು ಅಧಿಕೃತ ಸೂಚನೆಗಳನ್ನು ಮಾತ್ರ ನಂಬಬೇಕು ಮತ್ತು ತಪ್ಪು ಮಾಹಿತಿಗೆ ಬಲಿಯಾಗಬಾರದು ಎಂದು ಸೇನೆಯು ಮನವಿ ಮಾಡಿದೆ, ಜೊತೆಗೆ “ರಾಷ್ಟ್ರೀಯ ಏಕತೆ, ಸಾಮಾಜಿಕ ಸಾಮರಸ್ಯ, ಭದ್ರತೆ ಮತ್ತು ಮಾನವೀಯ ಮೌಲ್ಯಗಳಿಗೆ” ಬದ್ಧವಾಗಿದೆ ಎಂದು ಒತ್ತಿ ಹೇಳಿದೆ.

ರಾಯಿಟರ್ಸ್ ಪ್ರಕಾರ, ಮಂಗಳವಾರದ ಗಲಭೆಯ ಸಮಯದಲ್ಲಿ ಮುಖ್ಯ ಸಭಾಂಗಣಕ್ಕೆ ಬೆಂಕಿ ಹಚ್ಚಿದ ನಂತರ, ಬುಧವಾರ ನೇಪಾಳದ ಸಂಸತ್ತಿಗೆ ಸೈನಿಕರು ಕಾವಲು ಕಾಯುತ್ತಿದ್ದರು. ಸುಪ್ರೀಂ ಕೋರ್ಟ್, ಮಂತ್ರಿಗಳ ಮನೆಗಳು ಮತ್ತು ಓಲಿ ಅವರ ಖಾಸಗಿ ನಿವಾಸ ಸೇರಿದಂತೆ ಹಲವಾರು ಇತರ ಸರ್ಕಾರಿ ಕಟ್ಟಡಗಳಿಗೂ ಬೆಂಕಿ ಹಚ್ಚಲಾಗಿತ್ತು. ಸುಟ್ಟುಹೋದ ವಾಹನಗಳು ಮತ್ತು ತಿರುಚಿದ ಲೋಹದ ರಾಶಿಗಳು ರಾಜಧಾನಿಯಲ್ಲಿ ಹರಡಿಕೊಂಡಿದ್ದವು, ಅದೇ ಸಮಯದಲ್ಲಿ ಸೇನಾ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದರು. ವಿಮಾನ ಹಾರಾಟಕ್ಕೆ ಅಡ್ಡಿಯಾಗಿದ್ದು, ಕಠ್ಮಂಡು ವಿಮಾನ ನಿಲ್ದಾಣವನ್ನು ಸಂಜೆ ತನಕ ಮುಚ್ಚಲಾಗಿತ್ತು. ಒಂದು ಪ್ರತ್ಯೇಕ ಸೂಚನೆಯಲ್ಲಿ, ನೇಪಾಳದಲ್ಲಿರುವ ವಿದೇಶಿ ಪ್ರಜೆಗಳು ಸ್ಥಳಾಂತರ ಅಥವಾ ಇತರ ವ್ಯವಸ್ಥೆಗಳಂತಹ ತುರ್ತು ಸಹಾಯದ ಅಗತ್ಯವಿದ್ದರೆ ಹತ್ತಿರದ ಭದ್ರತಾ ಕಚೇರಿ ಅಥವಾ ನಿಯೋಜಿತ ಸಿಬ್ಬಂದಿಯನ್ನು ಸಂಪರ್ಕಿಸಲು ಸೇನೆಯು ವಿನಂತಿಸಿದೆ. ಹೋಟೆಲ್‌ಗಳು, ಪ್ರವಾಸೋದ್ಯಮ ನಿರ್ವಾಹಕರು ಮತ್ತು ವಿದೇಶಿ ನಾಗರಿಕರೊಂದಿಗೆ ಸಂಪರ್ಕ ಹೊಂದಿರುವ ಇತರ ಸಂಸ್ಥೆಗಳು ಅಗತ್ಯವಿದ್ದಲ್ಲಿ ಸಹಾಯವನ್ನು ಸಂಘಟಿಸಲು ಸಹಾಯ ಮಾಡಬೇಕೆಂದು ಅದು ಕೇಳಿದೆ.

ಮಾಧ್ಯಮ ವರದಿಗಳ ಪ್ರಕಾರ, ಬಿಕ್ಕಟ್ಟನ್ನು ನಿವಾರಿಸಲು ಅಧಿಕಾರಿಗಳು ಮತ್ತು ಪ್ರತಿಭಟನಾ ಪ್ರತಿನಿಧಿಗಳ ನಡುವೆ ಮಾತುಕತೆಗಳನ್ನು ಸಿದ್ಧಪಡಿಸಲಾಗುತ್ತಿದೆ, ಆದರೂ ವಿವರಗಳು ಅಸ್ಪಷ್ಟವಾಗಿವೆ. ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಬಲರಾಮ್ ಕೆ.ಸಿ. ಪ್ರತಿಭಟನಾಕಾರರು ಮಾತುಕತೆ ತಂಡವನ್ನು ರಚಿಸುವಂತೆ ಒತ್ತಾಯಿಸಿದರು ಮತ್ತು ಸಂಸತ್ತನ್ನು ವಿಸರ್ಜಿಸಿ ಹೊಸ ಚುನಾವಣೆಗಳನ್ನು ನಡೆಸುವಂತೆ ಕರೆ ನೀಡಿದರು. ಭಾರತದ ಕ್ಯಾಬಿನೆಟ್ ಸಮಿತಿ ಕೂಡ ತನ್ನ ನೆರೆಯ ದೇಶದಲ್ಲಿನ ಗಲಭೆಯ ಬಗ್ಗೆ ಚರ್ಚಿಸಲು ಮಂಗಳವಾರ ತಡವಾಗಿ ಸಭೆ ಸೇರಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ನಂತರ ಎಕ್ಸ್‌ನಲ್ಲಿ, “ನೇಪಾಳದ ಸ್ಥಿರತೆ, ಶಾಂತಿ ಮತ್ತು ಸಮೃದ್ಧಿ ಅತ್ಯಂತ ಮಹತ್ವದ್ದು. ನೇಪಾಳದ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ನಾನು ವಿನಮ್ರವಾಗಿ ಮನವಿ ಮಾಡುತ್ತೇನೆ” ಎಂದು ಪೋಸ್ಟ್ ಮಾಡಿದರು.

