Homeಅಂತರಾಷ್ಟ್ರೀಯನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

- Advertisement -
- Advertisement -

ನೇಪಾಳದ ಕಠ್ಮಂಡುವಿನಲ್ಲಿ ಶುಕ್ರವಾರ ನೇಪಾಳಿ ಭದ್ರತಾ ಪಡೆಗಳು ಮತ್ತು ದೇಶದ ಈ ಹಿಂದಿನ ರಾಜಪ್ರಭುತ್ವದ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 45 ಜನರು ಗಾಯಗೊಂಡಿದ್ದಾರೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ದೇಶದಲ್ಲಿ ಮತ್ತೆ ರಾಜಪ್ರಭುತ್ವವನ್ನು ಪುನಃಸ್ಥಾಪಿಸಬೇಕೆಂದು ಒತ್ತಾಯಿಸಿ ದೇಶದ ಮಾಜಿ ರಾಜ ಜ್ಞಾನೇಂದ್ರ ಶಾ ಅವರ ಬೆಂಬಲಿಗರು ಈ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನೇಪಾಳ

2008 ರಲ್ಲಿ ನೇಪಾಳದಲ್ಲಿ ರಾಜಪ್ರಭುತ್ವವನ್ನು ರದ್ದುಗೊಳಿಸಲಾಗಿತ್ತು. ಪ್ರತಿಭಟನೆಯ ಸಂದರ್ಭದಲ್ಲಿ ರಾಜಧಾನಿಯ ಟಿಂಕುನೆ ಪ್ರದೇಶದಲ್ಲಿ ಘರ್ಷಣೆಗಳು ಭುಗಿಲೆದ್ದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರತಿಭಟನಾಕಾರರು ನಿಷೇಧಾಜ್ಞೆಗಳನ್ನು ವಿಧಿಸಲಾಗಿದ್ದ ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ ಪೊಲೀಸರು ಜಲಫಿರಂಗಿಗಳನ್ನು ಬಳಸಿದರು ಮತ್ತು ಅಶ್ರುವಾಯು ಶೆಲ್‌ಗಳು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘರ್ಷಣೆಯಲ್ಲಿ ಹಲವಾರು ಕಟ್ಟಡಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು ಎಂದು ಪೊಲೀಸ್ ಉಪ ಮಹಾನಿರ್ದೇಶಕ ದಿನೇಶ್ ಕುಮಾರ್ ಆಚಾರ್ಯ ಹೇಳಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ. ಹಿಂಸಾಚಾರದಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬರನ್ನು ಕಠ್ಮಂಡುವಿನ 29 ವರ್ಷದ ಸಬಿನ್ ಮಹಾರ್ಜನ್ ಎಂದು ಗುರುತಿಸಲಾಗಿದೆ ಎಂದು ದೇಶದ ಗೃಹ ಸಚಿವಾಲಯ ತಿಳಿಸಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಮತ್ತೊಬ್ಬ ಮೃತನನ್ನು ಪ್ರತಿಭಟನೆಯನ್ನು ಚಿತ್ರೀಕರಿಸುತ್ತಿದ್ದ ಅವೆನ್ಯೂಸ್ ಟೆಲಿವಿಷನ್‌ನ ಛಾಯಾಗ್ರಾಹಕ ಸುರೇಶ್ ರಜಕ್ ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಸುಮಾರು ಅರ್ಧದಷ್ಟು ಜನರು ಪೊಲೀಸ್ ಸಿಬ್ಬಂದಿ ಎಂದು ಪಿಟಿಐ ವರದಿ ಮಾಡಿದೆ. ನೇಪಾಳ

ಹಿಂಸಾಚಾರದ ನಂತರ ಕಠ್ಮಂಡುವಿನಲ್ಲಿ ನೇಪಾಳಿ ಸೈನ್ಯವನ್ನು ನಿಯೋಜಿಸಲಾಗಿದೆ. ಕೋಟೆಶ್ವರ್ ಮತ್ತು ಟಿಂಕುನೆ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಜನರ ಸಂಚಾರವನ್ನು ನಿರ್ಬಂಧಿಸುವ ಮೂಲಕ ಜಿಲ್ಲಾಡಳಿತವು ಐದು ಗಂಟೆಗಳ ಕರ್ಫ್ಯೂ ವಿಧಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಇಂತಹ ಹಿಂಸಾಚಾರದ ಕೃತ್ಯಗಳಿಗೆ ಸಂಘಟಕರೇ ಜವಾಬ್ದಾರರು” ಎಂದು ದೇಶದ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪಿಟಿಐ ಉಲ್ಲೇಖಿಸಿದೆ. ಕಾನೂನನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಅಶಾಂತಿಯ ಬಗ್ಗೆ ಚರ್ಚಿಸಲು ಕ್ಯಾಬಿನೆಟ್‌ನ ತುರ್ತು ಸಭೆಯನ್ನು ಕರೆದಿದ್ದಾರೆ.

2008 ರಲ್ಲಿ, ನೇಪಾಳವು ತನ್ನ 240 ವರ್ಷಗಳಷ್ಟು ಹಳೆಯದಾದ ರಾಜಪ್ರಭುತ್ವವನ್ನು ರದ್ದುಗೊಳಿಸಿ ಜಾತ್ಯತೀತ, ಫೆಡರಲ್ ಮತ್ತು ಪ್ರಜಾಪ್ರಭುತ್ವ ಗಣರಾಜ್ಯವಾಗಿ ಪರಿವರ್ತನೆಗೊಂಡಿತು. ಫೆಬ್ರವರಿ 19 ರಂದು ಪ್ರಜಾಪ್ರಭುತ್ವ ದಿನದಂದು ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ಮಾಜಿ ರಾಜ ಜ್ಞಾನೇಂದ್ರ ಶಾ ರಾಜಪ್ರಭುತ್ವ ಮರುಸ್ಥಾಪನೆಗೆ ಸಾರ್ವಜನಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದರು. ಇದರ ನಂತರ, ಇತ್ತೀಚಿನ ವಾರಗಳಲ್ಲಿ ರಾಜಪ್ರಭುತ್ವದ ಪುನಃಸ್ಥಾಪನೆಗೆ ಹೊಸದಾಗಿ ಬೇಡಿಕೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರ

ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...