Homeಅಂತರಾಷ್ಟ್ರೀಯನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

- Advertisement -
- Advertisement -

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ.

ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್-ಝೀ’ (Gen Z) ಚಳುವಳಿಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಓಲಿ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಈ ಪ್ರತಿಭಟನೆಯ ವೇಳೆ ಸುಮಾರು 76 ಜನರು ಸಾವನ್ನಪ್ಪಿದ್ದರು. ಪೊಲೀಸರು ಗುಂಡಿನ ದಾಳಿ ನಡೆಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು.

ಹಿಂಸಾಚಾರದ ಕುರಿತು ತನಿಖೆ ನಡೆಸಿದ ಸರ್ಕಾರದ ಸಮಿತಿಯು, ಓಲಿ ಅವರು ಸಾವು-ನೋವುಗಳನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಮತ್ತು ಕ್ರಿಮಿನಲ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ವರದಿ ನೀಡಿತ್ತು.

ಈ ವರದಿಯ ಆಧಾರದ ಮೇಲೆ ಅವರನ್ನು ವಿಚಾರಣೆಗೆ ಒಳಪಡಿಸಲು ನೂತನ ಸರ್ಕಾರ ನಿರ್ಧರಿಸಿದೆ.

ಪ್ರತಿಭಟನಾಕಾರರ ಸಾವಿಗೆ ಸಂಬಂಧಿಸಿದಂತೆ ಓಲಿ ಅವರ ಮೇಲೆ ‘ಅಪರಾಧಯುತ ನರಹತ್ಯೆ’ (Culpable Homicide) ಪ್ರಕರಣವನ್ನು ದಾಖಲಿಸಲಾಗಿದೆ.

ಓಲಿ ಅವರ ಜೊತೆಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನೂ ಸಹ ಭಕ್ತಪುರದಲ್ಲಿರುವ ಮನೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ಓಲಿ ಸರ್ಕಾರದ ಕೆಡವಿದ ಜೆನ್-ಝೀಗಳು

2025ರಲ್ಲಿ ಕೆ.ಪಿ. ಶರ್ಮಾ ಓಲಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಹಗರಣಗಳು ಮತ್ತು ಆಡಳಿತದ ವೈಫಲ್ಯದ ವಿರುದ್ಧ ಯುವಜನತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಘಟಿತರಾಗಿದ್ದರು.

ಟಿಕ್‌ಟಾಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಯುವಕರು “ನಮಗೆ ಬದಲಾವಣೆ ಬೇಕು” ಎಂಬ ಅಭಿಯಾನ ಆರಂಭಿಸಿದ್ದರು. ಇದು ಕೇವಲ ರಾಜಧಾನಿ ಕಠ್ಮಂಡು ಮಾತ್ರವಲ್ಲದೆ ಇಡೀ ನೇಪಾಳಕ್ಕೆ ಹರಡಿತ್ತು.

ಇದರಿಂದ ಎಚ್ಚೆತ್ತ ಸರ್ಕಾರ “ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತಿದೆ” ಎಂಬ ಕಾರಣ ನೀಡಿ ಟಿಕ್‌ಟಾಕ್ ಅನ್ನು ನಿಷೇಧಿಸಿತ್ತು. ಆದರೆ, ವಾಸ್ತವದಲ್ಲಿ ಯುವಜನತೆ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಈ ವೇದಿಕೆಯನ್ನು ಬಳಸುತ್ತಿದ್ದುದನ್ನು ತಡೆಯುವುದು ಸರ್ಕಾರದ ಉದ್ದೇಶವಾಗಿತ್ತು.

ಬಾಲೆನ್ ಶಾ ಅವರ ಬೆಂಬಲಿಗರು ಟಿಕ್‌ಟಾಕ್ ಮೂಲಕವೇ ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ಯೋಜಿಸುತ್ತಿದ್ದರು. ಇದನ್ನು ಹತ್ತಿಕ್ಕಲು ಸರ್ಕಾರ ಈ ಕ್ರಮ ಕೈಗೊಂಡಿತ್ತು.

ಈ ನಡುವೆ ಕಠ್ಮಂಡುವಿನ ಜನಪ್ರಿಯ ಮೇಯರ್ ಆಗಿದ್ದ ಬಾಲೇಂದ್ರ ಶಾ (ಬಾಲೆನ್ ಶಾ) ಅವರ ವಿರುದ್ಧ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಮತ್ತು ಅವರನ್ನು ಬಂಧಿಸಲು ಸಂಚು ರೂಪಿಸುತ್ತಿದೆ ಎಂಬ ಸುದ್ದಿ ಕೂಡ ಹರಡಿದ್ದು ಪ್ರತಿಭಟನೆಗೆ ಕಿಡಿ ಹಚ್ಚಿತ್ತು.

ಟಿಕ್‌ಟಾಕ್ ನಿಷೇಧವನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸಿದ ‘ಜೆನ್-ಝೀ’ ಯುವಜನತೆ “No TikTok, No Vote” ಮತ್ತು “ಬಾಲೆನ್ ಶಾ ಪರವಾಗಿರಿ” ಎಂಬ ಅಭಿಯಾನಗಳನ್ನು ಆರಂಭಿಸಿ ಬೀದಿಗಿಳಿದರು.

ಈ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಅಂತಿಮವಾಗಿ ಕೆ.ಪಿ. ಶರ್ಮಾ ಓಲಿ ಅವರ ರಾಜೀನಾಮೆಗೆ ಮತ್ತು ನೇಪಾಳದ ರಾಜಕೀಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...