Homeಮುಖಪುಟಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

- Advertisement -
- Advertisement -

ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್ ಮಟ್ಟವನ್ನು ಪರೀಕ್ಷಿಸಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಉತ್ಪನ್ನಗಳಲ್ಲಿ ಹೆಚ್ಚಿನ ಮಟ್ಟದ ಎಥಿಲೀನ್ ಆಕ್ಸೈಡ್ ಕುರುಹುಗಳ ಬಗ್ಗೆ ಸುದ್ದಿಯಾದ ನಂತರ ನೇಪಾಳ ಈ ಎರಡು ಮಸಾಲೆ ಬ್ರಾಂಡ್‌ಗಳನ್ನು ನಿಷೇಧಿಸಿದೆ.

ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳಲ್ಲಿ ಹಾನಿಕಾರಕ ರಾಸಾಯನಿಕಗಳ ಕುರುಹುಗಳ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಅವುಗಳ ಆಮದು ಮತ್ತು ಮಾರಾಟವನ್ನು ನಿಷೇಧಿಸಿದ್ದೇವೆ ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹಾರ್ಜನ್ ಅವರು ಎಎನ್‌ಐಗೆ ದೂರವಾಣಿಯಲ್ಲಿ ಹೇಳಿದ್ದಾಗಿ ವರದಿಯಾಗಿದೆ.

“ಈ ಎರಡು ನಿರ್ದಿಷ್ಟ ಬ್ರಾಂಡ್‌ಗಳ ಮಸಾಲೆಗಳ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರವು ಈಗಾಗಲೇ ಈ ಮಸಾಲೆಗಳನ್ನು ನಿಷೇಧಿಸಿವೆ” ಎಂದು ಮಹಾರ್ಜನ್ ಹೇಳಿದ್ದಾರೆ.

ಎಥಿಲೀನ್ ಆಕ್ಸೈಡ್ ಬಳಕೆಯನ್ನು ವಿವಿಧ ದೇಶಗಳಲ್ಲಿ ಶೇಕಡಾ 0.73 ರಿಂದ ಶೇಕಡಾ 7 ರವರೆಗೆ ಅನುಮತಿಸಲಾಗಿದೆ ಎಂದು ಭಾರತ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಹೇಳಿದೆ.

ಎವರೆಸ್ಟ್ ಮತ್ತು ಎಂಡಿಹೆಚ್‌ ಮಸಾಲೆಗಳನ್ನು ನ್ಯೂಜಿಲೆಂಡ್, ಅಮೆರಿಕ, ಆಸ್ಟ್ರೇಲಿಯಾ ದೇಶಗಳಲ್ಲಿಯೂ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಮಧ್ಯ ಪೂರ್ವ ದೇಶಗಳು ಸೇರಿ ಹಲವು ದೇಶಗಳಿಗೆ ಭಾರತ ಮೂಲದ ಎಂಡಿಹೆಚ್‌ ಹಾಗೂ ಎವರೆಸ್ಟ್ ಪದಾರ್ಥಗಳನ್ನು ರಫ್ತು ಮಾಡಲಾಗುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಹಾಂಕಾಂಗ್‌ ಹಾಗೂ ಸಿಂಗಾಪುರ ದೇಶಗಳು ಈ ಉತ್ಪನ್ನಗಳನ್ನು ನಿಷೇಧಿಸಿದ್ದವು.

ಇದನ್ನೂ ಓದಿ : ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. MDH _MDH_ EVEREST_ EVEREST_ Beliggeyadare saku garlic _ ginger_ paste_ capsicum chicken masala_ bari ivugaladde havali yava hotel foot path hotel galu mobile hotel galu noorarastu balasuvude e Colour chemical mixed masala powder annu kalaberake halasida satta koligalindige hagu matte matte kareda enneyalli siddapadisida beedi badiya ahara galannu thindu chikka vsyasinalle halavaru khayilegalige tuttagi sayuva janare jasti modalu Ella spices powder galannu ban maduvudu olitu

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...