HomeಮುಖಪುಟNepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ 'ಗ್ರೀನ್ ಹೌಸ್' ಸ್ಟೋರಿ

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

- Advertisement -
- Advertisement -

‘ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು’ ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ ಪವಾಡಸದೃಶವಾಗಿ ಬಚಾವಾದ 40 ವರ್ಷ ಹಳೆಯ ‘ಹಸಿರು ಬಣ್ಣದ ಮನೆ’ಯ ಮಾಲೀಕ ಪ್ರಕಾಶ್ ಅವರ ಆತಂಕದ ನುಡಿಗಳು.

ತಮ್ಮ ಮನೆಯ ಅಕ್ಕಪಕ್ಕದಲ್ಲಿದ್ದ ಕಾರುಗಳು, ದೊಡ್ಡ ದೊಡ್ಡ ಕಟ್ಟಡಗಳು ಹಾಗೂ ಜನರ ಆಸ್ತಿಪಾಸ್ತಿಗಳು ಕ್ಷಣಾರ್ಧದಲ್ಲಿ ನದಿಯ ಪ್ರಬಲ ಹರಿವಿಗೆ ಕೊಚ್ಚಿಹೋಗುತ್ತಿದ್ದಾಗ, ಪ್ರಕಾಶ್ ಅವರ ಮನೆ ಮಾತ್ರ ಅಲುಗಾಡದೆ ಭದ್ರವಾಗಿ ನಿಂತಿತ್ತು. ಇಡೀ ನೇಪಾಳದ ಪ್ರವಾಹದ ಭೀಕರತೆಯನ್ನು ಬಿಂಬಿಸುವ ಅತ್ಯಂತ ಪ್ರಮುಖ ಚಿತ್ರವಾಗಿ ಈ ಮನೆಯ ವೀಡಿಯೋ ಜಾಗತಿಕ ಮಟ್ಟದಲ್ಲಿ ವೈರಲ್ ಆಗಿದೆ.

‘ಇಂಡಿಯಾ ಟುಡೇ’ ವರದಿಯ ಪ್ರಕಾರ, ಪ್ರವಾಹದ ನೀರು ಕ್ಷಣಾರ್ಧದಲ್ಲೇ ಮನೆಯನ್ನು ಆವರಿಸಿಕೊಂಡಾಗ ಅನುಭವಿಸಿದ ಆ ಭೀಕರ ಮತ್ತು ನಡುಕ ಹುಟ್ಟಿಸುವ ಕ್ಷಣಗಳನ್ನು ಕುಟುಂಬದ ಸದಸ್ಯರು ಸ್ಮರಿಸಿಕೊಂಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ತಾವು ಅನುಭವಿಸಿದ ಆತಂಕಗಳನ್ನು ನೆನಪಿಸಿಕೊಂಡ ಪ್ರಕಾಶ್, ಪ್ರವಾಹ ಬಂದಾಗ ಮನೆಯಲ್ಲಿ ತಮ್ಮ ಕುಟುಂಬದ ಐದು ಜನರು ಸೇರಿದಂತೆ ಒಟ್ಟು ಆರು ಜನರಿದ್ದರು ಎಂದು ತಿಳಿಸಿದ್ದಾರೆ. ನಾನು ಹತ್ತಿರದ ಅಂಗಡಿಯಲ್ಲಿದ್ದಾಗ ನೀರಿನ ಮಟ್ಟ ಏರುತ್ತಿರುವ ಬಗ್ಗೆ ಎಚ್ಚರಿಕೆ ಸಿಕ್ಕಿತು. ತಕ್ಷಣ ಮನೆಗೆ ಓಡಿಬಂದು ಎಲ್ಲರನ್ನೂ ಹೊರಬರುವಂತೆ ಕೂಗಿದೆ. ಆದರೆ ಅಷ್ಟರಲ್ಲಾಗಲೇ ನೀರಿನ ಭೋರ್ಗರೆತಕ್ಕೆ ಮನೆಯ ಹೊರಗಿದ್ದ ನನ್ನ ವಾಹನವೇ ಮುಳುಗಿ ಉರುಳಿಬಿದ್ದಿತ್ತು. ಅದನ್ನು ನೋಡಿ ಹೆದರಿ ಮತ್ತೆ ಮನೆ ಒಳಗೇ ಓಡಿದೆವು, ಎಂದಿದ್ದಾರೆ.

ಮನೆಯಲ್ಲಿದ್ದವರೆಲ್ಲರೂ ಜೀವ ಉಳಿಸಿಕೊಳ್ಳಲು ಕಟ್ಟಡದ ಕೊನೆಯ ಮಹಡಿ ಮೇಲ್ಛಾವಣಿಗೆ ಓಡಿದೆವು. ಅಷ್ಟರಲ್ಲಾಗಲೇ, ಆರ್ಭಟಿಸುತ್ತಿದ್ದ ನೀರು ಮಹಡಿಯವರೆಗೂ ತಲುಪಿತ್ತು. ಆದರೆ ಶಾಲೆಗೆ ಹೋಗಿದ್ದ ನನ್ನ ಮಗ ಮಾತ್ರ ಜೊತೆಗಿರಲಿಲ್ಲ. ಪ್ರವಾಹಕ್ಕೆ ನಾವೇನಾದರೂ ಕೊಚ್ಚಿಹೋದರೆ ಆ ಮಗನ ಗತಿಯೇನು ಎಂಬ ಯೋಚನೆಯೇ ನನ್ನನ್ನು ತೀವ್ರವಾಗಿ ಕಾಡುತ್ತಿತ್ತು, ಎಂದು ಪ್ರಕಾಶ್ ಭಾವುಕರಾಗಿದ್ದಾರೆ.

