Homeಅಂತರಾಷ್ಟ್ರೀಯನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

ನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

- Advertisement -
- Advertisement -

22 ಜನರೊಂದಿಗೆ ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ಪತನಗೊಂಡಿದೆ. ಪತನಗೊಂಡ ವಿಮಾನವು ನಂತರ ಕೊವಾಂಗ್ ಗ್ರಾಮದಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ವಿಮಾನದಲ್ಲಿ ನಾಲ್ವರು ಭಾರತೀಯರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಣ್ಣ ವಿಮಾನವು ಪ್ರವಾಸಿ ಪಟ್ಟಣವಾದ ಪೋಖರಾದಿಂದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ವಾಯುವ್ಯದ ಜೋಮ್ಸೋಮ್‌ಗೆ ಹಾರುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಮಾನವು ಪೊಖರಾದಿಂದ ಬೆಳಿಗ್ಗೆ 9.55 ಕ್ಕೆ ಹೊರಟಿತು ಮತ್ತು 15 ನಿಮಿಷಗಳ ನಂತರ ನಿಯಂತ್ರಣ ಗೋಪುರದ ಸಂಪರ್ಕವನ್ನು ಕಳೆದುಕೊಂಡಿತು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಮಾನವನ್ನು ತಾರಾ ಏರ್ ಎಂಬ ಕಂಪೆನಿ ನಿರ್ವಹಿಸುತ್ತದೆ, ಇದು ಮುಖ್ಯವಾಗಿ ಕೆನಡಿಯನ್-ನಿರ್ಮಿತ ಟ್ವಿನ್ ಓಟರ್ ವಿಮಾನಗಳನ್ನು ಹಾರಾಟಗಳನ್ನು ನಡೆಸುತ್ತದೆ. “ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ತಾರಾ ಏರ್ ವಿಮಾನವು ಮಾನಪತಿ ಹಿಮಾಲ್‌‌ ಪ್ರದೇಶದ ಲಾಮ್ಚೆ ನದಿಯ ಬಳಿ ಪತನಗೊಂಡಿದೆ. ನೇಪಾಳ ಸೇನೆಯು ನೆಲ ಮತ್ತು ವಾಯು ಮಾರ್ಗದಿಂದ ಪ್ರದೇಶದ ಕಡೆಗೆ ತೆರಳುತ್ತಿದೆ” ಎಂದು ಸೇನಾ ವಕ್ತಾರ ನಾರಾಯಣ ಸಿಲ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನದಲ್ಲಿ ಮುಂಬೈ ಮೂಲದ ನಾಲ್ವರು ಭಾರತೀಯ ಪ್ರಜೆಗಳು, ಇಬ್ಬರು ಜರ್ಮನ್ನರು ಮತ್ತು 13 ನೇಪಾಳಿ ಪ್ರಯಾಣಿಕರು ಇದ್ದರು ಎಂದು ಏರ್‌ಲೈನ್ಸ್ ವಕ್ತಾರರು ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಭಾರತೀಯರನ್ನು ಅಶೋಕ್ ಕುಮಾರ್ ತ್ರಿಪಾಠಿ, ಧನುಷ್ ತ್ರಿಪಾಠಿ, ರಿತಿಕಾ ತ್ರಿಪಾಠಿ ಮತ್ತು ವೈಭವಿ ತ್ರಿಪಾಠಿ ಎಂದು ಗುರುತಿಸಲಾಗಿದೆ.

ವಿಮಾನವು ಪಶ್ಚಿಮ ಪರ್ವತ ಪ್ರದೇಶದ ಜೋಮ್ಸಮ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10:15 ಕ್ಕೆ ಇಳಿಯಬೇಕಿತ್ತು. ನಾಪತ್ತೆಯಾಗಿದ್ದ ವಿಮಾನಗಳ ಹುಡುಕಾಟಕ್ಕಾಗಿ ನೇಪಾಳ ಸರ್ಕಾರವು ಮುಸ್ತಾಂಗ್ ಮತ್ತು ಪೊಖರಾದಿಂದ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ. ಭೂ ಮಾರ್ಗದ ಮೂಲಕ ಹುಡುಕಾಟ ನಡೆಸಲು ನೇಪಾಳ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

2016 ರಲ್ಲಿ, ತಾರಾ ಏರ್ ನಿರ್ವಹಿಸುತ್ತಿದ್ದ ಟ್ವಿನ್ ಓಟರ್ ಟರ್ಬೊಪ್ರಾಪ್ ವಿಮಾನವು ಪಶ್ಚಿಮ ಜಿಲ್ಲೆಯ ಮಯಾಗಡಿಯಲ್ಲಿ ಪತನಗೊಂಡು 23 ಜನರು ಸಾವನ್ನಪ್ಪಿದ್ದರು. ಅಂದು ಮೂವರು ಸಿಬ್ಬಂದಿಯನ್ನು ಹೊರತುಪಡಿಸಿ, ಒಬ್ಬ ಚೈನೀಸ್ ಮತ್ತು ಒಬ್ಬ ಕುವೈತ್ ಪ್ರಜೆ ಸೇರಿದಂತೆ 20 ಪ್ರಯಾಣಿಕರು ವಿಮಾನದಲ್ಲಿದ್ದರು. ವಿಶ್ವದ ಅತಿ ಎತ್ತರದ ಪರ್ವತದ ನೆಲೆಯಾಗಿರುವ ನೇಪಾಳವು ತನ್ನ ದೇಶೀಯ ವಾಯು ಜಾಲದಲ್ಲಿ ಹಲವಾರು ವಿಮಾನ ಅಪಘಾತಗಳ ವ್ಯಾಪಕ ದಾಖಲೆಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...