Homeಮುಖಪುಟನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

- Advertisement -
- Advertisement -

ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಿದ ಐದು ತಿಂಗಳ ಬಳಿಕ ಬುಧವಾರ ಮೊದಲ ಸಲಿಂಗ ವಿವಾಹ ನೋಂದಣಿಯಾಗಿದೆ. ಈ ಮೂಲಕ ನೇಪಾಳ ಸಲಿಂಗ ವಿವಾಹ ಅಧಿಕೃತಗೊಳಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ಎನಿಸಿಕೊಂಡಿದೆ.

ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ಈ ವಿಶೇಷ ವಿವಾಹ ನೋಂದಾಯಿಸಲಾಗಿದೆ ಎಂದು ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್ ಗುರುಂಗ್ (ಪಿಂಕಿ) ತಿಳಿಸಿದ್ದಾರೆ.

2007ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015 ರಲ್ಲಿ ಅಂಗೀಕರಿಸಲ್ಪಟ್ಟ ಕಾಯ್ದೆಯು ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ.

ಜೂನ್ 27, 2023 ರಂದು, ಗುರುಂಗ್ ಸೇರಿದಂತೆ ಅನೇಕ ಜನರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ನೇಪಾಳದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತ್ತು. ಆದರೆ ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಾಯಿಸುವ ಐತಿಹಾಸಿಕ ಆದೇಶದ ಹೊರತಾಗಿಯೂ, ನಾಲ್ಕು ತಿಂಗಳ ಹಿಂದೆ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಅಗತ್ಯ ಕಾನೂನುಗಳ ಕೊರತೆಯನ್ನು ಉಲ್ಲೇಖಿಸಿ ಈ ಕ್ರಮವನ್ನು ತಿರಸ್ಕರಿಸಿತ್ತು. ಆ ಸಮಯದಲ್ಲಿ ಸುರೇಂದ್ರ ಪಾಂಡೆ ಮತ್ತು ಮಾಯಾ ಅವರ ವಿವಾಹದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಆದರೆ, ಅವರು ಬುಧವಾರ ವಿವಾಹ ನೋಂದಾಯಿಸಿದ್ದಾರೆ.

” ಸಲಿಂಗ ವಿವಾಹದ ನೋಂದಣಿ ಬಗ್ಗೆ ತಿಳಿದು ತುಂಬಾ ಸಂತೋಷವಾಯಿತು. ಇದು ನೇಪಾಳದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ದೊಡ್ಡ ಸಾಧನೆ. ಇದು ನೇಪಾಳದಲ್ಲಿ ಮಾತ್ರವಲ್ಲದೆ ಇಡೀ ದಕ್ಷಿಣ ಏಷ್ಯಾದಲ್ಲೇ ಮೊದಲ ಪ್ರಕರಣವಾಗಿದೆ. ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ಲೈಂಗಿಕ ಅಲ್ಪಸಂಖ್ಯಾತರಾದ ಪಿಂಕಿ ಹೇಳಿದ್ದಾರೆ.

ಭಾರತದಲ್ಲಿ ಸಲಿಂಗ ವಿವಾಹಕ್ಕಿಲ್ಲ ಕಾನೂನು ಮಾನ್ಯತೆ :

ಭಾರತದ ಸುಪ್ರೀಂಕೋರ್ಟ್‌ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ. 2023 ಅಕ್ಟೋಬರ್ 17ರಂದು ಈ ಸಂಬಂಧ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲಾಗುವುದಿಲ್ಲ. ಇದು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಮತ್ತು ನ್ಯಾಯಾಲಯವು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದೆ.

ನ್ಯಾಯಾಲಯದ ಈ ತೀರ್ಪು ಮರು ಪರಿಶೀಲಿಸುವಂತೆ ಕೋರಿರುವ ಅರ್ಜಿಯನ್ನು ನವೆಂಬರ್ 28ರಂದು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಆದರೆ, ವಿಚಾರಣೆ ನಡೆಸಿದೆಯಾ? ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ :ಅಮೆರಿಕದಲ್ಲಿ ಪನ್ನುನ್ ಕೊಲೆಗೆ ಸಂಚು ಆರೋಪ: ತನಿಖೆಗೆ ಸಮಿತಿ ರಚಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...