ಈ ಗಲಭೆಗಳು ಫೇಸ್‌ಬುಕ್ ಮತ್ತು ಎಕ್ಸ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಸರ್ಕಾರ ವಿಧಿಸಿದ ನಿಷೇಧದ ವಿರುದ್ಧದ ಪ್ರತಿಭಟನೆಗಳೊಂದಿಗೆ ಪ್ರಾರಂಭವಾಯಿತು, ನಂತರ ಶೀಘ್ರವಾಗಿ ಪಾರದರ್ಶಕತೆ ಮತ್ತು ಭ್ರಷ್ಟಾಚಾರವನ್ನು ಕೊನೆಗೊಳಿಸುವ ವಿಶಾಲವಾದ ಬೇಡಿಕೆಗಳಾಗಿ ಹರಡಿತು. ಹೆಚ್ಚಾಗಿ ಯುವ ಪೀಳಿಗೆಯ ಕಾರ್ಯಕರ್ತರಿಂದ ಸಂಘಟಿತವಾದ ಈ ಚಳುವಳಿ, ಸೀಮಿತ ಆರ್ಥಿಕ ಅವಕಾಶಗಳು ಮತ್ತು ಹೆಚ್ಚುತ್ತಿರುವ ರಾಜಕೀಯ ಅಸಮಾಧಾನವನ್ನು ಎದುರಿಸುತ್ತಿದ್ದ ಯುವ ನೇಪಾಳಿಗಳನ್ನು ಸೆಳೆಯಿತು. ಸೋಮವಾರ, ಸೆಪ್ಟೆಂಬರ್ 8 ರಂದು, ಸಂಸತ್ತಿನ ಬಳಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದರು, ಇದರಿಂದಾಗಿ ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡರು.

ಪ್ರಧಾನಮಂತ್ರಿ ಓಲಿ ಮಾರನೇ ದಿನ ರಾಜೀನಾಮೆಯನ್ನು ಸಲ್ಲಿಸಿದರು, ಸಾಂವಿಧಾನಿಕ ರಾಜಕೀಯ ಪರಿಹಾರವನ್ನು ಸುಗಮಗೊಳಿಸಲು ತಾನು ಕೆಳಗಿಳಿಯುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದರು. ಅವರು ಉಸ್ತುವಾರಿ ಸಾಮರ್ಥ್ಯದಲ್ಲಿ ಕಚೇರಿಯಲ್ಲಿ ಉಳಿದಿದ್ದಾರೆ. ಆದರೆ ಅವರ ರಾಜೀನಾಮೆಯು ಹಿಂಸಾಚಾರವನ್ನು ಕಡಿಮೆ ಮಾಡಲು ಸಾಕಾಗಲಿಲ್ಲ. ಪ್ರತಿಭಟನಾಕಾರರು ಸಿಂಘಾ ದರ್ಬಾರ್, ಪ್ರಧಾನ ಮಂತ್ರಿಗಳ ಕಚೇರಿ, ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷರ ನಿವಾಸದ ಭಾಗಗಳು ಸೇರಿದಂತೆ ಸರ್ಕಾರಿ ಕಟ್ಟಡಗಳಿಗೆ ಬೆಂಕಿ ಹಚ್ಚಿದರು, ಹಾಗೆಯೇ ರಾಜಕೀಯ ನಾಯಕರ ಮನೆಗಳಿಗೂ ಬೆಂಕಿ ಹಚ್ಚಿದರು. ಪ್ರತಿಭಟನಾಕಾರರು ನೇಪಾಳಿ ಕಾಂಗ್ರೆಸ್ ನಾಯಕ ಮತ್ತು ನಾಲ್ಕು ಬಾರಿ ಪ್ರಧಾನಮಂತ್ರಿಯಾಗಿದ್ದ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ, ವಿದೇಶಾಂಗ ಸಚಿವರಾದ ಅರ್ಜು ರಾಣಾ ದೇವುಬಾ ಅವರನ್ನು ಥಳಿಸುತ್ತಿರುವ ವಿಡಿಯೋಗಳು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರಗೊಂಡವು. ಇದು ನೇಪಾಳ ಸೇನೆಯು ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಬ್ಬಂದಿಯನ್ನು ನಿಯೋಜಿಸುವುದಾಗಿ ಮಂಗಳವಾರ ಸಂಜೆ ಘೋಷಿಸಲು ಕಾರಣವಾಯಿತು.

ನೇಪಾಳ ದಂಗೆ: ಒಂದೂವರೆ ದಿನದಲ್ಲಿ ಸರ್ಕಾರ ಪತನ- Gen Z ಮಾಡಿದ ಚಮತ್ಕಾರ

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...