40 ವರ್ಷ ಹಳೆಯ ಮನೆ ಬಚಾವಾಗಿದ್ದು ಹೇಗೆ?’

ಸುತ್ತಮುತ್ತಲಿನ ಕಟ್ಟಡಗಳು ನೆಲಸಮವಾದರೂ ಈ ಹಸಿರು ಬಣ್ಣದ ಮನೆ ಮಾತ್ರ ಸುರಕ್ಷಿತವಾಗಿ ಉಳಿದಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಪ್ರಕಾಶ್, “ಇದು ಸುಮಾರು 40 ವರ್ಷಗಳಷ್ಟು ಹಳೆಯ ಮನೆ. ಆ ಕಾಲದಲ್ಲಿ ಸಿಮೆಂಟ್ ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳ ಗುಣಮಟ್ಟ ಅತ್ಯುತ್ತಮವಾಗಿತ್ತು. ನದಿಯ ದಂಡೆಯಲ್ಲೇ ಮನೆ ಇದ್ದುದರಿಂದ ಸುರಕ್ಷತೆಯ ದೃಷ್ಟಿಯಿಂದ ತಳಪಾಯದ ಕೆಳಗೆ 2-3 ಪದರಗಳ ರಸ್ತೆ ಕಾಮಗಾರಿಯ ಸಾಮಗ್ರಿಗಳನ್ನು ಬಳಸಿ ಅಡಿಪಾಯವನ್ನು ಅತ್ಯಂತ ಗಟ್ಟಿಯಾಗಿ ನಿರ್ಮಿಸಿದ್ದೆವು, ಎಂದು ಇಂಡಿಯಾ ಟುಡೆಗೆ ವಿವರಿಸಿದ್ದಾರೆ.

ಆದಾಗ್ಯೂ, ಮನೆಯ ಗ್ರೌಂಡ್ ಪ್ಲೋರ್‌ನಲ್ಲಿದ್ದ ಅಂಗಡಿಯ ಗೋದಾಮು ಸಂಪೂರ್ಣವಾಗಿ ನಾಶವಾಗಿದೆ. ಎರಡು ಕಾರುಗಳು, ಬೈಕ್‌ಗಳು ಮತ್ತು ಸ್ಕೂಟರ್‌ಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ.

ಪೈಪ್ ಮತ್ತು ಹಗ್ಗದ ಸಹಾಯದಿಂದ ರಕ್ಷಣೆ:

ಸುಮಾರು ಒಂದರಿಂದ ಒಂದೂವರೆ ಗಂಟೆಗಳ ಕಾಲ ಸಾವಿನ ನೆರಳಿನಲ್ಲೇ ಕಳೆದ ಕುಟುಂಬಕ್ಕೆ ನೀರಿನ ಮಟ್ಟ ಕೊಂಚ ಕಡಿಮೆಯಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ನೆರೆಹೊರೆಯವರು ಎದುರಿನ ಕಟ್ಟಡದಿಂದ ಈ ಮನೆಗೆ ದಪ್ಪನೆಯ ಪೈಪ್ ಹಾಗೂ ಹಗ್ಗವನ್ನು ಕಟ್ಟಿ, ಅದರ ಮೂಲಕ ಪ್ರಕಾಶ್ ಮತ್ತು ಅವರ ಕುಟುಂಬಸ್ಥರನ್ನು ರಕ್ಷಿಸಿದ್ದಾರೆ.

ಪ್ರಸ್ತುತ ಪ್ರಕಾಶ್ ಅವರ ಕುಟುಂಬ ಕಾಠ್ಮಂಡುವಿನಲ್ಲಿ ಆಶ್ರಯ ಪಡೆದಿದ್ದು, ಸದ್ಯಕ್ಕೆ ಮನೆಯಲ್ಲಿ ಉಳಿದಿರುವ ಕೆಲ ವಸ್ತುಗಳನ್ನು ಹೊರತೆಗೆಯುತ್ತಿದ್ದಾರೆ. ವಾಹನಗಳು, ಅಂಗಡಿಯಲ್ಲಿದ್ದ ಸಾಮಗ್ರಿಗಳು ಎಲ್ಲವೂ ಮಣ್ಣಿನಪಾಲಾಗಿವೆ. ಆದರೆ ಮನೆಯಲ್ಲಿದ್ದ ನಾವೆಲ್ಲರೂ ಜೀವಂತವಾಗಿ ಉಳಿದಿದ್ದೇವೆ. ಶೂನ್ಯದಿಂದ ಮತ್ತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತೇವೆ, ಎಂದು ಪ್ರಕಾಶ್ ಧೈರ್ಯದ ಮಾತುಗಳನ್ನಾಡಿದ್ದಾರೆ.

ಈಗ ಪ್ರವಾಹ ತಗ್ಗಿದ್ದು, ನುವಾಕೋಟ್ ಮತ್ತು ರಸುವಾ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಧ್ವಂಸಗೊಂಡಿದ್ದು, ನೇಪಾಳ ಸೇನೆಯು ಸದ್ಯ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದೆ. ಪ್ರವಾಹದ ನಡುವೆ ಜೀವ ಉಳಿಸಿಕೊಂಡ ಹಲವರು, ತಮ್ಮವರನ್ನು ಕಳೆದುಕೊಂಡ ನೋವಿನ ನಡುವೆಯು ಮರಳಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಹಸಿರು ಬಣ್ಣದ ಈ ಮನೆ ಪ್ರಕೃತಿಯ ಪ್ರವಾಹಕ್ಕೂ ಸವಾಲೆಸೆದು ಕೆಸರಿನ ನಡುವೆ ಶಾಂತವಾಗಿ ನಿಂತು ಕತೆ ಹೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...