Homeಅಂತರಾಷ್ಟ್ರೀಯನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

- Advertisement -
- Advertisement -

‘ಜೆನ್‌ ಝೀ ದಂಗೆ’ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ. 

ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ ರ‍್ಯಾಪರ್ ಆಗಿರುವ ಬಲೇಂದ್ರ ಶಾ ಅವರು, ಈಗಾಗಲೇ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರನ್ನು ಝಾಪಾ-5 ಕ್ಷೇತ್ರದಲ್ಲಿ ಸುಮಾರು 50,000 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಲೇಂದ್ರ ಶಾ ಅವರ ಪಕ್ಷವು ಈಗಾಗಲೇ 165 ನೇರ ಚುನಾವಣೆ ಕ್ಷೇತ್ರಗಳ ಪೈಕಿ 47 ಸ್ಥಾನಗಳಲ್ಲಿ ಜಯಗಳಿಸಿದ್ದು, ಒಟ್ಟು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕೆ.ಪಿ. ಒಲಿ ಅವರ ಸಿಪಿಎನ್-ಯುಎಂಎಲ್ ಮತ್ತು ನೇಪಾಳಿ ಕಾಂಗ್ರೆಸ್ (ಐಎನ್‌ಸಿ) ಪಕ್ಷಗಳು ಈ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿವೆ.

ಈ ಭರ್ಜರಿ ಯಶಸ್ಸಿನೊಂದಿಗೆ, ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದ 35 ವರ್ಷದ ಬಲೇಂದ್ರ ಶಾ ನೇಪಾಳದ ಮುಂದಿನ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿವೆ.

‘ಜೆನ್-ಝೀ’ ಯುವಜನರ ಮತ್ತು ಇತರ ಜನರ ಅತೃಪ್ತಿಯ ಅಲೆಯಲ್ಲಿ ಹಳೆಯ ರಾಜಕೀಯ ಶಕ್ತಿಗಳನ್ನು ಮೆಟ್ಟಿ ನಿಂತು ಆರ್‌ಎಸ್‌ಪಿ ಭರ್ಜರಿ ಗೆಲುವನ್ನು ದಾಖಲಿಸುತ್ತಿದೆ.

ನೇಪಾಳವು ಮಿಶ್ರ ಚುನಾವಣಾ ವ್ಯವಸ್ಥೆಯನ್ನು ಅನುಸರಿಸುತ್ತದೆ. ಮತ ಎಣಿಕೆಯು ಎರಡು ಹಂತಗಳಲ್ಲಿ ನಡೆಯುತ್ತದೆ.

165 ಸ್ಥಾನಗಳಿಗೆ ಮತದಾರರು ನೇರವಾಗಿ ಅಭ್ಯರ್ಥಿಗಳಿಗೆ ಮತ ಹಾಕುತ್ತಾರೆ. ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. ಇದರ ಎಣಿಕೆ ಮೊದಲು ನಡೆಯುತ್ತದೆ. ಉಳಿದ 110 ಸ್ಥಾನಗಳಿಗೆ ಮತದಾರರು ರಾಜಕೀಯ ಪಕ್ಷಕ್ಕೆ ಮತ ಹಾಕುತ್ತಾರೆ. ಇಡೀ ದೇಶವನ್ನು ಒಂದು ಕ್ಷೇತ್ರವೆಂದು ಪರಿಗಣಿಸಿ, ಪಕ್ಷಗಳು ಪಡೆದ ಒಟ್ಟು ಮತಗಳ ಶೇಕಡಾವಾರು ಆಧಾರದ ಮೇಲೆ ಈ ಸ್ಥಾನಗಳನ್ನು ಹಂಚಲಾಗುತ್ತದೆ.

ಬಾಹ್ಯ ಪ್ರದೇಶಗಳಿಂದ ಮತಪೆಟ್ಟಿಗೆಗಳನ್ನು ಸಂಗ್ರಹಿಸಿ ಕೇಂದ್ರಗಳಿಗೆ ತಲುಪಿಸಿದ ನಂತರ ಕೈಯಿಂದಲೇ ಮತ ಎಣಿಕೆ ಮಾಡಲಾಗುತ್ತದೆ. 

