Homeಮುಖಪುಟನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

- Advertisement -
- Advertisement -

ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಿದ ಐದು ತಿಂಗಳ ಬಳಿಕ ಬುಧವಾರ ಮೊದಲ ಸಲಿಂಗ ವಿವಾಹ ನೋಂದಣಿಯಾಗಿದೆ. ಈ ಮೂಲಕ ನೇಪಾಳ ಸಲಿಂಗ ವಿವಾಹ ಅಧಿಕೃತಗೊಳಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ಎನಿಸಿಕೊಂಡಿದೆ.

ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ಈ ವಿಶೇಷ ವಿವಾಹ ನೋಂದಾಯಿಸಲಾಗಿದೆ ಎಂದು ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್ ಗುರುಂಗ್ (ಪಿಂಕಿ) ತಿಳಿಸಿದ್ದಾರೆ.

2007ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015 ರಲ್ಲಿ ಅಂಗೀಕರಿಸಲ್ಪಟ್ಟ ಕಾಯ್ದೆಯು ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ.

ಜೂನ್ 27, 2023 ರಂದು, ಗುರುಂಗ್ ಸೇರಿದಂತೆ ಅನೇಕ ಜನರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ನೇಪಾಳದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತ್ತು. ಆದರೆ ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಾಯಿಸುವ ಐತಿಹಾಸಿಕ ಆದೇಶದ ಹೊರತಾಗಿಯೂ, ನಾಲ್ಕು ತಿಂಗಳ ಹಿಂದೆ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಅಗತ್ಯ ಕಾನೂನುಗಳ ಕೊರತೆಯನ್ನು ಉಲ್ಲೇಖಿಸಿ ಈ ಕ್ರಮವನ್ನು ತಿರಸ್ಕರಿಸಿತ್ತು. ಆ ಸಮಯದಲ್ಲಿ ಸುರೇಂದ್ರ ಪಾಂಡೆ ಮತ್ತು ಮಾಯಾ ಅವರ ವಿವಾಹದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಆದರೆ, ಅವರು ಬುಧವಾರ ವಿವಾಹ ನೋಂದಾಯಿಸಿದ್ದಾರೆ.

” ಸಲಿಂಗ ವಿವಾಹದ ನೋಂದಣಿ ಬಗ್ಗೆ ತಿಳಿದು ತುಂಬಾ ಸಂತೋಷವಾಯಿತು. ಇದು ನೇಪಾಳದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ದೊಡ್ಡ ಸಾಧನೆ. ಇದು ನೇಪಾಳದಲ್ಲಿ ಮಾತ್ರವಲ್ಲದೆ ಇಡೀ ದಕ್ಷಿಣ ಏಷ್ಯಾದಲ್ಲೇ ಮೊದಲ ಪ್ರಕರಣವಾಗಿದೆ. ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ಲೈಂಗಿಕ ಅಲ್ಪಸಂಖ್ಯಾತರಾದ ಪಿಂಕಿ ಹೇಳಿದ್ದಾರೆ.

ಭಾರತದಲ್ಲಿ ಸಲಿಂಗ ವಿವಾಹಕ್ಕಿಲ್ಲ ಕಾನೂನು ಮಾನ್ಯತೆ :

ಭಾರತದ ಸುಪ್ರೀಂಕೋರ್ಟ್‌ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ. 2023 ಅಕ್ಟೋಬರ್ 17ರಂದು ಈ ಸಂಬಂಧ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲಾಗುವುದಿಲ್ಲ. ಇದು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಮತ್ತು ನ್ಯಾಯಾಲಯವು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದೆ.

ನ್ಯಾಯಾಲಯದ ಈ ತೀರ್ಪು ಮರು ಪರಿಶೀಲಿಸುವಂತೆ ಕೋರಿರುವ ಅರ್ಜಿಯನ್ನು ನವೆಂಬರ್ 28ರಂದು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಆದರೆ, ವಿಚಾರಣೆ ನಡೆಸಿದೆಯಾ? ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ :ಅಮೆರಿಕದಲ್ಲಿ ಪನ್ನುನ್ ಕೊಲೆಗೆ ಸಂಚು ಆರೋಪ: ತನಿಖೆಗೆ ಸಮಿತಿ ರಚಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...