Homeಅಂತರಾಷ್ಟ್ರೀಯನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

- Advertisement -
- Advertisement -

‘ಜೆನ್‌ ಝೀ ದಂಗೆ’ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ. 

ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ ರ‍್ಯಾಪರ್ ಆಗಿರುವ ಬಲೇಂದ್ರ ಶಾ ಅವರು, ಈಗಾಗಲೇ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರನ್ನು ಝಾಪಾ-5 ಕ್ಷೇತ್ರದಲ್ಲಿ ಸುಮಾರು 50,000 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಲೇಂದ್ರ ಶಾ ಅವರ ಪಕ್ಷವು ಈಗಾಗಲೇ 165 ನೇರ ಚುನಾವಣೆ ಕ್ಷೇತ್ರಗಳ ಪೈಕಿ 47 ಸ್ಥಾನಗಳಲ್ಲಿ ಜಯಗಳಿಸಿದ್ದು, ಒಟ್ಟು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕೆ.ಪಿ. ಒಲಿ ಅವರ ಸಿಪಿಎನ್-ಯುಎಂಎಲ್ ಮತ್ತು ನೇಪಾಳಿ ಕಾಂಗ್ರೆಸ್ (ಐಎನ್‌ಸಿ) ಪಕ್ಷಗಳು ಈ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿವೆ.

ಈ ಭರ್ಜರಿ ಯಶಸ್ಸಿನೊಂದಿಗೆ, ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದ 35 ವರ್ಷದ ಬಲೇಂದ್ರ ಶಾ ನೇಪಾಳದ ಮುಂದಿನ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿವೆ.

‘ಜೆನ್-ಝೀ’ ಯುವಜನರ ಮತ್ತು ಇತರ ಜನರ ಅತೃಪ್ತಿಯ ಅಲೆಯಲ್ಲಿ ಹಳೆಯ ರಾಜಕೀಯ ಶಕ್ತಿಗಳನ್ನು ಮೆಟ್ಟಿ ನಿಂತು ಆರ್‌ಎಸ್‌ಪಿ ಭರ್ಜರಿ ಗೆಲುವನ್ನು ದಾಖಲಿಸುತ್ತಿದೆ.

ನೇಪಾಳವು ಮಿಶ್ರ ಚುನಾವಣಾ ವ್ಯವಸ್ಥೆಯನ್ನು ಅನುಸರಿಸುತ್ತದೆ. ಮತ ಎಣಿಕೆಯು ಎರಡು ಹಂತಗಳಲ್ಲಿ ನಡೆಯುತ್ತದೆ.

165 ಸ್ಥಾನಗಳಿಗೆ ಮತದಾರರು ನೇರವಾಗಿ ಅಭ್ಯರ್ಥಿಗಳಿಗೆ ಮತ ಹಾಕುತ್ತಾರೆ. ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. ಇದರ ಎಣಿಕೆ ಮೊದಲು ನಡೆಯುತ್ತದೆ. ಉಳಿದ 110 ಸ್ಥಾನಗಳಿಗೆ ಮತದಾರರು ರಾಜಕೀಯ ಪಕ್ಷಕ್ಕೆ ಮತ ಹಾಕುತ್ತಾರೆ. ಇಡೀ ದೇಶವನ್ನು ಒಂದು ಕ್ಷೇತ್ರವೆಂದು ಪರಿಗಣಿಸಿ, ಪಕ್ಷಗಳು ಪಡೆದ ಒಟ್ಟು ಮತಗಳ ಶೇಕಡಾವಾರು ಆಧಾರದ ಮೇಲೆ ಈ ಸ್ಥಾನಗಳನ್ನು ಹಂಚಲಾಗುತ್ತದೆ.

ಬಾಹ್ಯ ಪ್ರದೇಶಗಳಿಂದ ಮತಪೆಟ್ಟಿಗೆಗಳನ್ನು ಸಂಗ್ರಹಿಸಿ ಕೇಂದ್ರಗಳಿಗೆ ತಲುಪಿಸಿದ ನಂತರ ಕೈಯಿಂದಲೇ ಮತ ಎಣಿಕೆ ಮಾಡಲಾಗುತ್ತದೆ. 