ಮಾರ್ಚ್ 5ರಂದು ಮತದಾನ ಮುಕ್ತಾಯಗೊಂಡ ತಕ್ಷಣ, ಅಂದರೆ ಮಾರ್ಚ್ 5ರ ಸಂಜೆ ಅಥವಾ ಮಾರ್ಚ್ 6ರ ಬೆಳಿಗ್ಗೆಯಿಂದ ಮತ ಎಣಿಕೆ ಆರಂಭವಾಗಿದೆ.

ಚುನಾವಣಾ ಆಯೋಗವು ಮಾರ್ಚ್ 9, 2026ರೊಳಗೆ ಎಲ್ಲಾ 275 ಸ್ಥಾನಗಳ ಮತ ಎಣಿಕೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ.

ಫಲಿತಾಂಶಗಳು ಶೀಘ್ರವಾಗಿ ಪ್ರಕಟವಾಗುತ್ತಿದ್ದು, ಪ್ರಮಾಣಾನುಗುಣ ಪ್ರಾತಿನಿಧ್ಯದ ಅಂತಿಮ ಲೆಕ್ಕಾಚಾರಕ್ಕೆ ಇನ್ನೂ 2-3 ದಿನಗಳು ಬೇಕಾಗಬಹುದು. 

ಬೆಂಗಳೂರಿನಲ್ಲಿ ಪದವಿ ಪಡೆದಿರುವ ಬಲೇಂದ್ರ ಶಾ

ಪ್ರಧಾನಿ ಹುದ್ದೆಗೇರಲು ಅಣಿಯಾಗಿರುವ ಯುವ ನಾಯಕ ಬಲೇಂದ್ರ ಶಾ ಅವರು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದವರು. ನಗರದ ಯಲಹಂಕದಲ್ಲಿರುವ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಎಂಐಟಿ) ಕಾಲೇಜಿನಲ್ಲಿ ಅವರು ತಮ್ಮ ಉನ್ನತ ವ್ಯಾಸಂಗ ಮಾಡಿದ್ದಾರೆ.

2016 ರಿಂದ 2018 ರ ಅವಧಿಯಲ್ಲಿ ಸ್ಟ್ರಕ್ಚರಲ್ ಇಂಜಿನಿಯರಿಂಗ್‌ನಲ್ಲಿ ಬಲೇಂದ್ರ ಶಾ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಜನಪ್ರಿಯ ರ‍್ಯಾಪರ್ ಬಲೇಂದ್ರ ಶಾ

ಬಲೇಂದ್ರ ಶಾ ರಾಜಕೀಯಕ್ಕೆ ಬರುವ ಮೊದಲು ನೇಪಾಳದ ಅತ್ಯಂತ ಜನಪ್ರಿಯ ರ‍್ಯಾಪರ್ ಆಗಿದ್ದರು.

ನೇಪಾಳದ ಪ್ರಸಿದ್ಧ ‘Raw Barz’ ಎಂಬ ರ‍್ಯಾಪ್ ಬ್ಯಾಟಲ್ ಸರಣಿಯ ಮೂಲಕ ಅವರು ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು.

ಅವರ ಹಾಡುಗಳು ಕೇವಲ ಮನೋರಂಜನೆಗೆ ಸೀಮಿತವಾಗಿರದೆ, ನೇಪಾಳದ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ದನಿಯೆತ್ತುತ್ತಿದ್ದವು. 

ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗಲೂ ಸಂಗೀತದಲ್ಲಿ ಸಕ್ರಿಯರಾಗಿದ್ದರು ಮತ್ತು ಅವರ ಅನೇಕ ಯೂಟ್ಯೂಬ್ ವಿಡಿಯೋಗಳು ಆ ಸಮಯದಲ್ಲಿ ವೈರಲ್ ಆಗಿದ್ದವು. ಸಂಗೀತ ಕ್ಷೇತ್ರದಲ್ಲಿ ಅವರು ಬಲೇನ್ಎಂಬ ಹೆಸರಿನಿಂದಲೇ ಹೆಚ್ಚು ಪ್ರಸಿದ್ಧರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...