Homeಮುಖಪುಟನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

- Advertisement -
- Advertisement -

ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಿದ ಐದು ತಿಂಗಳ ಬಳಿಕ ಬುಧವಾರ ಮೊದಲ ಸಲಿಂಗ ವಿವಾಹ ನೋಂದಣಿಯಾಗಿದೆ. ಈ ಮೂಲಕ ನೇಪಾಳ ಸಲಿಂಗ ವಿವಾಹ ಅಧಿಕೃತಗೊಳಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ಎನಿಸಿಕೊಂಡಿದೆ.

ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ಈ ವಿಶೇಷ ವಿವಾಹ ನೋಂದಾಯಿಸಲಾಗಿದೆ ಎಂದು ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್ ಗುರುಂಗ್ (ಪಿಂಕಿ) ತಿಳಿಸಿದ್ದಾರೆ.

2007ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015 ರಲ್ಲಿ ಅಂಗೀಕರಿಸಲ್ಪಟ್ಟ ಕಾಯ್ದೆಯು ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ.

ಜೂನ್ 27, 2023 ರಂದು, ಗುರುಂಗ್ ಸೇರಿದಂತೆ ಅನೇಕ ಜನರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ನೇಪಾಳದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತ್ತು. ಆದರೆ ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಾಯಿಸುವ ಐತಿಹಾಸಿಕ ಆದೇಶದ ಹೊರತಾಗಿಯೂ, ನಾಲ್ಕು ತಿಂಗಳ ಹಿಂದೆ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಅಗತ್ಯ ಕಾನೂನುಗಳ ಕೊರತೆಯನ್ನು ಉಲ್ಲೇಖಿಸಿ ಈ ಕ್ರಮವನ್ನು ತಿರಸ್ಕರಿಸಿತ್ತು. ಆ ಸಮಯದಲ್ಲಿ ಸುರೇಂದ್ರ ಪಾಂಡೆ ಮತ್ತು ಮಾಯಾ ಅವರ ವಿವಾಹದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಆದರೆ, ಅವರು ಬುಧವಾರ ವಿವಾಹ ನೋಂದಾಯಿಸಿದ್ದಾರೆ.

” ಸಲಿಂಗ ವಿವಾಹದ ನೋಂದಣಿ ಬಗ್ಗೆ ತಿಳಿದು ತುಂಬಾ ಸಂತೋಷವಾಯಿತು. ಇದು ನೇಪಾಳದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ದೊಡ್ಡ ಸಾಧನೆ. ಇದು ನೇಪಾಳದಲ್ಲಿ ಮಾತ್ರವಲ್ಲದೆ ಇಡೀ ದಕ್ಷಿಣ ಏಷ್ಯಾದಲ್ಲೇ ಮೊದಲ ಪ್ರಕರಣವಾಗಿದೆ. ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ಲೈಂಗಿಕ ಅಲ್ಪಸಂಖ್ಯಾತರಾದ ಪಿಂಕಿ ಹೇಳಿದ್ದಾರೆ.

ಭಾರತದಲ್ಲಿ ಸಲಿಂಗ ವಿವಾಹಕ್ಕಿಲ್ಲ ಕಾನೂನು ಮಾನ್ಯತೆ :

ಭಾರತದ ಸುಪ್ರೀಂಕೋರ್ಟ್‌ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ. 2023 ಅಕ್ಟೋಬರ್ 17ರಂದು ಈ ಸಂಬಂಧ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲಾಗುವುದಿಲ್ಲ. ಇದು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಮತ್ತು ನ್ಯಾಯಾಲಯವು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದೆ.

ನ್ಯಾಯಾಲಯದ ಈ ತೀರ್ಪು ಮರು ಪರಿಶೀಲಿಸುವಂತೆ ಕೋರಿರುವ ಅರ್ಜಿಯನ್ನು ನವೆಂಬರ್ 28ರಂದು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಆದರೆ, ವಿಚಾರಣೆ ನಡೆಸಿದೆಯಾ? ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ :ಅಮೆರಿಕದಲ್ಲಿ ಪನ್ನುನ್ ಕೊಲೆಗೆ ಸಂಚು ಆರೋಪ: ತನಿಖೆಗೆ ಸಮಿತಿ ರಚಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...