Homeಮುಖಪುಟಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

- Advertisement -
- Advertisement -

ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್ ಮಟ್ಟವನ್ನು ಪರೀಕ್ಷಿಸಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಉತ್ಪನ್ನಗಳಲ್ಲಿ ಹೆಚ್ಚಿನ ಮಟ್ಟದ ಎಥಿಲೀನ್ ಆಕ್ಸೈಡ್ ಕುರುಹುಗಳ ಬಗ್ಗೆ ಸುದ್ದಿಯಾದ ನಂತರ ನೇಪಾಳ ಈ ಎರಡು ಮಸಾಲೆ ಬ್ರಾಂಡ್‌ಗಳನ್ನು ನಿಷೇಧಿಸಿದೆ.

ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳಲ್ಲಿ ಹಾನಿಕಾರಕ ರಾಸಾಯನಿಕಗಳ ಕುರುಹುಗಳ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಅವುಗಳ ಆಮದು ಮತ್ತು ಮಾರಾಟವನ್ನು ನಿಷೇಧಿಸಿದ್ದೇವೆ ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹಾರ್ಜನ್ ಅವರು ಎಎನ್‌ಐಗೆ ದೂರವಾಣಿಯಲ್ಲಿ ಹೇಳಿದ್ದಾಗಿ ವರದಿಯಾಗಿದೆ.

“ಈ ಎರಡು ನಿರ್ದಿಷ್ಟ ಬ್ರಾಂಡ್‌ಗಳ ಮಸಾಲೆಗಳ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರವು ಈಗಾಗಲೇ ಈ ಮಸಾಲೆಗಳನ್ನು ನಿಷೇಧಿಸಿವೆ” ಎಂದು ಮಹಾರ್ಜನ್ ಹೇಳಿದ್ದಾರೆ.

ಎಥಿಲೀನ್ ಆಕ್ಸೈಡ್ ಬಳಕೆಯನ್ನು ವಿವಿಧ ದೇಶಗಳಲ್ಲಿ ಶೇಕಡಾ 0.73 ರಿಂದ ಶೇಕಡಾ 7 ರವರೆಗೆ ಅನುಮತಿಸಲಾಗಿದೆ ಎಂದು ಭಾರತ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಹೇಳಿದೆ.

ಎವರೆಸ್ಟ್ ಮತ್ತು ಎಂಡಿಹೆಚ್‌ ಮಸಾಲೆಗಳನ್ನು ನ್ಯೂಜಿಲೆಂಡ್, ಅಮೆರಿಕ, ಆಸ್ಟ್ರೇಲಿಯಾ ದೇಶಗಳಲ್ಲಿಯೂ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಮಧ್ಯ ಪೂರ್ವ ದೇಶಗಳು ಸೇರಿ ಹಲವು ದೇಶಗಳಿಗೆ ಭಾರತ ಮೂಲದ ಎಂಡಿಹೆಚ್‌ ಹಾಗೂ ಎವರೆಸ್ಟ್ ಪದಾರ್ಥಗಳನ್ನು ರಫ್ತು ಮಾಡಲಾಗುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಹಾಂಕಾಂಗ್‌ ಹಾಗೂ ಸಿಂಗಾಪುರ ದೇಶಗಳು ಈ ಉತ್ಪನ್ನಗಳನ್ನು ನಿಷೇಧಿಸಿದ್ದವು.

ಇದನ್ನೂ ಓದಿ : ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. MDH _MDH_ EVEREST_ EVEREST_ Beliggeyadare saku garlic _ ginger_ paste_ capsicum chicken masala_ bari ivugaladde havali yava hotel foot path hotel galu mobile hotel galu noorarastu balasuvude e Colour chemical mixed masala powder annu kalaberake halasida satta koligalindige hagu matte matte kareda enneyalli siddapadisida beedi badiya ahara galannu thindu chikka vsyasinalle halavaru khayilegalige tuttagi sayuva janare jasti modalu Ella spices powder galannu ban maduvudu olitu

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...