Homeಅಂತರಾಷ್ಟ್ರೀಯನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

ನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

- Advertisement -
- Advertisement -

22 ಜನರೊಂದಿಗೆ ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ಪತನಗೊಂಡಿದೆ. ಪತನಗೊಂಡ ವಿಮಾನವು ನಂತರ ಕೊವಾಂಗ್ ಗ್ರಾಮದಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ವಿಮಾನದಲ್ಲಿ ನಾಲ್ವರು ಭಾರತೀಯರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಣ್ಣ ವಿಮಾನವು ಪ್ರವಾಸಿ ಪಟ್ಟಣವಾದ ಪೋಖರಾದಿಂದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ವಾಯುವ್ಯದ ಜೋಮ್ಸೋಮ್‌ಗೆ ಹಾರುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಮಾನವು ಪೊಖರಾದಿಂದ ಬೆಳಿಗ್ಗೆ 9.55 ಕ್ಕೆ ಹೊರಟಿತು ಮತ್ತು 15 ನಿಮಿಷಗಳ ನಂತರ ನಿಯಂತ್ರಣ ಗೋಪುರದ ಸಂಪರ್ಕವನ್ನು ಕಳೆದುಕೊಂಡಿತು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಮಾನವನ್ನು ತಾರಾ ಏರ್ ಎಂಬ ಕಂಪೆನಿ ನಿರ್ವಹಿಸುತ್ತದೆ, ಇದು ಮುಖ್ಯವಾಗಿ ಕೆನಡಿಯನ್-ನಿರ್ಮಿತ ಟ್ವಿನ್ ಓಟರ್ ವಿಮಾನಗಳನ್ನು ಹಾರಾಟಗಳನ್ನು ನಡೆಸುತ್ತದೆ. “ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ, ತಾರಾ ಏರ್ ವಿಮಾನವು ಮಾನಪತಿ ಹಿಮಾಲ್‌‌ ಪ್ರದೇಶದ ಲಾಮ್ಚೆ ನದಿಯ ಬಳಿ ಪತನಗೊಂಡಿದೆ. ನೇಪಾಳ ಸೇನೆಯು ನೆಲ ಮತ್ತು ವಾಯು ಮಾರ್ಗದಿಂದ ಪ್ರದೇಶದ ಕಡೆಗೆ ತೆರಳುತ್ತಿದೆ” ಎಂದು ಸೇನಾ ವಕ್ತಾರ ನಾರಾಯಣ ಸಿಲ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನದಲ್ಲಿ ಮುಂಬೈ ಮೂಲದ ನಾಲ್ವರು ಭಾರತೀಯ ಪ್ರಜೆಗಳು, ಇಬ್ಬರು ಜರ್ಮನ್ನರು ಮತ್ತು 13 ನೇಪಾಳಿ ಪ್ರಯಾಣಿಕರು ಇದ್ದರು ಎಂದು ಏರ್‌ಲೈನ್ಸ್ ವಕ್ತಾರರು ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಭಾರತೀಯರನ್ನು ಅಶೋಕ್ ಕುಮಾರ್ ತ್ರಿಪಾಠಿ, ಧನುಷ್ ತ್ರಿಪಾಠಿ, ರಿತಿಕಾ ತ್ರಿಪಾಠಿ ಮತ್ತು ವೈಭವಿ ತ್ರಿಪಾಠಿ ಎಂದು ಗುರುತಿಸಲಾಗಿದೆ.

ವಿಮಾನವು ಪಶ್ಚಿಮ ಪರ್ವತ ಪ್ರದೇಶದ ಜೋಮ್ಸಮ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10:15 ಕ್ಕೆ ಇಳಿಯಬೇಕಿತ್ತು. ನಾಪತ್ತೆಯಾಗಿದ್ದ ವಿಮಾನಗಳ ಹುಡುಕಾಟಕ್ಕಾಗಿ ನೇಪಾಳ ಸರ್ಕಾರವು ಮುಸ್ತಾಂಗ್ ಮತ್ತು ಪೊಖರಾದಿಂದ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ. ಭೂ ಮಾರ್ಗದ ಮೂಲಕ ಹುಡುಕಾಟ ನಡೆಸಲು ನೇಪಾಳ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

2016 ರಲ್ಲಿ, ತಾರಾ ಏರ್ ನಿರ್ವಹಿಸುತ್ತಿದ್ದ ಟ್ವಿನ್ ಓಟರ್ ಟರ್ಬೊಪ್ರಾಪ್ ವಿಮಾನವು ಪಶ್ಚಿಮ ಜಿಲ್ಲೆಯ ಮಯಾಗಡಿಯಲ್ಲಿ ಪತನಗೊಂಡು 23 ಜನರು ಸಾವನ್ನಪ್ಪಿದ್ದರು. ಅಂದು ಮೂವರು ಸಿಬ್ಬಂದಿಯನ್ನು ಹೊರತುಪಡಿಸಿ, ಒಬ್ಬ ಚೈನೀಸ್ ಮತ್ತು ಒಬ್ಬ ಕುವೈತ್ ಪ್ರಜೆ ಸೇರಿದಂತೆ 20 ಪ್ರಯಾಣಿಕರು ವಿಮಾನದಲ್ಲಿದ್ದರು. ವಿಶ್ವದ ಅತಿ ಎತ್ತರದ ಪರ್ವತದ ನೆಲೆಯಾಗಿರುವ ನೇಪಾಳವು ತನ್ನ ದೇಶೀಯ ವಾಯು ಜಾಲದಲ್ಲಿ ಹಲವಾರು ವಿಮಾನ ಅಪಘಾತಗಳ ವ್ಯಾಪಕ ದಾಖಲೆಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....