ಮಾರ್ಚ್ 5ರಂದು ಮತದಾನ ಮುಕ್ತಾಯಗೊಂಡ ತಕ್ಷಣ, ಅಂದರೆ ಮಾರ್ಚ್ 5ರ ಸಂಜೆ ಅಥವಾ ಮಾರ್ಚ್ 6ರ ಬೆಳಿಗ್ಗೆಯಿಂದ ಮತ ಎಣಿಕೆ ಆರಂಭವಾಗಿದೆ.

ಚುನಾವಣಾ ಆಯೋಗವು ಮಾರ್ಚ್ 9, 2026ರೊಳಗೆ ಎಲ್ಲಾ 275 ಸ್ಥಾನಗಳ ಮತ ಎಣಿಕೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ.

ಫಲಿತಾಂಶಗಳು ಶೀಘ್ರವಾಗಿ ಪ್ರಕಟವಾಗುತ್ತಿದ್ದು, ಪ್ರಮಾಣಾನುಗುಣ ಪ್ರಾತಿನಿಧ್ಯದ ಅಂತಿಮ ಲೆಕ್ಕಾಚಾರಕ್ಕೆ ಇನ್ನೂ 2-3 ದಿನಗಳು ಬೇಕಾಗಬಹುದು. 

ಬೆಂಗಳೂರಿನಲ್ಲಿ ಪದವಿ ಪಡೆದಿರುವ ಬಲೇಂದ್ರ ಶಾ

ಪ್ರಧಾನಿ ಹುದ್ದೆಗೇರಲು ಅಣಿಯಾಗಿರುವ ಯುವ ನಾಯಕ ಬಲೇಂದ್ರ ಶಾ ಅವರು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದವರು. ನಗರದ ಯಲಹಂಕದಲ್ಲಿರುವ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಎಂಐಟಿ) ಕಾಲೇಜಿನಲ್ಲಿ ಅವರು ತಮ್ಮ ಉನ್ನತ ವ್ಯಾಸಂಗ ಮಾಡಿದ್ದಾರೆ.

2016 ರಿಂದ 2018 ರ ಅವಧಿಯಲ್ಲಿ ಸ್ಟ್ರಕ್ಚರಲ್ ಇಂಜಿನಿಯರಿಂಗ್‌ನಲ್ಲಿ ಬಲೇಂದ್ರ ಶಾ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಜನಪ್ರಿಯ ರ‍್ಯಾಪರ್ ಬಲೇಂದ್ರ ಶಾ

ಬಲೇಂದ್ರ ಶಾ ರಾಜಕೀಯಕ್ಕೆ ಬರುವ ಮೊದಲು ನೇಪಾಳದ ಅತ್ಯಂತ ಜನಪ್ರಿಯ ರ‍್ಯಾಪರ್ ಆಗಿದ್ದರು.

ನೇಪಾಳದ ಪ್ರಸಿದ್ಧ ‘Raw Barz’ ಎಂಬ ರ‍್ಯಾಪ್ ಬ್ಯಾಟಲ್ ಸರಣಿಯ ಮೂಲಕ ಅವರು ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು.

ಅವರ ಹಾಡುಗಳು ಕೇವಲ ಮನೋರಂಜನೆಗೆ ಸೀಮಿತವಾಗಿರದೆ, ನೇಪಾಳದ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ದನಿಯೆತ್ತುತ್ತಿದ್ದವು. 

ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗಲೂ ಸಂಗೀತದಲ್ಲಿ ಸಕ್ರಿಯರಾಗಿದ್ದರು ಮತ್ತು ಅವರ ಅನೇಕ ಯೂಟ್ಯೂಬ್ ವಿಡಿಯೋಗಳು ಆ ಸಮಯದಲ್ಲಿ ವೈರಲ್ ಆಗಿದ್ದವು. ಸಂಗೀತ ಕ್ಷೇತ್ರದಲ್ಲಿ ಅವರು ಬಲೇನ್ಎಂಬ ಹೆಸರಿನಿಂದಲೇ ಹೆಚ್ಚು ಪ್ರಸಿದ್ಧರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...